“ಮಕ್ಕಳ ಆಟ ಇನ್ ತೋಟ” ವಿಶೇಷ ಬೇಸಿಗೆ ಶಿಬಿರ

ಬೇಸಿಗೆ ಶಿಬಿರ ಮಕ್ಕಳಿಗೆ ಪ್ರಕೃತಿಯ ಪಾಠಶಾಲೆ – ಡಾ.ಎಸ್.ವಿ.ಸುರೇಶ
BENGALURU : ಬೇಸಿಗೆ  ಶಿಬಿರವು ಮಕ್ಕಳಿಗೆ ಪ್ರಕೃತಿಯ ಪಾಠಶಾಲೆಯಾಗಿದೆ. ವಿವಿಧ ಗಿಡಗಳು, ಹಣ್ಣುಗಳು ಹಾಗೂ ಪಕ್ಷಿಗಳನ್ನು ಕಂಡು ಮಕ್ಕಳು ಹೊಸ ವಿಚಾರಗಳನ್ನು ಕಲಿತಿದ್ದಾರೆ. ಈ ರೀತಿಯ ಬೇಸಿಗೆ ಶಿಬಿರಗಳು (Summer Camps) ಮಕ್ಕಳಿಗೆ ಪಠ್ಯಪುಸ್ತಕದ ಹೊರಗಿನ ಬದುಕಿನ ಪಾಠಗಳನ್ನು ಕಲಿಸುವ ನೈಜ ಅನುಭವದ ಶಾಲೆಯಾಗಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ (GKVK) ಗೌರವಾನ್ವಿತ ಕುಲಪತಿಗಳಾದ ಡಾ. ಎಸ್.ವಿ. ಸುರೇಶ (Dr.SV Suresh) ಅವರು ತಿಳಿಸಿದರು.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಮಕ್ಕಳ ಕಲಿಕೆಯ ಅಂಗವಾಗಿ ಮೇ 18 ರಿಂದ 22 ರವರೆಗೆ  5 ದಿನಗಳ ಕಾಲ ಆಯೋಜಿಸಲಾಗಿದ್ದ “ಮಕ್ಕಳ ಆಟ ಇನ್ ತೋಟ” ಗಿಡ, ಮರ, ಕೀಟ, ಚಿಟ್ಟೆಗಳ ಜೊತೆ ಒಂದು ವಾರ ಎಂಬ ಶೀರ್ಷಿಕೆಯಡಿಯ ವಿಶೇಷ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಈ ವಿಶೇಷ ಕಾರ್ಯಕ್ರಮದಲ್ಲಿ ತೋಟದಲ್ಲಿ ಮಕ್ಕಳ ಆಟವು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ, ಪ್ರಕೃತಿಯೊಂದಿಗೆ ಬೆರೆಯುವ ಅದ್ಭುತ ಅನುಭವವನ್ನು ನೀಡಿತು. ಹಸಿರು ವಾತಾವರಣದಲ್ಲಿ ಗಿಡ, ಮರಗಳು, ಬಣ್ಣ ಬಣ್ಣದ ಚಿಟ್ಟೆಗಳು ಹಾಗೂ ವಿವಿಧ ಕೀಟಗಳೊಂದಿಗೆ ಬೆರೆಯುವ ಮೂಲಕ ಮಕ್ಕಳು ಪ್ರಕೃತಿಯ ಸೌಂದರ್ಯವನ್ನು ಹತ್ತಿರದಿಂದ ಆಸ್ವಾದಿಸಿದರು. ಶಿಬಿರದ ಅವಧಿಯಲ್ಲಿ ಮಕ್ಕಳಿಗೆ ತೋಟದಲ್ಲಿ ಓಡಾಟ, ಗಿಡ ನೆಡುವುದು, ಗಿಡಗಳಿಗೆ ನೀರು ಹಾಕುವುದು, ಸಸ್ಯಗಳ ಆರೈಕೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.

ಶಿಬಿರದ ಕೊನೆಯ ದಿನವಾದ ಇಂದು ಮಕ್ಕಳು ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದ ತೋಟದಲ್ಲಿನ ಹೂ, ಹಣ್ಣು, ಸುಗಂಧದ್ರವ್ಯ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ತಮಗಿರುವ ಜ್ಞಾನವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಪರಿಸರ ಮಾಲಿನ್ಯ, ಪರಿಸರದ ಅಸಮತೋಲನ ಮತ್ತು ಪ್ರಕೃತಿ ಸಂರಕ್ಷಣೆಯ ಅಗತ್ಯತೆಯನ್ನು ಸರಳವಾಗಿ ಬಿಂಬಿಸುವ, ಪ್ಲಾಸ್ಟಿಕ್ ನಿವಾರಣೆಯಂತಹ ಜಾಗೃತಿ ಮೂಡಿಸುವ ಹಾಗೂ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿಸುವ ಸಂದೇಶವುಳ್ಳ ಅದ್ಭುತ ಮೂಕಾಭಿನಯವನ್ನು ಮಕ್ಕಳು ಪ್ರದರ್ಶಿಸಿದರು. ಈ ಶಿಬಿರದಲ್ಲಿ ಒಟ್ಟು 70 ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಸ್ತರಣಾ ನಿರ್ದೇಶಕರಾದ ಡಾ: ವೈ.ಎನ್. ಶಿವಲಿಂಗಯ್ಯ ಮತ್ತು ಸಹ ವಿಸ್ತರಣಾ ನಿರ್ದೇಶಕರಾದ ಡಾ: ಕೆ.ಪಿ. ರಘುಪ್ರಸಾದ್, ಡಾ: ಸಿ.ಕೆ. ಪ್ರಮಿಳ, ಡಾ: ಪ್ರಹ್ಲಾದ್ ಪಿ ಭಟ್ ಮತ್ತು ಡಾ: ಕೆ. ಪಲ್ಲವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles