15 ವಾರಗಳ ಜೂ ಕ್ಲಬ್ ಆಯೋಜನೆ

ಬೆಂಗಳೂರು: ಬನ್ನೇರುಘಟ್ಟ(Bannerghatta) ಜೈವಿಕ ಉದ್ಯಾನವನದಲ್ಲಿ ಪ್ರಕೃತಿ, ವನ್ಯಜೀವಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ವನ್ಯಜೀವಿ ಹಾಗೂ ಪ್ರಕೃತಿಯ ಸಂರಕ್ಷಣೆಗಾಗಿ ಕೆಲಸ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸಲು ‘ಜೂ ಕ್ಲಬ್’(Zoo Club) ನ್ನು ಆಯೋಜಿಸುತ್ತಿದೆ. ವನಸಿರಿ(Vanasiri) ಮತ್ತು ವನ್ಯಜೀವಿ ಸಂಕುಲನಗಳನ್ನು(Vanyajeevi Sankulana) ಸಂರಕ್ಷಿಸಲು ಯುವ ಮನಸ್ಸನ್ನು ಪ್ರೇರೇಪಿಸುವ ಉದ್ದೇಶದಿಂದ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದು 15 ವಾರಗಳ ಕಾರ್ಯಕ್ರಮವಾಗಿದ್ದು, 4 ನೇ ಅಕ್ಟೋಬರ್, 2026 ರಿಂದ ಭಾನುವಾರದಂದು ನಡೆಸಲಾಗುತ್ತದೆ. ಕಾರ್ಯಕ್ರಮವು ಪ್ರತಿ ಭಾನುವಾರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಇರುತ್ತದೆ. ಸದರಿ ಕಾರ್ಯಕ್ರಮದಲ್ಲಿ 10 ರಿಂದ 18 ವರ್ಷ ಪ್ರಾಯದ ಮಕ್ಕಳು ಭಾಗವಹಿಸಬಹುದಾಗಿರುತ್ತದೆ.

ಈ ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಣೆ, ನಿರ್ವಹಣೆ, ಪೋಷಣೆ, ನಡವಳಿಕೆ, ಜಾಗೃತಿ ಮೊದಲಾದವುಗಳ ಬಗ್ಗೆ ತಿಳಿಸಿಕೊಡಲಾಗುವುದು ಹಾಗೂ ಕ್ಷೇತ್ರ ಭೇಟಿಗಳನ್ನು ಒಳಗೊಂಡಿರುತ್ತದೆ. ಅಲ್ಲದೇ ಈ ವಿಷಯದಲ್ಲಿ ತಜ್ಞರೊಂದಿಗೆ ಸಮಾಲೋಚನೆ ಹಾಗೂ ಚರ್ಚೆ ನಡೆಸಲು ಅವಕಾಶ ಮಾಡಿಕೊಡಲಾಗುವುದು.

ಆಸಕ್ತರು 2026 ರ ಅಕ್ಟೋಬರ್ 01 ರ ಒಳಗೆ https://bannerughattabiopark.org/education.html  ವೆಬ್‍ಸೈಟ್ ಲಭ್ಯವಿರುವ ಅರ್ಜಿಯ ಮೂಲಕ ನೋಂದಾಯಿಸಿಕೊಳ್ಳಬಹುದು. ನೋಂದಣಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ದಾಖಲೆಗಳು, ಜೂ ಕ್ಲಬ್ ಶುಲ್ಕ ಹಾಗೂ ಅವಶ್ಯ ಹೆಚ್ಚಿನ ವಿವರಗಳೊಂದಿಗೆ ದೃಡೀಕರಣ ಇಮೇಲ್‍ನ್ನು ಕಳುಹಿಸಲಾಗುವುದು.

ಸದರಿ ಕಾರ್ಯಕ್ರಮದಲ್ಲಿ ಗರಿಷ್ಠ 60 ವಿದ್ಯಾರ್ಥಿಗಳನ್ನು ಪರಿಗಣಿಸಲಾಗುತ್ತಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ನೋಂದಣಿ ಶುಲ್ಕ ರೂ. 1000/- ಆಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಯಾವುದೇ ನೊಂದಣಿ ಶುಲ್ಕವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’

Hot this week

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂ ಟರ್ನ್ ಸರ್ಕಾರ ಬೆಂಗಳೂರು: ಆಧುನಿಕ...

ಪರವಾನಗಿ ಇಲ್ಲದ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 01 ರೊಳಗೆ ಸರ್ಕಾರಕ್ಕೆ ಒಪ್ಪಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಜನತೆ ಪರವಾನಗಿ ಇಲ್ಲದೆ ತಮ್ಮಲ್ಲಿ ಅಕ್ರಮವಾಗಿಟ್ಟುಕೊಂಡಿರುವ ಬಂದೂಕು ಶಸ್ತ್ರಾಸ್ತ್ರಗಳನ್ನು(Firearms...

ಯಕ್ಷಗಾನ ಪರಂಪರೆಯ ಸಂರಕ್ಷಣೆಗೆ ಡಿಜಿಟಲ್‌ ಆರ್ಕೈವ್ಸ್‌ ಸ್ಥಾಪಿಸಿ: ಬಿಳಿಮಲೆ ಒತ್ತಾಯ

ಕರಾವಳಿ (Karavali) ಕರ್ನಾಟಕದ ಸಾಂಸ್ಕೃತಿಕ (Cultural) ಅಸ್ಮಿತೆಯ ಪತ್ರೀಕವಾಗಿರುವ ಯಕ್ಷಗಾನ (Yakshagana)...

Topics

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ: ಆರ್. ಅಶೋಕ್ ವ್ಯಂಗ್ಯ

ರಿಯಲ್ ಎಸ್ಟೇಟ್ ಏಜೆಂಟ್ ಸಿಎಂ ಡಿಕೆಶಿ, ಯೂ ಟರ್ನ್ ಸರ್ಕಾರ ಬೆಂಗಳೂರು: ಆಧುನಿಕ...

ಪರವಾನಗಿ ಇಲ್ಲದ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 01 ರೊಳಗೆ ಸರ್ಕಾರಕ್ಕೆ ಒಪ್ಪಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಜನತೆ ಪರವಾನಗಿ ಇಲ್ಲದೆ ತಮ್ಮಲ್ಲಿ ಅಕ್ರಮವಾಗಿಟ್ಟುಕೊಂಡಿರುವ ಬಂದೂಕು ಶಸ್ತ್ರಾಸ್ತ್ರಗಳನ್ನು(Firearms...

ಯಕ್ಷಗಾನ ಪರಂಪರೆಯ ಸಂರಕ್ಷಣೆಗೆ ಡಿಜಿಟಲ್‌ ಆರ್ಕೈವ್ಸ್‌ ಸ್ಥಾಪಿಸಿ: ಬಿಳಿಮಲೆ ಒತ್ತಾಯ

ಕರಾವಳಿ (Karavali) ಕರ್ನಾಟಕದ ಸಾಂಸ್ಕೃತಿಕ (Cultural) ಅಸ್ಮಿತೆಯ ಪತ್ರೀಕವಾಗಿರುವ ಯಕ್ಷಗಾನ (Yakshagana)...

ಹಿರಿಯ ನಾಗರಿಕರು, ವಿಕಲಚೇತನರು, ಅನಿವಾಸಿ ಮತದಾರರ ನೋಟೀಸ್ ವಿಲೇವಾರಿಗೆ ಅವಕಾಶ: ಚುನಾವಣಾ ಆಯೋಗ

ಬೆಂಗಳೂರು: ಹಿರಿಯ ನಾಗರಿಕರು, ವಿಕಲಚೇತನರು (PWD), ಅನಾರೋಗ್ಯ ಪೀಡಿತರು ಹಾಗೂ ಅನಿವಾಸಿ...

ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’

ಬೆಂಗಳೂರು: ಕರ್ನಾಟಕ ಸರ್ಕಾರದ(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ...

Related Articles