ಆರೋಗ್ಯಕರ ಜೀವನಶೈಲಿಗೆ ಸಮತೋಲನ ಆಹಾರ -ಪೌಷ್ಟಿಕತೆ ಅಗತ್ಯ: ಕೃಷಿ ವಿವಿಯಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ

ಬೆಂಗಳೂರು : ಉತ್ತಮ ಆರೋಗ್ಯ, (Health) ರೋಗಮುಕ್ತ ಜೀವನ ಮತ್ತು ಮಾನಸಿಕ-ದೈಹಿಕ ಸ್ವಾಸ್ಥ್ಯಕ್ಕಾಗಿ ಸಾರ್ವಜನಿಕರು ತಮ್ಮ ದಿನನಿತ್ಯದ ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ ಸೂಕ್ತ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಕೃಷಿ (Agriculture University) ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರಾದ ಡಾ. ವೈ. ಎನ್. ಶಿವಲಿಂಗಯ್ಯ (YN Shivalingaiah) ಅವರು ಹೇಳಿದರು.
ಬೆಂಗಳೂರಿನ ಜಿಕೆವಿಕೆಯ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಪೌಷ್ಟಿಕ ಸಪ್ತಾಹ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು ದಿನನಿತ್ಯದ ಆಹಾರದಲ್ಲಿ ಹಸಿರು ಎಲೆಗಳ ತರಕಾರಿ ಬಳಕೆಗೆ ಸಲಹೆ ನೀಡಿದರು.
“ಆಹಾರದಲ್ಲಿ ಹಸಿರು ಎಲೆಗಳ ತರಕಾರಿಗಳ ಬಳಕೆಯನ್ನು ಹೆಚ್ಚಿಸಬೇಕು. ಆಹಾರ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡುವುದರಿಂದ ಅವುಗಳ ಪೌಷ್ಟಿಕ ಗುಣಮಟ್ಟ ಹೆಚ್ಚುವುದಷ್ಟೇ ಅಲ್ಲದೆ, ರುಚಿ, ಆಕರ್ಷಣೆ ಹಾಗೂ ಗ್ರಾಹಕರ ಸ್ವೀಕಾರಾರ್ಹತೆಯೂ ಹೆಚ್ಚುತ್ತದೆ” ಎಂದರು.
ಇದೇ  ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಬೇಕರಿ ತಂತ್ರಜ್ಞಾನಕ್ಕೆ ಸಂಬಂಧಿಸಿದ 14 ವಾರಗಳ ಕೋರ್ಸ್‌ನ 78ನೇ ತಂಡದ ಶಿಬಿರಾರ್ಥಿಗಳಿಗೆ ಅಧಿಕೃತವಾಗಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
“ಪೋಷಣೆಯ ಶಕ್ತಿಯನ್ನು ಅನ್ವೇಷಿಸಿ” ಎಂಬ ಮುಖ್ಯ ಧೈಯವಾಕ್ಯದೊಂದಿಗೆ ನಡೆದ ಈ ಪೌಷ್ಟಿಕ ಸಪ್ತಾಹದ ಅಂಗವಾಗಿ ಆಹಾರ ಮತ್ತು ಪೌಷ್ಟಿಕತೆಯ ಕುರಿತು ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗಿತ್ತು. ಸಮತೋಲನ ಆಹಾರದ ಅವಶ್ಯಕತೆ, ಸರಿಯಾದ ಪೌಷ್ಟಿಕಾಂಶಗಳ ಆಯ್ಕೆ ಮತ್ತು ಆರೋಗ್ಯಕರ ಆಹಾರ ಪದ್ಧತಿಯ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಯಿತು.
ಭಾರತ ಸರ್ಕಾರದ ನಿರ್ಣಯದಂತೆ 2018 ರಿಂದ ಪ್ರತಿವರ್ಷ ಸೆಪ್ಟೆಂಬರ್ 1 ರಿಂದ 7 ರವರೆಗೆ ರಾಷ್ಟ್ರೀಯ ಪೌಷ್ಟಿಕ ಸಪ್ತಾಹವನ್ನು ಜಾಗೃತಿ ಅಭಿಯಾನವಾಗಿ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯ ಸಂಯೋಜಕರು ಹಾಗೂ ಮುಖ್ಯಸ್ಥರಾದ ಡಾ. ಭಾರತಿ ಸಿ. ಮಿರಜಕರ, ರೈತ ತರಬೇತಿ ಸಂಸ್ಥೆಯ ಆಹಾರ ಮತ್ತು ಪೌಷ್ಟಿಕತೆ ವಿಭಾಗದ ಪ್ರಾಧ್ಯಾಪಕರಾದ ಡಾ. ಲತಾ ಆರ್. ಕುಲಕರ್ಣಿ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles