ಪರಿಸರ ಸಂರಕ್ಷಣೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಐತಿಹಾಸಿಕ ಸಾಧನೆ: ಡಾ. ಶಾಲಿನಿ ರಜನೀಶ್

2026ರ ವಿಶ್ವ ಪರಿಸರ ದಿನಾಚರಣೆಯನ್ನು  “Inspired by Nature. For Climate. For Our Future” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIAL) ಪರಿಸರ ಸುಸ್ಥಿರತೆ ಕ್ರಮಗಳ ದೇಶಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ (Shalini Rajanish) ಅವರು ಶ್ಲಾಘಿಸಿದ್ದಾರೆ.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೈಗೊಳ್ಳಲಾಗಿರುವ ಜಲ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಯ ಯಶೋಗಾಥೆಯು ದೇಶಕ್ಕೇ ಮಾದರಿಯಾಗಿದೆ ಎಂದು ಅವರು ಪ್ರಶಂಸಿಸಿದ್ದಾರೆ.

Bangalore International Airport Ltd. ತನ್ನ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ 3P – People  (ಜನರು), Planet (ಭೂಮಿ) ಮತ್ತು Profit (ಲಾಭ) ಎಂಬ ಸಮತೋಲಿತ ವಿಧಾನವನ್ನು ಅಳವಡಿಸಿಕೊಂಡು ಜವಾಬ್ದಾರಿಯುತ ಬೆಳವಣಿಗೆಯನ್ನು ಸಾಧಿಸಿರುವುದು ದೇಶಕ್ಕೆ ಹೆಮ್ಮೆ ತಂದಿದೆ.

ಪರಿಸರ ಸುಸ್ಥಿರತೆಯ ಪ್ರಮುಖ ಮೈಲಿಗಲ್ಲುಗಳು:
ಜಲ ಸಂರಕ್ಷಣೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 2.36 ರ ಜಲ ಧನಾತ್ಮಕ ಸೂಚ್ಯಂಕವನ್ನು ಸಾಧಿಸಿದೆ. ಅಂದರೆ, ತಾನು ಬಳಸುವ ನೀರಿಗಿಂತ ಎರಡು ಪಟ್ಟು ಹೆಚ್ಚು ನೀರನ್ನು ಮರುಪೂರೈಸುತ್ತಿದೆ. ಸದ್ಯ ವಿಮಾನ ನಿಲ್ದಾಣವು ತನ್ನ ಕುಡಿಯುವ ನೀರಿನ ಅಗತ್ಯತೆಯ ಸುಮಾರು ಮೂರರಲ್ಲಿ ಎರಡು ಭಾಗವನ್ನು (2/3rd) ಆಂತರಿಕ ಮಳೆನೀರು ಸಂಗ್ರಹ ವ್ಯವಸ್ಥೆಯ ಮೂಲಕವೇ ಪೂರೈಸಿಕೊಳ್ಳುತ್ತಿದೆ.
ಏಷ್ಯಾದಲ್ಲೇ ಮೊದಲು – ನೆಟ್ ಝೀರೋ ಕಾರ್ಬನ್:
ಏಷ್ಯಾದಲ್ಲಿಯೇ ಮೊದಲ ಬಾರಿಗೆ ನೆಟ್ ಝೀರೋ ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಸಾಧಿಸಿದ ಹೆಗ್ಗಳಿಕೆಗೆ ಬೆಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ. 2030 ರ ಗುರಿಗಿಂತ ಏಳು ವರ್ಷ ಮುಂಚಿತವಾಗಿಯೇ ತನ್ನ ಹೊರಸೂಸುವಿಕೆಯಲ್ಲಿ ಶೇ. 95.6 ರಷ್ಟು ಕಡಿತವನ್ನು ದಾಖಲಿಸಿದೆ. ಇದಲ್ಲದೆ,Airports Council International (ACI) ನಿಂದ ಅತ್ಯುನ್ನತ “Level 5 Carbon Accreditation” ಮಾನ್ಯತೆಯನ್ನು ಪಡೆದಿದೆ.

Level 5 Carbon Accreditation

ಜೀವವೈವಿಧ್ಯ ಮತ್ತು ಶೂನ್ಯ ಘನತ್ಯಾಜ್ಯ:
ಭಾರತದಲ್ಲೇ ಮೊದಲ ಬಾರಿಗೆ ‘Taskforce on Nature-related Financial Disclosures (TNFD)’ ಅನ್ನು ಅಳವಡಿಸಿಕೊಂಡಿರುವ ಈ ವಿಮಾನ ನಿಲ್ದಾಣವು 5.18 ರ ಜೀವವೈವಿಧ್ಯ ಸೂಚ್ಯಂಕವನ್ನು ಹೊಂದಿದೆ. ತನ್ನದೇ ಆದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರದ ಮೂಲಕ ಲ್ಯಾಂಡ್‍ಫಿಲ್‍ಗೆ ಶೂನ್ಯ ತ್ಯಾಜ್ಯ (Zero Waste to Landfill) ಗುರಿಯನ್ನು ತಲುಪಿದೆ. ಇಂತಹ ವೈಜ್ಞಾನಿಕ ಮತ್ತು ಸುಸ್ಥಿರ ಮಾದರಿಗಳನ್ನು ಇತರ ಸಂಸ್ಥೆಗಳೂ ಅಳವಡಿಸಿಕೊಂಡರೆ ದೇಶ ಹಾಗೂ ರಾಜ್ಯದಲ್ಲಿ ನೀರು, ವಿದ್ಯುತ್ ಕೊರತೆಯನ್ನು ನೀಗಿಸಬಹುದು ಮತ್ತು ಜೀವವೈವಿಧ್ಯತೆಯನ್ನು ಕಾಪಾಡಬಹುದು ಎಂದು ಮುಖ್ಯಕಾರ್ಯದರ್ಶಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles