ಬೆಂಗಳೂರು: ರಾಜ್ಯದ ರೈತರ ಹಿತದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ (PMFBY) ಮುಂಗಾರು (ಖಾರಿಫ್) 2026ರ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿವಿಧ ಅನುಬಂಧಗಳನ್ನು ಬಿಡುಗಡೆ ಮಾಡಲಾಗಿದೆ. ಯೋಜನೆ ಅನುμÁ್ಠನದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ಹಾಗೂ ಬ್ಯಾಂಕಿಂಗ್ ವಲಯಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ತೋಟಗಾರಿಕೆ ಇಲಾಖೆ: ಮುಂಗಾರು 2026ರ PMFBY ಅಧಿಸೂಚನೆಯ ಸಂಪೂರ್ಣ ವಿವರಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ತೋಟಗಾರಿಕೆ ಉಪ ನಿರ್ದೇಶಕರಿಗೆ ತಕ್ಷಣವೇ ತಲುಪಿಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಬ್ಯಾಂಕಿಂಗ್ ವಲಯ (ಎಸ್ಎಲ್ಬಿಸಿ ಮತ್ತು ಅಪೆಕ್ಸ್ ಬ್ಯಾಂಕ್): ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿ (ಎಸ್ಎಲ್ಬಿಸಿ) ಮತ್ತು ಅಪೆಕ್ಸ್ ಬ್ಯಾಂಕ್ಗಳು ಈ ಅಧಿಸೂಚನೆಯ ವಿವರಗಳನ್ನು ರಾಜ್ಯದ ಎಲ್ಲಾ ಲೀಡ್ ಬ್ಯಾಂಕ್ಗಳು, ನೋಡಲ್ ಬ್ಯಾಂಕ್ಗಳು, ಸಹಕಾರ ಬ್ಯಾಂಕ್ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಿಗೆ (ಆರ್ಆರ್ಬಿ) ಕಡ್ಡಾಯವಾಗಿ ಹಂಚಿಕೊಳ್ಳಬೇಕು. ಇದರಿಂದ ರೈತರಿಗೆ ಬ್ಯಾಂಕ್ ಮಟ್ಟದಲ್ಲಿ ವಿಮಾ ಸೌಲಭ್ಯ ಒದಗಿಸಲು ಸುಲಭವಾಗಲಿದೆ.
ಕೃಷಿ ಇಲಾಖೆ: ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು ತಮ್ಮ ವ್ಯಾಪ್ತಿಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಬೇಕು ಮತ್ತು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು.

