ಬೀಜಿಂಗ್ ನಲ್ಲಿ ನೃತ್ಯಕಲಾವಿದ ಜೆ. ಮನು ಮತ್ತು ಲಿಖಿತಾ ಜೋಡಿಯಿಂದ ನೃತ್ಯ ಪ್ರದರ್ಶನ 

ಚೀನಾ ಫ್ರೆಂಡ್ ಶಿಪ್ ಅಸೋಸಿಯೇಷನ್ (China Friendship Association) ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಬಾಗಿ 
ಬೆಂಗಳೂರು,ಅ.23; ಭಾರತ – ಚೀನಾ ಫ್ರೆಂಡ್ ಶಿಪ್ ಅಸೋಸಿಯೇಷನ್ ಕರ್ನಾಟಕದ ನಿಯೋಗ (Beijing) ಬೀಜಿಂಗ್ ತೆರಳುತ್ತಿದ್ದು, ನಗರದ ಯು.ಕೆ. ಲಿಖಿತಾ (UK Likhitha) ಮತ್ತು ಜೆ. ಮನು (J. Manu( ಜೋಡಿ ಅಲ್ಲಿ ಕುಚಿಪುಡಿ, ಕಥಕ್ ಮತ್ತು ಭರತನಾಟ್ಯ (Bharath Natyam) ಪ್ರದರ್ಶನ ನೀಡಲಿದೆ.
ಬಹುಮುಖ ನೃತ್ಯಕಲಾವಿದ ಮತ್ತು ಸಾಂಸ್ಕೃತಿಕ ರಾಯಭಾರಿ ಜೆ. ಮನು ಮತ್ತು ಲಿಖಿತಾ ಜೋಡಿ ನಾಳೆ [ಅ.24] ಗುರುವಾರ ಬೀಜಿಂಗ್ ತೆರಳುತ್ತಿದ್ದು, ಅಕ್ಟೋಬರ್ 26 ರಂದು ಭವ್ಯ ವೇದಿಕೆಯಲ್ಲಿ ತನ್ನ ಪ್ರದರ್ಶನದ ಮೂಲಕ ಭಾರತ – ಚೀನಾ ಸ್ನೇಹ ಬಾಂಧವ್ಯವನ್ನು ಬಲಪಡಿಸಲಿದೆ.
ಜೆ. ಮನು ಅವರು ಕುಚಿಪುಡಿ, ಕಥಕ್ ಮತ್ತು ಭರತನಾಟ್ಯ ಪ್ರವೀಣ. ವಿದುಷಿ ರೇಖಾ ಜಗದೀಶ, ಗುರು ಡಾ. ವೀಣಾ ಮೂರ್ತಿ ವಿಜಯ್, ಗುರು ರಾಧಾ ಶ್ರೀಧರ್ ಹಾಗೂ ಗುರು ಹರಿ ಚೇತನ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿರುವ ಅವರು ಮನೋಹರ ಭಾವಭಂಗಿ, ಲಯಬದ್ಧತೆಯ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇವರು ಈಗಾಗಲೇ ಭಾರತ, ಚೀನಾ, ಮಲೇಶಿಯಾ, ಶ್ರೀಲಂಕಾ, ಸಿಂಗಪುರ ಮತ್ತು ಯು.ಎ.ಇ ಸೇರಿದಂತೆ ಅನೇಕ ದೇಶಗಳಲ್ಲಿ ತಮ್ಮ ನೃತ್ಯಕಲೆಯ ಮೆರುಗು ತೋರಿದ್ದಾರೆ. ಅವರು ಚೀನಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಕ್ಕಳ ಪ್ರತಿಭಾ ಉತ್ಸವದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ದುಬೈಯಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದರು.
ಲಿಖಿತಾ ಯು.ಕೆ. ಪ್ರಸಿದ್ಧ ಭರತನಾಟ್ಯ ಕಲಾವಿದೆ, ನೃತ್ಯ ಕುಟೀರ (ಬೆಂಗಳೂರು) ಸಂಸ್ಥಾಪಕಿ ಮತ್ತು ಕಲಾ ನಿರ್ದೇಶಕಿ. ಅವರ ಸೃಜನಶೀಲತೆ, ಬಹುಮುಖತೆ, ಉತ್ಸಾಹ ಮತ್ತು ಶೈಲಿಯುಳ್ಳ ನೃತ್ಯಭಾವನೆ ಅವರು ಕಲಾರಂಗದಲ್ಲಿ ವಿಶಿಷ್ಟ ಸ್ಥಾನ ಗಳಿಸಲು ಕಾರಣವಾಗಿದೆ. ನೃತ್ಯಕಲೆಯ ಆಳವಾದ ಅರಿವಿನ ಬಯಕೆ ಮತ್ತು ಶ್ರದ್ಧೆಯಿಂದ ಮಾಡಿದ ಅಭ್ಯಾಸವು ಅವರನ್ನು ಅದ್ಭುತ ಕಲಾವಿದೆ, ಪ್ರೇರಣಾದಾಯಕ ಗುರು ಮತ್ತು ಸೃಜನಾತ್ಮಕ ನೃತ್ಯ ನಿರ್ದೇಶಕಿಯನ್ನಾಗಿ ರೂಪಿಸಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles