ಬೆಂಗಳೂರು-ಚೆನ್ನೆಎಕ್ಸ್ಪ್ರೆಸ್ ಹೈವೇ ಅಪಘಾತವಲ್ಲ, ಬೆಮೆಲ್ ಸಮೀಪದ್ದು : ಎಸ್‌ಪಿ ಸ್ಪಷ್ಟನೆ

ಕೆಜಿಎಫ್., ಜೂ. 10 : ಸೋಮವಾರ (9-6-2025) ದಂದು ಬೆಮೆಲ್‌ನಗರ ಸಮೀಪದ ಹ್ಯಾಪಿಹೋಂ ಬಳಿ ಸಂಭವಿಸಿದ ರಸ್ತೆ ಅಪಘಾತವನ್ನು ಬೆಂಗಳೂರು-ಚೆನ್ನೆ ಎಕ್ಸ್ಪ್ರೆಸ್ ಹೈವೇ ನಲ್ಲಿ ಸಂಭವಿಸಿರುವುದೆ0ದು ಕೆಲವೊಂದು ಮಾಧ್ಯಮಗಳಲ್ಲಿ ವರದಿಯಾಗಿರುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಮೆಲ್‌ನಗರ ಪೊಲೀಸ್ ಠಾಣೆ ಸರಹದ್ದು, ಆಲದಮರ ದಿಂದ ಕೃಷ್ಣಾವರಂ ಕಡೆಗೆ ಹೋಗುವ ರಾಜ್ಯ ಹೆದ್ದಾರಿ 95 ರಸ್ತೆಯಲ್ಲಿ ಹ್ಯಾಪಿಹೋಂ ಸಮೀಪ ಕಾರೊಂದು ಸ್ವತಃ ರಸ್ತೆ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ ವಿಷಯಕ್ಕೆ ಸಂಬ0ಧಿಸಿದ0ತೆ ಮಾದ್ಯಮಗಳಲ್ಲಿ ಬೆಂಗಳೂರು-ಚೆನ್ನೆ ಎಕ್ಸ್ಪ್ರೆಸ್ ಹೈವೇ ನಲ್ಲಿ ನಡೆದ ಅಪಘಾತ ಎಂದು ಪ್ರಸಾರವಾಗಿರುತ್ತದೆ.
ಆಲದಮರದ ಕಡೆಯಿಂದ ಕೃಷ್ಣಾವರಂ ಕಡೆಗೆ ಹೋಗುತ್ತಿದ್ದ ಏಂ-51-ಒಖಿ-5312 ಕಾರು ಹ್ಯಾಪಿಹೋಂ ಸಮೀಪ ಡಿವೈಡರ್‌ಗೆ ಡಿಕ್ಕಿ ಪಡಿಸಿ ನಂತರ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಪಡಿಸಿದಾಗ ಕಾರಿನಲ್ಲಿದ್ದ ಜಾನ್‌ಬೇಕನ್, ನಾಗರಾಜ್ ಮತ್ತು ಆಕಾಶ್ ಮೃತಪಟ್ಟಿದ್ದು, ಉಳಿದ ತಮಿಳರಸನ್, ರಾಜ್‌ಕುಮಾರ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುತ್ತಾರೆ.
ಈ ಅಪಘಾತವು ಆಲದಮರದಿಂದ ಕೃಷ್ಣಾವರಂಗೆ ಹೋಗುವ ಮಾರ್ಗಮಧ್ಯೆ ಸಂಭವಿಸಿರುತ್ತದೆ. ಇದು ಬೆಂಗಳೂರು-ಚೆನ್ನೆ ಎಕ್ಸ್ಪ್ರೆಸ್ ಹೈವೇ ನಲ್ಲಿ ಸಂಭವಿಸಿರುವುದಿಲ್ಲವೆ0ದು ಎಸ್‌ಪಿ ಶಾಂತರಾಜು ಅವರು ವಿವರಿಸಿದ್ದಾರೆ.
ಎಕ್ಸ್ಪ್ರೆಸ್ ರಹದಾರಿಯಲ್ಲಿ ವೇಗ ನಿಯಂತ್ರಣಕ್ಕೆ ಕ್ರಮ :

ಬೆಂಗಳೂರು-ಚೆನ್ನೆ ಎಕ್ಸ್ಪ್ರೆಸ್ ಹೈವೇ ನಲ್ಲಿ ಓಡಾಡುವ ವಾಹನಗಳ ವೇಗವನ್ನು ನಿಯಂತ್ರಿಸಲು, ಮೋಟಾರು ವಾಹನ ಕಾಯ್ದೆಯಡಿ ಅತಿವೇಗ ಚಾಲನೆ ವಿರುದ್ದ ಪ್ರಕರಣವನ್ನು ದಾಖಲಿಸಲು ಸ್ಪೀಡ್ ರಾಡಾರ್ ಗನ್ ಮೂಲಕ ಕ್ರಮ ಕೈಗೊಳ್ಳಲಾಗಿದೆ. ಜೂ. 09 ರಂದು 11 ಅತಿವೇಗ ಚಾಲನೆ ಪ್ರಕರಣಗಳನ್ನು ದಾಖಲಿಸಿ, ರೂ. 11,000/- ದಂಡ ವಿಧಿಸಲಾಗಿದೆ ಮತ್ತು ಜೂ. 10 ರಂದು 05 ಅತಿವೇಗ ಚಾಲನೆ ಪ್ರಕರಣಗಳನ್ನು ದಾಖಲಿಸಿ, ರೂ. 5,000/- ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರು ತಿಳಿಸಿದ್ದಾರೆ. ಇದೇ ರೀತಿ ಅತಿವೇಗ ಚಾಲನೆ ಮಾಡುವವರ ವಿರುದ್ದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಬಯಸುತ್ತೇನೆ.
ಎಕ್ಸ್ಪ್ರೆಸ್ ಹೈವೇ ವ್ಯಾಪ್ತಿಯ ಬೇತಮಂಗಲ, ಬಂಗಾರಪೇಟೆ ಮತ್ತು ಬೆಮೆಲ್‌ನಗರ ಪೊಲೀಸ್ ಠಾಣೆಗಳಿಗೆ ವಾಹನಗಳ ವೇಗವನ್ನು ಪರಿಶೀಲಿಸುವ ಸ್ಪೀಡ್ ರಾಡಾರ್ ಗನ್ ಗಳನ್ನು ಒದಗಿಸಲಾಗಿದ್ದು, ಆಯಾ ಪೊಲೀಸ್ ಠಾಣಾಧಿಕಾರಿಗಳಿಗೆ ವೇಗದ ಪರಿಶೀಲನೆ ಮಾಡುವ ತರಬೇತಿಯನ್ನು ಈ ಹಿಂದೆಯೇ ನೀಡಲಾಗಿದ್ದು, ಜೂ. 09 ರಂದು ಪೂನರ್ಮನನ ತರಬೇತಿ ಸಹ ಮತ್ತೊಮ್ಮೆ ನೀಡಲಾಗಿರುತ್ತದೆ. ಎಕ್ಸ್ಪ್ರೆಸ್ ಹೈವೇ ಮೂಲಕ ಸಂಚಾರ ಮಾಡುವಂತಹ ಎಲ್ಲಾ ವಾಹನಗಳ ವೇಗದ ಪರಿಶೀಲನೆ ನಡೆಸಿ, ಅತಿವೇಗದಿಂದ ಚಾಲನೆ ಮಾಡುವ ವಾಹನ ಚಾಲಕರ ವಿರುದ್ದ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಸ್‌ಪಿ ಶಾಂತರಾಜು ಅವರು ತಿಳಿಸಿದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles