ವಿಧಾನಸಭೆ ಅಧಿವೇಶನದ ಕಾರ್ಯಕಲಾಪ ಚಿತ್ರೀಕರಿಸಿ, ನೇರ ಪ್ರಸಾರ ಮಾಡಲು ಕ್ರಮ

ಬೆಂಗಳೂರು, ಆಗಸ್ಟ್ 08 (ಕರ್ನಾಟಕ ವಾರ್ತೆ): ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಆಗಸ್ಟ್ 11 ರಿಂದ 22 ರವರೆಗೆ ನಡೆಯಲಿರುವ 16ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳನ್ನು ಚಿತ್ರೀಕರಿಸಿ, ನೇರ ಪ್ರಸಾರ ಮಾಡಲು ಹಾಗೂ ಚಿತ್ರೀಕರಿಸಿದ ದೃಶ್ಯಗಳನ್ನು (ಔಟ್‍ಪುಟ್) ಉಭಯ ಸದನಗಳ ಸಚಿವಾಲಯದ ಆಂತರಿಕ ದೂರದರ್ಶನ ಶಾಖೆ (ಸಿಸಿಟಿವಿ), ವೆಬ್‍ಕ್ಯಾಸ್ಟಿಂಗ್, ಯೂಟೂಬ್ ಮತ್ತು ಇತರೆ ಖಾಸಗಿ ಚಾನಲ್‍ಗಳಿಗೆ ಸಂಪರ್ಕ ಒದಗಿಸುವ ಕಾರ್ಯವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರಿಗೆ ವಹಿಸಲಾಗಿರುತ್ತದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಚಿತ್ರೀಕರಿಸಿದ ವಿಧಾನಸಭೆಯ ಕಾರ್ಯಕಲಾಪಗಳ ಔಟ್‍ಪುಟ್ ಅನ್ನು ಇತರೆ ಖಾಸಗಿ ಸುದ್ದಿ ವಾಹಿನಿಯವರು https://youtube.com/@KarnatakaLASessions  ಲಿಂಕ್ ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ಮುದ್ರಣ ಮಾಧ್ಯಮದವರು ಸದನದ ಕಾರ್ಯಕಲಾಪಗಳ ಭಾವಚಿತ್ರಗಳನ್ನು ವಾರ್ತಾ ಇಲಾಖೆಯಿಂದ ಪಡೆಯಬಹುದಾಗಿದೆ.

ಸದನದ ಕಾರ್ಯಕಲಾಪಗಳನ್ನು ವರದಿ ಮಾಡುವ ವರದಿಗಾರರುಗಳಿಗೆ ವಿಧಾನಸಭೆಯ ಸಭಾಂಗಣದ ಪತ್ರಕರ್ತರ ಗ್ಯಾಲರಿಗೆ ಪ್ರವೇಶಿಸಲು ಅವಕಾಶವಿರುತ್ತದೆ. ಆದರೆ, ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮರಾಮನ್ ಹಾಗೂ ಮುದ್ರಣ ಮಾಧ್ಯಮದ ಛಾಯಾಗ್ರಾಹಕರುಗಳಿಗೆ ವಿಧಾನಸಭೆಯ ಸಭಾಂಗಣದೊಳಗೆ / ಪತ್ರಕರ್ತರ ಗ್ಯಾಲರಿಗೆ ಪ್ರವೇಶಾವಕಾಶ ಇರುವುದಿಲ್ಲ.

ವರದಿಗಾರರು ಸದನದ ಒಳಗೆ ಮೊಬೈಲ್ ದೂರವಾಣಿ, ಟ್ಯಾಬ್ ಇತ್ಯಾದಿಗಳನ್ನು ಕೊಂಡೊಯ್ಯುವಂತಿಲ್ಲ. ಎಲ್ಲಾ ಮುದ್ರಣ ಮಾಧ್ಯಮದವರು ಮತ್ತು ಸುದ್ದಿವಾಹಿನಿಯವರು ಸಹಕರಿಸಬೇಕೆಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles