AKBMS congratulates DK Shivakumar: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ಗೆ ಅಭಿನಂದನೆ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಗೌರವಾನ್ವಿತ ಶ್ರೀ ಡಿ. ಕೆ. ಶಿವಕುಮಾರ್ ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀ ಎಸ್. ರಘುನಾಥ್ ಅವರು ಖುದ್ದಾಗಿ ಭೇಟಿ ಮಾಡಿ ಅಭಿನಂದನೆ ಹಾಗೂ ಶುಭಾಶಯಗಳನ್ನು ಸಲ್ಲಿಸಿದರು (AKBMS congratulate DK Shivakumar).

ಬುಧವಾರ ಸಂಜೆ ನಡೆದ ಈ ಭೇಟಿಯಲ್ಲಿ ಮಹಾಸಭಾದ ಎಲ್ಲಾ ಪದಾಧಿಕಾರಿಗಳ ಪರವಾಗಿ ಮುಖ್ಯಮಂತ್ರಿ ಅವರಿಗೆ ಶುಭಾಶಯಗಳನ್ನು ತಿಳಿಸಲಾಯಿತು. ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕಾಗಿ ತಮ್ಮ ದೀರ್ಘ ರಾಜಕೀಯ ಅನುಭವ ಹಾಗೂ ನಾಯಕತ್ವದ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸುವ ಮೂಲಕ ಜನರ ನಿರೀಕ್ಷೆಗಳನ್ನು ಈಡೇರಿಸುವ ವಿಶ್ವಾಸವನ್ನು ಮಹಾಸಭಾ ವ್ಯಕ್ತಪಡಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರಾದ ಶ್ರೀ ಎಸ್. ರಘುನಾಥ್ ಅವರು, ಸುಮಾರು ನಾಲ್ಕು ದಶಕಗಳ ರಾಜಕೀಯ ಪರಿಶ್ರಮ ಮತ್ತು ಅನುಭವದ ಫಲವಾಗಿ ರಾಜ್ಯದ ಆಡಳಿತದ ಜವಾಬ್ದಾರಿ ಶ್ರೀ ಡಿ. ಕೆ. ಶಿವಕುಮಾರ್ ಅವರಿಗೆ ಲಭಿಸಿದೆ ಎಂದು ತಿಳಿಸಿದರು. ಪ್ರೀತಿ, ಕರುಣೆ, ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಆಡಳಿತದ ಮೂಲಕ ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡುತ್ತಾ ಯಶಸ್ವಿ ಮುಖ್ಯಮಂತ್ರಿಗಳಾಗಿ ಹೊರಹೊಮ್ಮುವಂತೆ ಹಾರೈಸಿದರು.

ಇದೇ ವೇಳೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪರವಾಗಿ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರವನ್ನೂ ಸಲ್ಲಿಸಲಾಯಿತು. ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆಯಲಿದೆ ಎಂಬ ನಿರೀಕ್ಷೆಯನ್ನು ಮಹಾಸಭಾ ವ್ಯಕ್ತಪಡಿಸಿತು.

ಈ ಕುರಿತು ಮಾಹಿತಿ ನೀಡಿದ ಎ. ದಿಲೀಪ್ ಕುಮಾರ್, ಉಪಾಧ್ಯಕ್ಷರು – ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ರಾಜ್ಯಾಧ್ಯಕ್ಷರು – ವಿಶ್ವ ಬ್ರಾಹ್ಮಣ ಸಂಘ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಜನತೆ ಮತ್ತು ವಿವಿಧ ಸಮುದಾಯಗಳ ಆಶೋತ್ತರಗಳಿಗೆ ಸ್ಪಂದಿಸುವ ಜನಪರ ಆಡಳಿತವನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ನೀಡುವರೆಂಬ ನಿರೀಕ್ಷೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವ್ಯಕ್ತಪಡಿಸಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles