ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ,
01 ದ್ವಿ-ಚಕ್ರ ವಾಹನ ವಶ, ಮೌಲ್ಯ ₹ 02 ಲಕ್ಷ.
ಮಡಿವಾಳ (Madiwala Station) ಪೊಲೀಸ್ ಠಾಣಾ ಸರಹದ್ದಿನ ಬಿ.ಟಿ.ಎಂ 1ನೇ ಹಂತದ (BTM 1st Stage) ಮಾರುತಿನಗರದ ಪಿ.ಜಿಯೊಂದರಲ್ಲಿ ವಾಸವಿರುವರು, ಠಾಣೆಯಲ್ಲಿ ದೂರನ್ನು ಸಲ್ಲಿಸಿದ್ದು, 22/08/2026ರ ರಾತ್ರಿ ದ್ವಿಚಕ್ರ ವಾಹನ ವಾಸವಿರುವ ಪಿ.ಜಿ.ಯ. ಹತ್ತಿರ ಹ್ಯಾಂಡಲ್ ಲಾಕ್ ಮಾಡಿ ನಿಲ್ಲಿಸಿದ್ದ ವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ವಾಹನ ಕಳವು (Vehicle Theft) ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿ ಕಲೆಹಾಕಿ, 2/09/2026 ರಂದು ಠಾಣಾ ಸರಹದ್ದಿನ ಮಾರುತಿನಗರ 3ನೇ ಕ್ರಾಸ್ ಹತ್ತಿರ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಆರೋಪಿಯ ವಶದಿಂದ 01 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಮೌಲ್ಯ ₹ 2,00,000/- (ಎರಡು ಲಕ್ಷ ರೂಪಾಯಿ). ಈ ಕಾರ್ಯಾಚರಣೆಯನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಮೊಹಮ್ಮದ್ ಸುಜೀತ.ಎಂ.ಎಸ್, ಐ.ಪಿ.ಎಸ್., ಮಾರ್ಗದರ್ಶನದಲ್ಲಿ, ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ವಾಸುದೇವ್.ವಿ.ಕೆ. ರವರ ನೇತೃತ್ವದಲ್ಲಿ, ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಬಿ.ಎಸ್. ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡವು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
