ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕನ್ಮಡ ಚಿತ್ರರಂಗದ ಹಿರಿಯ ನಟಿ ಬಿ.‌ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾ‌ಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಬಿ. ಸರೋಜಾದೇವಿಯವರ ನಿಧನದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಭಿನಯ ಸರಸ್ವತಿ, ಚತುರ್ಭಾಷಾ ತಾರೆ ಪೌರಾಣಿಕ ಹಾಗೂ ಸಾಮಾಜಿಕ ಚಲನಚಿತ್ರಗಳಲ್ಲಿ ವಿಭಿನ್ನ ಪಾತ್ರವನ್ನು ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ. ಒಂದು ಕಾಲದಲ್ಲಿ ಕನ್ನಡದ ಸೂಪರ್ ಸ್ಟಾರ್ ಆಗಿದ್ದ ಅವರು, ರಾಜಕುಮಾರ್ ಜೊತೆ, ತೆಲುಗಿನಲ್ಲಿ ಎನ್ ಟಿ ಆರ್ ಜೊತೆ, ಹಿಂದಿಯಲ್ಲಿ ದಿಲೀಪ್ ಕುಮಾರ್ ಜೊತೆ ನಟಿಸಿ ಇಡೀ ದೇಶದಲ್ಲಿ ಪ್ರಖ್ಯಾತ ನಟಿ ಆಗಿದ್ದರು.
ಕನ್ನಡದಲ್ಲಿ ಹೇಳಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರಕ್ಕೆ ನೈಜತೆ ತಂದಿದ್ದರು. ಚೆನ್ನಮ್ಮ ಅಂದರೆ ಹೀಗಿದ್ದರು ಅಂತ ಕಲ್ಪನೆ ಮೂಡಿಸಿದ್ದರು. ಅವರ ಅಭಿನಯ, ಕಲ್ಪನೆ ಇಂದಿಗೂ ಮನಸ್ಸಿನಲ್ಲಿ ಇದೆ. ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೇಗೆ ಹೋರಾಟ ಮಾಡಿದ್ದರು ಅಂತ ಅವರ ನಟನೆ ಮೂಲಕ ತೋರಿಸಿದ್ದರು ಎಂದರು.
ಮಲ್ಲಮ್ಮನ ಪವಾಡ ಇದೊಂದು ಮನೆಮನೆಯಲ್ಲಿ ಮನಮುಟ್ಟುವ ಚಿತ್ರವಾಗಿತ್ತು. ಲಕ್ಷ್ಮಿ ಸರಸ್ವತಿ, ಬಬ್ರುವಾಹನ, ಶ್ರೀನಿವಾಸ ಕಲ್ಯಾಣ ಸೇರಿದಂತೆ ನೂರಾರು ಚಿತ್ರಗಳಲ್ಲಿ ನಟನೆ ಮಾಡಿದ್ದರು‌. ಅಭಿನಯದ ಜೊತೆ ಗಾಂಭೀರತೆಯಲ್ಲಿ ಅಗ್ರಮಾನ್ಯರಾಗಿದ್ದರು. ಐದು ದಶಕದಿಂದ ಚಿತ್ರರಂಗದಲ್ಲಿ ನಟಿಸಿದ್ದು, ನಮ್ಮನ್ನೆಲ್ಲಾ ಅಗಲಿದ್ದಾರೆ. ಆದರೂ ಅವರ ಅಭಿನಯದ ಮೂಲಕ ನಮ್ಮ ಮನದಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles