“ ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ ”

ಮುಂಬರುವ “ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ” ಯನ್ನು ದಿನಾಂಕ:26/06/2025 ರಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯವರಿಂದ ಆಯೋಜಿಸಲಾಗಿದ್ದು, ಇದು ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಮಾದಕ ವಸ್ತು ವ್ಯಾಪಾರದ ವಿರುದ್ಧದ ಹೋರಾಟವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಾಗತಿಕ ಉಪಕ್ರಮವಾಗಿದೆ. ಈ ವರ್ಷದ ಘೋಷವಾಕ್ಯವು “ಸರಪಳಿಗಳನ್ನು ಮುರಿಯುವುದು: ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಎಲ್ಲರಿಗೂ ಪುನಶ್ಚೇತನಗೊಳಿಸುವಿಕೆ” ಮಾದಕ ವಸ್ತು ತಡೆಗಟ್ಟುವಿಕೆಯು, ಸುಲಭವಾಗಿ ಲಭ್ಯವಿರುವ ಚಿಕಿತ್ಸೆ ಮತ್ತು ಸುಸ್ಥಿರ ಚೇತರಿಕೆಯ ಮೂಲಕ ಮಾದಕ ವಸ್ತು ಅವಲಂಬನೆಯನ್ನು ನಿರ್ಮೂಲನೆ ಮಾಡಲು ಸಮಗ್ರ ಪ್ರಯತ್ನಗಳ ಮಹತ್ವವನ್ನು ಒತ್ತಿಹೇಳುತ್ತದೆ.

ಈ ಮಹತ್ವದ ದಿನವು ಯುವ ಜನತೆ, ಸರ್ಕಾರೇತರ ಸಂಸ್ಥೆಗಳು (ಎನ್.ಜಿ.ಓ), ಕಾರ್ಮಿಕ ವರ್ಗ, ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಎಲ್ಲಾ ಹಂತದ ನಾಗರಿಕರು ಒಟ್ಟಾಗಿ ಸೇರಿ, ಜಾಗೃತಿ ಮೂಡಿಸುವಲ್ಲಿ, ಜ್ಞಾನವನ್ನು ಹಂಚಿಕೊಳ್ಳುವಲ್ಲಿ ಮತ್ತು ಮಾದಕ ವಸ್ತು ಮುಕ್ತ ಸಮಾಜವನ್ನು ಉತ್ತೇಜಿಸುವ ಉಪಕ್ರಮಗಳನ್ನು ಬೆಂಬಲಿಸುವಲ್ಲಿ, ಸಕ್ರಿಯವಾಗಿ ಭಾಗವಹಿಸಲು ಕರೆ ನೀಡುತ್ತದೆ.

ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು:
ಜಾಗೃತಿ ಮೆರವಣಿಗೆಗಳು ಮತ್ತು ರಸ್ತೆ ನಡಿಗೆ.
ತಜ್ಞರು ಮತ್ತು ಮಾದಕ ವಸ್ತು ವಿಮುಕ್ತ ವ್ಯಕ್ತಿಗಳೊಂದಿಗೆ ಚರ್ಚೆಗಳು.
ತಡೆಗಟ್ಟುವಿಕೆ ಮತ್ತು ಆರಂಭಿಕ ಹಸ್ತಕ್ಷೇಪದ ಕುರಿತು ಕಾರ್ಯಾಗಾರಗಳು.
ಸಮುದಾಯ ಸಂಪರ್ಕ ಕಾರ್ಯಕ್ರಮಗಳು ಮತ್ತು ಸಮಾಲೋಚನೆ.
ಮಾದಕ ವಸ್ತುಮುಕ್ತ ಜೀವನದ ಮಹತ್ವವನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು.

ವ್ಯಸನದ ಸರಪಳಿಗಳನ್ನು ಮುರಿದು ಆರೋಗ್ಯಕರ, ಸುರಕ್ಷಿತ ಸಮಾಜವನ್ನು ಬೆಳೆಸುವ ಈ ಸಾಮೂಹಿಕ ಪ್ರಯತ್ನದಲ್ಲಿ, ಎಲ್ಲರೂ ಕೈಜೋಡಿಸಬೇಕೆಂದು ಬೆಂಗಳೂರು ನಗರ ಪೊಲೀಸರು ಕೋರುತ್ತಾರೆ. ನಿಮ್ಮ ಭಾಗವಹಿಸುವಿಕೆಯು ಬದುಕನ್ನು ಪರಿವರ್ತಿಸುವಲ್ಲಿ ಮತ್ತು ಮಾದಕ ವ್ಯಸನದ ಪಿಡುಗಿನಿಂದ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ನಾವೆಲ್ಲರು, ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಪುನಶ್ಚೇತನ, ಈ ಮೂರು ಅಂಶಗಳತ್ತ ಒಟ್ಟಾಗಿ ಕೈಜೋಡಿಸಿದರೆ ಮಾತ್ರ ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ, ಎಂದು ಪ್ರತಿಜ್ಞೆ ಮಾಡೋಣ.

ನಾವೆಲ್ಲರೂ ಒಟ್ಟಾಗಿ ಮುಂಬರುವ ಜೂನ್-26 ರಂದು ಭರವಸೆ, ಅರಿವು ಮತ್ತು ಕ್ರಿಯಾಶೀಲ ದಿನವನ್ನಾಗಿ ರೂಪಿಸೋಣ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles