ಆರ್ಯಭಟ ಪ್ರಶಸ್ತಿಗೆ ಭಾಜನರಾದ ಚೆಕ್ ಗಣರಾಜ್ಯದ ಗೌರವ ರಾಯಭಾರಿ ಪುಷ್ಪಕ್ ಪ್ರಕಾಶ್

ಬೆಂಗಳೂರು: ಪುಷ್ಪಕ್ ಏರೋಸ್ಪೇಸ್ ಇಂಡಿಯಾ ಪ್ರವೈಟ್ ಲಿಮಿಟೆಡ್ (Pushpak Aerospace India P. Ltd.) ಸಂಸ್ಥೆಯ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಪುಷ್ಪಕ್ ಪ್ರಕಾಶ್ (Pushpak Prakash) ಅವರಿಗೆ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ  (Aryabhata International Award) 2026ಗೆ ಭಾಜನರಾಗಿದ್ದಾರೆ.
“ಉದ್ಯಮಶೀಲತೆ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳು” (Entrepreneurship and International Relations) ವಿಭಾಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪುಷ್ಪಕ್ ಪ್ರಕಾಶ್ ಅವರು ಚೆಕ್ ಗಣರಾಜ್ಯದ ಗೌರವ ರಾಯಭಾರಿಯಾಗಿ ಭಾರತ ಮತ್ತು ಚೆಕ್ ಗಣರಾಜ್ಯ ಸೇರಿದಂತೆ ಹಲವು ದೇಶಗಳ ನಡುವೆ ಬಲವಾದ ಅಂತಾರಾಷ್ಟ್ರೀಯ ಸಂಬಂಧಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಪ್ರಯತ್ನಗಳು ಕೈಗಾರಿಕಾ, ಸಾಂಸ್ಕೃತಿಕ ಮತ್ತು ವ್ಯಾಪಾರ ವಲಯದ ಸಹಕಾರವನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್, ದೂರದರ್ಶನದ ನಿವೃತ್ತ ಹೆಚ್ಚುವರಿ ಮಹಾ ನಿರ್ದೇಶಕರಾದ ನಾಡೋಜ ಡಾ. ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ದೇಶದ ಏರೋಸ್ಪೇಸ್ ಮತ್ತು ರಕ್ಷಣಾ ತಯಾರಿಕಾ ಕ್ಷೇತ್ರಕ್ಕೆ, ನಿರ್ದಿಷ್ಟವಾಗಿ ಅಂತರಿಕ್ಷ ಮತ್ತು ಕಾರ್ಯತಂತ್ರ ಯೋಜನೆಗಳಿಗೆ ಪುಷ್ಪಕ್ ಪ್ರಕಾಶ್ ಅವರು ನಿರಂತರ ಕೊಡುಗೆ ನೀಡಿದ್ದಾರೆ. ಪುಷ್ಪಕರ್ ಏರೋಸ್ಪೆಸ್ ಅಂಡ್ ಡಿಫೆನ್ಸ್ ಸಂಸ್ಥೆ ತನ್ನ ಯಶಸ್ವೀ 35ನೇ ವರ್ಷದ ಸಂಭ್ರಮವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಮನ್ನಣೆ ದೊರೆತಿದೆ.
ಕಳೆದ ಹಲವು ದಶಕಗಳಿಂದ ಸಂಸ್ಥೆಯು ಚಂದ್ರಯಾನ, ಮಂಗಳಯಾನ, ಆದಿತ್ಯ-ಎಲ್1, ಕಾರ್ಟೋಸ್ಯಾಟ್, ಜಿ.ಎಸ್.ಎ.ಟಿ ಹಾಗೂ ಐ.ಆರ್.ಎನ್.ಎಸ್.ಎಸ್ ಸೇರಿದಂತೆ ಇಸ್ರೋ ಮತ್ತು ರಕ್ಷಣಾ ಯೋಜನೆಗಳಿಗೆ ತನ್ನ ಕೊಡುಗೆಯನ್ನು ನೀಡುತ್ತಿದೆ. ಪುಷ್ಪಕ್ ಸಂಸ್ಥೆಯು ಪಿ.ಎಸ್.ಎಲ್.ವಿ, ಜಿ.ಎಸ್.ಎಲ್.ವಿ ಹಾಗೂ ಎಲ್.ವಿ.ಎಂ3 [ಮಾರ್ಕ್-3] ಉಡಾವಣಾ ವಾಹನಗಳ ಕಾರ್ಯಕ್ರಮಗಳಲ್ಲಿ ಸಹ ಮಹತ್ವದ ಕೊಡುಗೆ ನೀಡಿದೆ. ಮುಂದಿನ ಭಾರತದ ಮಹತ್ವಾಕಾಂಕ್ಷಿ ಗಗನಯಾನ ಮಿಷನ್ನಲ್ಲಿಯೂ ಸಂಸ್ಥೆ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ. ದೇಶ ನಿರ್ಮಾಣಕ್ಕೆ ಸಂಬಂಧಿಸಿದ ಅಂತರಿಕ್ಷ ಯೋಜನೆಗಳ ಕೊಡುಗೆಗಾಗಿ ಪುಷ್ಪಕ್ ಸಂಸ್ಥೆಗೆ ಇಸ್ರೋದಿಂದ ಹಲವು ಬಾರಿ ಗೌರವ ಸ್ವೀಕರಿಸಿದೆ.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪುಷ್ಪಕ್ ಪ್ರಕಾಶ್, ಈ ಪ್ರಶಸ್ತಿ ಇನ್ನಷ್ಟು ನಿಷ್ಠೆ, ಹೊಸತನ ಮತ್ತು ಗುಣಮಟ್ಟದೊಂದಿಗೆ ಏರೋಸ್ಪೇಸ್, ರಕ್ಷಣಾ ಮತ್ತು ಅಂತರಿಕ್ಷ ಕಾರ್ಯಕ್ರಮಗಳಿಗೆ ಸೇವೆ ಸಲ್ಲಿಸಲು ಪ್ರೇರಣೆ ದೊರೆತಿದೆ. ಬೆಂಗಳೂರು ವಿಶ್ವದ ಅಗ್ರಗಣ್ಯ ನಗರವಾಗಿದ್ದು, ಬೆಂಗಳೂರು, ಕರ್ನಾಟಕದ ಕೀರ್ತಿಯನ್ನು ಹೆಚ್ಚಿಸಲು ಶ್ರಮಿಸುವುದಾಗಿ ಹೇಳಿದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles