ಹಾಸನ ಟೈಮ್ಸ್ ಪಿಯು ಕಾಲೇಜಿನಲ್ಲಿ ಗೊರೂರರ ಬದುಕು ಮತ್ತು ಬರಹಗಳಲ್ಲಿ ಗಾಂಧಿ ಮತ್ತು ಗ್ರಾಮ ವಿಷಯದ ವಿಶೇಷ ಉಪನ್ಯಾಸ(Lecture)
ಹಾಸನ: ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ ಮತ್ತು ಟೈಮ್ಸ್ ಪಿಯು ಕಾಲೇಜು(Times PU College) ಸತ್ಯಮಂಗಲ ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಜನ್ಮದಿನದ(Birthday) ಅಂಗವಾಗಿ ಡಾ. ಗೊರೂರರ ಬದುಕು ಮತ್ತು ಬರಹಗಳಲ್ಲಿ ಗಾಂಧಿ ಮತ್ತು ಗ್ರಾಮ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜುಲೈ 7ರಂದು ಶನಿವಾರ ಮದ್ಯಾಹ್ನ 2 ಗಂಟೆಗೆ ಟೈಮ್ಸ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ನಿವೃತ್ತ(Retired) ಆಂಗ್ಲ ಭಾಷಾ ಉಪನ್ಯಾಸಕರಾದ ಗೊರೂರು ಶಿವೇಶ್ ಮುಖ್ಯ ಉಪನ್ಯಾಸ ನೀಡಲಿದ್ದು ಟೈಮ್ಸ್ ಪಿಯು ಕಾಲೇಜಿನ ಅಧ್ಯಕ್ಷರು ಶ್ರೀ ಎ.ಬಿ. ಸುರೇಂದ್ರಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಪುತ್ರಿ ವಸಂತಮೂರ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಪ್ರಾಧ್ಯಾಪಕರಾದ ಡಾ.ಕುಶಾಲ ಬರಗೂರು, ಸಾಹಿತಿ ಶ್ರೀ ಗೊರೂರು ಅನಂತರಾಜು, ಕದಂಬ ಸೈನ್ಯ ಕನ್ನಡ ಸಂಘಟನೆಯ ಹಾಸನ ಜಿಲ್ಲಾಧ್ಯಕ್ಷರು, ನಿವೃತ್ತ ಪ್ರಾಂಶುಪಾಲರು ಶ್ರೀ ಎ.ಹೆಚ್.ಗಣೇಶ್ ಅಂಕಪುರ, ಚಿತ್ರ ಕಲಾವಿದರು ಸಂಯೋಜಕರು ಬಿ.ಎಸ್.ದೇಸಾಯಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಭಾಗವಹಿಸುವಂತೆ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
