ಕಂಪ್ಲಿ: (Kampli) ‘ಬಿಜೆಪಿಯ ಪಾದಯಾತ್ರೆ- ಇದು ಜನಮನ ಪಾದಯಾತ್ರೆ’ (BJP Padayatra) ಹಾಡಿನ ಜೊತೆಗೆ ವಿವಿಧ ಹಾಡಿನೊಂದಿಗೆ ಇಂದು ಇಲ್ಲಿಂದ ಬಳ್ಳಾರಿ (Bellary) ಪಾದಯಾತ್ರೆ ಮುಂದೆ ಸಾಗಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರೆಯುತ್ತಿದೆ. ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಖಂಡಿಸಿ ಇಂದಿನ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು, ರೈತರು, ಮಹಿಳೆಯರು ಸೇರಿ ಜನತೆಯೊಂದಿಗೆ ಈ ಕಾಲ್ನಡಿಗೆಯು ಮುಂದೆ ಸಾಗುತ್ತಿದೆ.
ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಗಾಲಿ ಜನಾರ್ಧನ ರೆಡ್ಡಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸಿದ್ದು ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯ್ಕ್, ವೈ.ಎಂ. ಸತೀಶ್, ರಘು ಕೌಟಿಲ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಮಾಜಿ ಸಚಿವ ಶಿವನಗೌಡ ನಾಯಕ, ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ, ಬಸವರಾಜ್ ದಡೆಸೂಗೂರು, ಹಾಲಪ್ಪ ಆಚಾರ್, ಮುಖಂಡರಾದ ಕಂಪ್ಲಿ ಸುರೇಶ ಬಾಬು, ಶ್ರೀಮತಿ ಅರುಣಾ ಜನಾರ್ಧನ ರೆಡ್ಡಿ, ಡಾ. ಬಸವರಾಜ್ ಕ್ಯಾವಟರ್, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು ಭಾಗವಹಿಸುವ ನಿರೀಕ್ಷೆ ಇದೆ.

