ಹೆಬ್ಬಾಳ ಜಂಕ್ಷನ್‌- ಯುಎಎಸ್ ಕ್ವಾರ್ಟರ್ಸ್ ಸುರಂಗ ಮಾರ್ಗಕ್ಕೆ 28-6-2026 ಭಾನುವಾರ ಭೂಮಿಪೂಜೆ

ಬೆಂಗಳೂರು: ಜೂ. 27 ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಬ್ಬಾಳ ಜಂಕ್ಷನ್ (Hebbal Junction) ನಿಂದ ಯುಎಎಸ್ ಕ್ವಾರ್ಟರ್ಸ್ (UAS Quarters) ವರೆಗಿನ ಸುರಂಗ ರಸ್ತೆ ನಿರ್ಮಾಣಕ್ಕೆ (Construction of tunnel road) ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ (DK Shivakumar) ಅವರು ಭಾನುವಾರ ಭೂಮಿಪೂಜೆ ನೆರವೇರಿಸಲಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಹೆಬ್ಬಾಳ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ವಿಚಾರ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ 9.30 ಕ್ಕೆ ಹೆಬ್ಬಾಳ ಜಂಕ್ಷನ್ ನಲ್ಲಿ ಮುಖ್ಯಮಂತ್ರಿಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮೇಕ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್ ವರೆಗೆ ಸಾಕಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಇದರಿಂದ ವಿಮಾನ ನಿಲ್ದಾಣ ಸೇರಿದಂತೆ ಇತರೆಡೆಗೆ ಹೋಗುವುದು ಕಷ್ಟವಾಗುತ್ತಿತ್ತು.
ಈ ಸಮಸ್ಯೆ ನಿವಾರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುರಂಗ ರಸ್ತೆ ನಿರ್ಮಾಣಕ್ಕೆ ನಿರ್ಧರಿಸಿದೆ ಎಂದರು.
ವಿಶೇಷತೆಗಳು
ಸುರ0ಗ ರಸ್ತೆಯ ಉದ್ದ : 2.228 ಕಿಲೋಮೀಟರ್
ಹೆಬ್ಬಾಳ ಜಂಕ್ಷನ್ ನಿಂದ ಯುಎಎಸ್ ಸಿಬ್ಬಂದಿ ಕ್ವಾರ್ಟರ್ಸ್ ವರೆಗೆ.
ಆಳ; ಸುಮಾರು 60 ಅಡಿ
6 ಪಥದ ರಸ್ತೆ
ತಲಾ ಒಂದು ಮಾರ್ಗ ತಲಾ 3.5 ಮೀಟರ್ ಅಗಲ
ಒಟ್ಟು ಅಂದಾಜು ವೆಚ್ಚ: 1139 ಕೋಟಿ ರುಪಾಯಿ
18 ತಿಂಗಳಲ್ಲಿ ಕಾಮಗಾರಿ ಪೂರ್ಣ
ಯಾವುದೇ ಖಾಸಗಿ ಜಾಗದ ಸ್ವಾಧೀನವಿಲ್ಲ
*ನಾಗರಿಕರಿಗೆ ಉಪಯೋಗ*
ಕಟ್ಟುನಿಟ್ಟಾಗಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸು ವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಬೈರತಿ ಸುರೇಶ್ ತಿಳಿಸಿದರು.ವಿರೋಧ ಮಾಡಲೆಂದೇ ವಿರೋಧ ಪಕ್ಷದವರು ವಿರೋಧಿಸುತ್ತಾರೆ. ಆದರೆ, ಲಕ್ಷಾಂತರ ಜನರ ಉಪಯೋಗಕ್ಕಾಗಿ ಈ ಯೋಜನೆ ಜಾರಿಗೆ ತರುತ್ತಿದ್ದೇವೆ ಎಂದರು.
ಹೊರೆಯಾಗದ0ತೆ ಬಸ್ ಪ್ರಯಾಣ ದರ ಏರಿಕೆ
ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರಗಳು ಹೆಚ್ಚಾಗುತ್ತಿವೆ. ಎಲ್ಲಾ ಸಾರಿಗೆ ನಿಗಮಗಳಿಗೆ ಸುಮಾರು 5 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದರೆ, ಸರ್ಕಾರಕ್ಕೆ ಇಲಾಖೆಯಿಂದ ಇದುವರೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದರು.
ಮುಂದಿನ ಸಂಪುಟ ಸಭೆಗಳಲ್ಲಿ ಈ ಬಗ್ಗೆ ಪ್ರಸ್ತಾವನೆ ಮಂಡಿಸಲಾಗುತ್ತದೆ. ಮುಖ್ಯಮಂತ್ರಿಗಳು ಮತ್ತು ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಆದಾಗ್ಯೂ, ಜನ ಸಾಮಾನ್ಯರಿಗೆ ಹೊರೆ ಆಗದ ರೀತಿಯಲ್ಲಿ ಪ್ರಯಾಣ ದರ ಹೆಚ್ಚಳ ಮಾಡುವ ಚರ್ಚೆಗಳು ನಡೆದಿವೆ ಎಂದು ಅವರು ಸ್ಪಷ್ಟಪಡಿಸಿದರು.

 

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles