ಕರ್ನಾಟಕ ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 10, (ಕರ್ನಾಟಕ ವಾರ್ತೆ):

ಕರ್ನಾಟಕ ನಾಟಕ ಅಕಾಡೆಮಿಯು ರಂಗಭೂಮಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿದ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ 2024-25ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಪ್ರತಿ ಸಾಲಿಗೆ ತಲಾ ಒಂದು ಪುಸ್ತಕ ಬಹುಮಾನವನ್ನು ನೀಡಲಾಗುವುದು. ಬಹುಮಾನದ ಮೊತ್ತ ರೂ. 25,000/-ಗಳಾಗಿರುತ್ತದೆ. ಕೃತಿಗಳನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡುವುದು.

ಕೃತಿಗಳು ಜನವರಿ 2024ರಿಂದ ಡಿಸೆಂಬರ್ 2024ರೊಳಗೆ ಮುದ್ರಣವಾಗಿ ಪ್ರಕಟಣೆಯಾಗಿರಬೇಕು. ಅನುವಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. ಪುಸ್ತಕಗಳು ಯಾವುದೇ ಪದವಿಗಾಗಿ, ಪಿಹೆಚ್.ಡಿ. ಮತ್ತು ಪಠ್ಯ ಪುಸ್ತಕಕ್ಕೆ ಸಿದ್ದಪಡಿಸಲಾದ ವಿಷಯವಾಗಿರಬಾರದು. ಬಹುಮಾನಕ್ಕಾಗಿ ಕಳುಹಿಸಲ್ಪಡುವ ಕೃತಿಗಳು ನಾಟಕವಾಗಿರಬಾರದು, ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು.
ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. ಮರು ಮುದ್ರಣ ಪುಸ್ತಕವಾಗಿರಬಾರದು. ಅಕಾಡೆಮಿಯ ಸದಸ್ಯರು ರಚಿಸಿರುವ ಕೃತಿಗಳಾಗಿರಬಾರದು ಹಾಗೂ ಸಂಪಾದಿತ ಕೃತಿಗಳು ಸಹ ಆಗಿರಬಾರದು.

ಕೃತಿಯು ಕನಿಷ್ಠ 60 ಪುಟಗಳನ್ನು ಹೊಂದಿರಬೇಕು. ಪುಸ್ತಕ ಬಹುಮಾನಕ್ಕೆ ಲೇಖಕರು ಮಾತ್ರ ಅರ್ಹರಾಗಿರುತ್ತಾರೆ. ಯಾವುದೇ ಕಾರಣಕ್ಕೂ ಬಹುಮಾನಕ್ಕಾಗಿ ಸಲ್ಲಿಸಲಾಗುವ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಆಸಕ್ತ ಲೇಖಕರು, ಹೆಸರು, ವಿಳಾಸ, ಪ್ರಕಟಣೆ ವರ್ಷದೊಂದಿಗೆ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ನೆಲಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560 002, ದೂರವಾಣಿ ಸಂ. 080-22244176 ಇಲ್ಲಿಗೆ 2025ನೇ ಜೂನ್ 25 ರೊಳಗಾಗಿ ಸಲ್ಲಿಸುವಂತೆ ಕರ್ನಾಟಕ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles