Home Blog Page 45

ಗಾಲಿ ಜನಾರ್ದನ ರೆಡ್ಡಿ – ಬಿ. ಶ್ರೀರಾಮುಲು ಮತ್ತೆ ಒಂದಾದರು: ಕೊಪ್ಪಳದಲ್ಲಿ ಬಿಜೆಪಿಗೆ ಒಗ್ಗಟ್ಟಿನ ಸಂದೇಶ

ಕೊಪ್ಪಳ, ಜುಲೈ 21
ಸಂಡೂರು ಉಪಚುನಾವಣೆ ಬಳಿಕ ಉದ್ಭವಿಸಿದ್ದ ಅಂತರಕಲಹದ ವಾತಾವರಣ ಇದೀಗ ಶಮನಗೊಂಡಿದ್ದು, ಬಿಜೆಪಿಯ ಹಿರಿಯ ನಾಯಕರು ಗಾಲಿ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ಮತ್ತೆ ಒಂದಾದ ದೃಷ್ಯ ಕೊಪ್ಪಳ ಜಿಲ್ಲೆಯ ಮರಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಕಾಣಸಿಕ್ಕಿದೆ.

ಭಾನುವಾರ ನಡೆದ ಬಿಜೆಪಿ ಅವಲೋಕನಾ ಸಭೆಯಲ್ಲಿ ಇಬ್ಬರೂ ನಾಯಕರೂ ಒಂದೇ ವೇದಿಕೆಯಲ್ಲಿ ಭಾಗವಹಿಸಿ, ತಮ್ಮ ನಡುವಿನ ವೈಮನಸ್ಸಿಗೆ ತೆರೆ ಹಾಕಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದರು. ಸಭೆ ಮೋದಿಯವರ 11 ವರ್ಷಗಳ ಸಾಧನೆಗೆ ಸಮರ್ಪಿತವಾಗಿತ್ತು ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವ ನೀಡಿದರು.

ವಿಜಯೇಂದ್ರ ಅವರು ಎರಡೂ ನಾಯಕರ ಕೈ ಹಿಡಿದು, ಪಕ್ಷದ ಏಕತೆಗೂ, ಸಹಕಾರಕ್ಕೂ ಪ್ರೇರಣೆ ನೀಡಿದರು. ಈ ವೇಳೆ ರೆಡ್ಡಿ ಮತ್ತು ಶ್ರೀರಾಮುಲು ಅಕ್ಕಪಕ್ಕದಲ್ಲಿ ಕುಳಿತು ಮಾತನಾಡಿದರು.

ನಮ್ಮದು ಸ್ನೇಹದ ಜಗಳ” – ಜನಾರ್ದನ ರೆಡ್ಡಿ
ರೆಡ್ಡಿ ಮಾತನಾಡುತ್ತಾ, “ನಮ್ಮ ನಡುವೆ ಮಧ್ಯಸ್ಥಿಕೆ ಬೇಕು ಎಂದು ಯಾರುಕಾದರೂ ಯೋಚಿಸುತ್ತಿದ್ದರೆ ಅದು ಮೂರ್ಖತನ. ನಮ್ಮದು ಸ್ನೇಹದ ಜಗಳ. ಇದರಿಂದ ಲಾಭ ಪಡೆಯಲು ಯತ್ನಿಸಿದವರಿಗೆ ಏನೂ ಸಿಗಲ್ಲ,” ಎಂದು ಸ್ಪಷ್ಟಪಡಿಸಿದರು.

“ಕಾಂಗ್ರೆಸ್ ಮಾದರಿಯ ಕುಲಕುಟುಮ ಕಾಲವಲ್ಲ” – ಶ್ರೀರಾಮುಲು
ಶ್ರೀರಾಮುಲು ಅವರು, “ಪಕ್ಷದ ವಿಚಾರ ಬಂದಾಗ ನಾವು ಮಾದರಿಯಾಗಬೇಕು. ಎಲ್ಲರೂ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು. ಜನಾರ್ದನ ರೆಡ್ಡಿಯವರೊಂದಿಗೆ ನನಗೆ ಯಾವುದೇ ವೈಷಮ್ಯವಿಲ್ಲ,” ಎಂದು ಭರವಸೆ ನೀಡಿದರು.

ಪಕ್ಷ ಬೇರಿನಿಂದ ಗಟ್ಟಿ ಮಾಡೋಣ – ವಿಜಯೇಂದ್ರ ಕರೆ
ಸಭೆಯಲ್ಲಿದಂತೆ ವಿಜಯೇಂದ್ರ ಅವರು, ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರಿಗೆ, “ಪಕ್ಷವನ್ನು ಗಟ್ಟಿ ಮಾಡುವ ಕೆಲಸ ನೆಲಮಟ್ಟದಿಂದ ಪ್ರಾರಂಭಿಸೋಣ,” ಎಂದು ಕರೆ ನೀಡಿದರು.

*ಡಿ.ಕೆ.ಶಿ. ಅವರನ್ನು ಮುಗಿಸಲು ನಡೆಸಿದ ಸಮಾವೇಶ, ಅದು ಸರ್ಕಾರಿ ಕಾರ್ಯಕ್ರಮವಲ್ಲ: ಆರ್‌.ಅಶೋಕ

*ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ನಡೆಸಿದ ಸಮಾವೇಶ, ಅದು ಸರ್ಕಾರಿ ಕಾರ್ಯಕ್ರಮವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ*

*ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿರುವ ಕಾಂಗ್ರೆಸ್‌ ನಾಯಕರು*

*ಬೆಂಗಳೂರು, ಜುಲೈ 20*

ಕಾಂಗ್ರೆಸ್‌ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಿಶ್ಲೇಷಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಕಾಂಗ್ರೆಸ್‌ನ ಒಡಕನ್ನು ತೋರಿಸಿದೆ. ಅಲ್ಲಿ ಒಬ್ಬರೂ ಡಿ.ಕೆ.ಶಿವಕುಮಾರ್‌ ಪರ ಮಾತಾಡಲಿಲ್ಲ. ಡಿಕೆಶಿಗೆ ಪಾಠ ಕಲಿಸಲು ಹಾಗೂ ಅಪಮಾನ ಮಾಡಲು ಈ ಸಮಾವೇಶ ನಡೆಸಲಾಗಿದೆ. ಡಿಕೆಶಿ ಈಗ ಎರಡನೇ ದರ್ಜೆಯ ನಾಯಕರಾಗಿಬಿಟ್ಟಿದ್ದಾರೆ. ಅದು ಸರ್ಕಾರಿ ಕಾರ್ಯಕ್ರಮವಲ್ಲ. ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.

ಇದು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯನವರ ಆಂತರಿಕ ಜಗಳ. ಬಿಜೆಪಿಗೆ ಸರ್ಕಾರವನ್ನು ಬೀಳಿಸುವ ಅಗತ್ಯವಿಲ್ಲ. ಈ ಸರ್ಕಾರ ಕಾಂಗ್ರೆಸ್‌ನ ಆಂತರಿಕ ಕಲಹದಿಂದಲೇ ಬಿದ್ದುಹೋಗಲಿದೆ. ಸುರ್ಜೇವಾಲ ರಾಜ್ಯಕ್ಕೆ ಬಂದು ಶಾಸಕರ ಅಹವಾಲುಗಳನ್ನು ಆಲಿಸಿದ್ದಾರೆ. ಇವರ ಜಗಳ ಜನರ ಮುಂದೆ ಬಯಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮೈಸೂರಿನ ಸಮಾವೇಶದಲ್ಲಿ ಕೀಳಾಗಿ ಮಾತಾಡಿದ್ದಾರೆ. ‌‌‌ಪ್ರಧಾನಿ ಬೊಗಳುತ್ತಾರೆಂದು ಹೇಳುವುದು ಕಾಂಗ್ರೆಸ್‌ ನಾಯಕರ ಮನಸ್ಥಿತಿಯನ್ನು ತೋರಿಸುತ್ತದೆ. ಈ ಹಿಂದೆ ಛಲವಾದಿ ನಾರಾಯಣಸ್ವಾಮಿ ಗಾದೆಮಾತು ಹೇಳಿದಾಗ ಸಂಸ್ಕೃತಿ ಬಗ್ಗೆ ಇವರೇ ಮಾತಾಡಿದ್ದರು. ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂಬ ಕಾರಣಕ್ಕೆ ಇವರು ಈ ರೀತಿ ಕೀಳಾಗಿ ಮಾತಾಡುತ್ತಿದ್ದಾರೆ ಎಂದರು.

*ಬೆಂಗಳೂರು ಹೋಳು*

ಬೆಂಗಳೂರಿನಲ್ಲಿ ಅಭಿವೃದ್ಧಿ ಮಾಡದೆ ಹೋಳು ಮಾಡಲಾಗಿದೆ. ಟ್ರಾಫಿಕ್‌ ಜಾಮ್‌, ಪ್ರವಾಹ, ಕಸದ ಸಮಸ್ಯೆ ಯಾವುದು ಕೂಡ ಈ ಕ್ರಮದಿಂದ ನಿವಾರಣೆಯಾಗುವುದಿಲ್ಲ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಒಡೆದರೆ ಪ್ರಗತಿಯಾಗಲ್ಲ. ಬ್ರ್ಯಾಂಡ್‌ ಎಂಬ ಸ್ಲೋಗನ್‌ನಿಂದ ಮಾತ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ನಗರವನ್ನು ಒಡೆಯುವುದರಿಂದ ಆದಾಯ ಹಂಚಿಕೆಯಲ್ಲಿ ತಾರತಮ್ಯ ಉಂಟಾಗಿ ಇನ್ನಷ್ಟು ಕಲಹ ಉಂಟಾಗಲಿದೆ. ಬೆಂಗಳೂರಿನ ಕೇಂದ್ರದಲ್ಲಿ ಎಲ್ಲೂ ಕಸದ ಘಟಕ ಇಲ್ಲ. ಈ ಕಸವನ್ನು ಹೊರವಲಯಕ್ಕೆ ಸಾಗಿಸಿದರೆ, ಸ್ವೀಕಾರ ಮಾಡುವುದಿಲ್ಲ ಎಂದು ಅಲ್ಲಿನ ಜನರು ಹೇಳಬಹುದು. ಇದರಿಂದ ಇನ್ನಷ್ಟು ಜಗಳವಾಗಲಿದೆ ಎಂದರು.
ಸುರಂಗ ರಸ್ತೆ ಮಾಡಲು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಇಲ್ಲಿ ಗಟ್ಟಿಯಾದ ಬಂಡೆಗಳಿವೆ. ಇಲ್ಲಿ ಸುರಂಗ ಕೊರೆದು ರಸ್ತೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ಸುರಂಗ ರಸ್ತೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಇದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಿದರೆ ಸಾಕಾಗುತ್ತದೆ. ಮೆಟ್ರೊ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿದರೆ, ಟ್ರಾಫಿಕ್‌ ಜಾಮ್‌ ನಿವಾರಣೆಯಾಗುತ್ತದೆ ಎಂದರು.

ಇವರು ಲಾಟರಿ ಸಿಎಂ ಎಂದು ಶಾಸಕರೇ ಹೇಳಿದ್ದಾರೆ. ಇವರು ಜನನಾಯಕರಲ್ಲ, ಚುನಾಯಿತ ಸಿಎಂ ಅಲ್ಲ. ಆದ್ದರಿಂದ ಇನ್ನು ಮುಂದೆ ಸಿದ್ದರಾಮಯ್ಯ ತಾವು ಲಾಟರಿ ಮುಖ್ಯಮಂತ್ರಿ ಎಂದು ಹೇಳಿಕೊಳ್ಳಬೇಕು ಎಂದರು.

ರೈತರು ಅನ್ನದಾತರಷ್ಟೇ ಭವಿಷ್ಯದ ಇಂಧನದಾತರು* ರಾಜಸ್ಥಾನದಲ್ಲಿ 435 ಮೆಗಾವ್ಯಾಟ್ ಸೌರ ಸ್ಥಾವರ ಯೋಜನೆ ಉದ್ಘಾಟನೆ

ನವದೆಹಲಿ: ಭಾರತದಲ್ಲಿ ರೈತರನ್ನು ನಾವು ʼಅನ್ನದಾತರುʼ ಎನ್ನುತ್ತೇವೆ. ಆದರೆ, ಭವಿಷ್ಯದಲ್ಲಿ ನಮ್ಮ ರೈತರು ʼಇಂಧನದಾತರುʼ ಸಹ ಆಗಲಿದ್ದಾರೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ರಾಜಸ್ಥಾನದಲ್ಲಿ ಶನಿವಾರ ಝೆಲೆಸ್ಟ್ರಾ ಇಂಡಿಯಾ ಕಂಪನಿ ಅಭಿವೃದ್ಧಿಪಡಿಸಿದ 435 ಮೆಗಾವ್ಯಾಟ್ ʼಗೋರ್ಬಿಯಾ ಸೌರ ವಿದ್ಯುತ್ ಯೋಜನೆʼ ಉದ್ಘಾಟಿಸಿ ಮಾತನಾಡಿ, ಭಾರತದ ಇಂಧನ ಪ್ರಯಾಣದಲ್ಲಿ ರೈತರೂ ಪಾಲುದಾರರಾಗುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಸೌರ ಶಕ್ತಿ ಯೋಜನೆಗಳು ರೈತರನ್ನು ಮತ್ತು ಸಮುದಾಯಗಳ ಸಬಲೀಕರಣಕ್ಕೆ ಕೊಡುಗೆಯಾಗಿವೆ. ಜತೆಗೆ ರೈತರ ಕೊಡುಗೆಯೂ ಸೌರ ವಿದ್ಯುತ್‌ ಅಲ್ಲಿ ಅಡಕವಾಗಿದೆ. ಸೌರ ವಿದ್ಯುತ್‌ ಪ್ಲಾಂಟ್‌ಗಾಗಿ ಕೆಲವೆಡೆ ರೈತರು ಭೂಮಿ ಗುತ್ತಿಗೆ ನೀಡುತ್ತಿದ್ದು, ನವ ಭಾರತ ನಿರ್ಮಾಣ ಕಾರ್ಯದಲ್ಲಿ ಅನನ್ಯ ಪಾಲುದಾರರಾಗುತ್ತಿದ್ದಾರೆ ಎಂದರು.

*ಜಗತ್ತಿಗೆ ಬೆಳಕು ಚೆಲ್ಲಲಿದ್ದಾರೆ ರೈತರು:* ರೈತರು ತಮ್ಮ ಕೃಷಿ ಪಂಪ್‌ಸೆಟ್‌ಗಳಿಗೆ ಸೌರ ವಿದ್ಯುತ್‌ ಬಳಕೆ ಜತೆಗೆ ಹೆಚ್ಚಿನ ವಿದ್ಯುತ್‌ ಅನ್ನು ಗ್ರಿಡ್‌ಗಳಿಗೆ ಪೂರೈಸುತ್ತಾರೆ. ಅಲ್ಲದೇ, ಈಗ ಕೃಷಿ ತ್ಯಾಜ್ಯದಿಂದ ಹಸಿರು ಹೈಡ್ರೋಜನ್‌ ಉತ್ಪಾದನೆ ಸಂಶೋಧನೆ ಯಶಸ್ವಿಗೊಂಡಿದ್ದು, ಮುಂದಿನ ದಿನಗಳಲ್ಲಿ ನಮ್ಮ ರೈತರು ಕೇವಲ ಆಹಾರ ಪೂರೈಕೆದಾರರು ಮಾತ್ರವಲ್ಲ; ಇಂಧನ ಪೂರೈಕೆದಾರರೂ ಆಗಿ ಜಗತ್ತಿಗೆ ಬೆಳಕು ಚೆಲ್ಲಲಿದ್ದಾರೆ ಎಂದು ಅಭಿಪ್ರಾಯಿಸಿದರು.

*ರಾಜಸ್ಥಾನ ಜಾಗತಿಕ ಶುದ್ಧ ಇಂಧನ ಕೇಂದ್ರ:* ರಾಜಸ್ಥಾನ ಜಾಗತಿಕ ಶುದ್ಧ ಇಂಧನ ಕೇಂದ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಭಾರತದ ಸ್ವಚ್ಛ ಇಂಧನ ಅಭಿಯಾನದಲ್ಲಿ ರಾಜಸ್ಥಾನ ಮುಂಚೂಣಿಯಲ್ಲಿದೆ. ರಾಜಸ್ಥಾನದ ವಿದ್ಯುತ್ ಸಾಮರ್ಥ್ಯದ ಶೇ.70 ರಷ್ಟನ್ನು ನವೀಕರಿಸಬಹುದಾದ ಇಂಧನದಿಂದಲೇ ಪಡೆಯಲಾಗುತ್ತಿದೆ ಎಂದು ಹೇಳಿದರು.

*1250 ಎಕರೆ ವಿಸ್ತೀರ್ಣದಲ್ಲಿ ಗೋರ್ಬಿಯಾ ಯೋಜನೆ:* ಗೋರ್ಬಿಯಾ ಸೌರ ವಿದ್ಯುತ್ ಯೋಜನೆ ಎಂಟು ತಿಂಗಳೊಳಗೆ ಪೂರ್ಣಗೊಂಡಿದ್ದು, 1250 ಎಕರೆಗಳಷ್ಟು ವಿಸ್ತೀರ್ಣ ಹೊಂದಿದೆ ಮತ್ತು ಭಾರತೀಯ ಸೌರಶಕ್ತಿ ನಿಗಮದೊಂದಿಗೆ 25 ವರ್ಷಗಳ ವಿದ್ಯುತ್ ಖರೀದಿ ಒಪ್ಪಂದಕ್ಕೆ ಬೆಂಬಲವಾಗಿದೆ. ಇದರಿಂದ ವಾರ್ಷಿಕ 755 ಗಿಗಾವ್ಯಾಟ್ ಗಂಟೆಗಳ ಶುದ್ಧ ವಿದ್ಯುತ್ ಉತ್ಪಾದಿಸಲಾಗುತ್ತದೆ. ಸುಮಾರು 1.28 ಲಕ್ಷ ಮನೆಗಳಿಗೆ ವಿದ್ಯುತ್ ಒದಗಿಸುತ್ತದೆ ಮತ್ತು ಪ್ರತಿ ವರ್ಷ ಸುಮಾರು 7.05 ಲಕ್ಷ ಟನ್ ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡುತ್ತದೆ ಎಂದು ವಿವರಿಸಿದರು.

ರಾಜಸ್ಥಾನದಲ್ಲಿ 35.4 ಗಿಗಾವ್ಯಾಟ್‌ಗೂ ಹೆಚ್ಚು ವಿದ್ಯುತ್‌ ಅನ್ನು ನವೀಕರಿಸಬಹುದಾದ ಇಂಧನದಿಂದ ಪಡೆಯುತ್ತಿದ್ದು, ಸೌರಶಕ್ತಿಯಿಂದ 29.5 ಗಿಗಾವ್ಯಾಟ್‌ ಹಾಗೂ ಪವನ ಶಕ್ತಿಯಿಂದ 5.2 ಗಿಗಾವ್ಯಾಟ್‌ ಸಾಮರ್ಥ್ಯದ ಘಟಕಗಳು ಸ್ಥಾಪನೆಯಾಗಿವೆ. ಸ್ಥಳದಲ್ಲೇ ಉಪಕೇಂದ್ರ ಮತ್ತು 6.5 ಕಿ.ಮೀ. ಪ್ರಸರಣ ಮಾರ್ಗ ಸೇರಿದಂತೆ ಸಂಪೂರ್ಣ ಸ್ಥಳಾಂತರಿಸುವ ಮೂಲಸೌಕರ್ಯವನ್ನು ಐದೇ ತಿಂಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

*ನಾವೀನ್ಯತೆ ಮತ್ತು ಭವಿಷ್ಯದ ತಂತ್ರಜ್ಞಾನ:* ʼಗೋರ್ಬಿಯಾ ಸೌರ ವಿದ್ಯುತ್ ಯೋಜನೆʼ ಗರಿಷ್ಠ ಕಾರ್ಯಕ್ಷಮತೆ ಕಾಯ್ದುಕೊಳ್ಳಲು ಸುಧಾರಿತ ಸೌರ ಫಲಕಗಳು (TOPCon ಬೈಫೇಶಿಯಲ್ ಮೊನೊ PERC ಮಾಡ್ಯೂಲ್‌ಗಳು) ಮತ್ತು 1300ಕ್ಕೂ ಹೆಚ್ಚು ರೋಬೋಟಿಕ್ ಶುಚಿಗೊಳಿಸುವ ಘಟಕಗಳನ್ನು ಬಳಸುತ್ತದೆ. ಇದು ವಿಶ್ವ ದರ್ಜೆಯ ಸೌಲಭ್ಯವಾಗಿದೆ ಎಂದರು.

*₹6.57 ಲಕ್ಷ ಕೋಟಿ ಹೂಡಿಕೆಗೆ ಸಹಿ:* ರಾಜಸ್ಥಾನ ಸಮಗ್ರ ಶುದ್ಧ ಇಂಧನ ನೀತಿ 2024 ಅನ್ನು ಅಳವಡಿಸಿಕೊಂಡಿದೆ. ಅಲ್ಲದೇ, ಹಸಿರು ಹೈಡ್ರೋಜನ್ ನೀತಿಯನ್ನು ಸಹ ಕಾರ್ಯಗತಗೊಳಿಸಿದೆ. ಕಳೆದ ವರ್ಷ ₹6.57 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆಗೆ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರ ಸಹಕಾರದಲ್ಲಿ ಇಲ್ಲಿ ಸೌರ ವಿದ್ಯುತ್‌ ಯೋಜನೆಗೆ ವೇಗ ಸಿಕ್ಕಿದೆ ಎಂದು ಶ್ಲಾಘಿಸಿದರು.

PM ಸೂರ್ಯ ಘರ್ ಯೋಜನೆಯಡಿ ರಾಜಸ್ಥಾನದಲ್ಲಿ 49000ಕ್ಕೂ ಹೆಚ್ಚು ಮೇಲ್ಛಾವಣಿ ಅಳವಡಿಕೆ ಪೂರ್ಣಗೊಂಡಿದ್ದು, PM ಕುಸುಮ್ ಅಡಿಯಲ್ಲಿ 1.45 ಲಕ್ಷ ಸೌರ ಪಂಪ್‌ಗಳನ್ನು ಅಳವಡಿಸಲಾಗಿದೆ. ₹325 ಕೋಟಿಗೂ ಹೆಚ್ಚು ಸಬ್ಸಿಡಿ ವಿತರಿಸಲಾಗಿದೆ. ಈಗಾಗಲೇ 2.7 ಲಕ್ಷ ಅರ್ಜಿಗಳು ಬಂದಿದ್ದು, ತ್ವರಿತ ಅನುಷ್ಠಾನಕ್ಕೆ ಸಲಹೆ ನೀಡಿದರು.

*ಹೂಡಿಕೆಯಲ್ಲಿ ಅಗ್ರ ಸ್ಥಾನ ಝೆಲೆಸ್ಟ್ರಾ:* ನವೀಕರಿಸಬಹುದಾದ ಇಂಧನ ವಲಯದಲ್ಲಿ ಝೆಲೆಸ್ಟ್ರಾ ಜಾಗತಿಕ ಪ್ರತಿಷ್ಠಿತ ಕಂಪನಿಯಾಗಿದ್ದು, 13 ದೇಶಗಳಲ್ಲಿ 29 ಗಿಗಾವ್ಯಾಟ್‌ ಇಂಗಾಲ-ಮುಕ್ತ ಇಂಧನ ಯೋಜನೆಗಳ ಪೋರ್ಟ್‌ಫೋಲಿಯೊ ಹೊಂದಿದೆ. ಭಾರತದಲ್ಲಿ ಈ ಕಂಪನಿ 5.4 ಗಿಗಾವ್ಯಾಟ್‌ ಪೈಪ್‌ಲೈನ್ ಹೊಂದಿದ್ದು, 1.7 ಗಿಗಾವ್ಯಾಟ್‌ಗೆ ಒಪ್ಪಂದ ಮಾಡಿಕೊಂಡಿದೆ. ಇದು ವಿಶ್ವದ ಅತಿದೊಡ್ಡ ಹೂಡಿಕೆಯಲ್ಲಿ ಒಂದಾಗಿದೆ. ಈ ಕಂಪನಿ 273 ಬಿಲಿಯನ್ ಯುರೋಗಳಿಗಿಂತ ಹೆಚ್ಚು ಆಸ್ತಿ ನಿರ್ವಹಿಸುತ್ತಿದ್ದು, 2024ರಲ್ಲಿ ಶುದ್ಧ ಇಂಧನದ ಅಗ್ರ 10 ಜಾಗತಿಕ ಮಾರಾಟಗಾರರಲ್ಲಿ ಹಾಗೂ ಯುರೋಪ್, ಮಧ್ಯಪ್ರಾಚ್ಯ ಮತ್ತು ಏಷ್ಯಾ ಪ್ರದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದರು.

ವಾಕ್ NEWS ಡಿಜಿಟಲ್

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ: ಮಾಡದಿದ್ದರೆ ಕಾರ್ಡ್ ರದ್ದು — ಸಚಿವ ಕೆ.ಹೆಚ್. ಮುನಿಯಪ್ಪ

ಮೈಸೂರು: ರಾಜ್ಯದ ಪಡಿತರ ಚೀಟಿದಾರರು ತಾವು ಫಲಾನುಭವಿಗಳಾಗಿರುವುದನ್ನು ದೃಢೀಕರಿಸಲು ಇ-ಕೆವೈಸಿ (e-KYC) ಪ್ರಕ್ರಿಯೆಗೂಡಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಆದೇಶ ನೀಡಿದ್ದಾರೆ. ಮಾಡದೆ ಇದ್ದಲ್ಲಿ ಅಂತಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಸರ್ಕಾರ ಸಜ್ಜು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳ ಅವಧಿ ನೀಡಬೇಕು ಎಂದು ಸೂಚಿಸಿದರು. ಈ ಅವಧಿಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಪಡಿತರ ಸೇವೆಯಿಂದ ವಂಚನೆ ಸಂಭವಿಸಲಿದೆ.

ಸಚಿವರು ಅಧಿಕಾರಿಗಳಿಗೆ ಮಾತನಾಡುವ ವೇಳೆ, ಇ-ಕೆವೈಸಿ ಕಾರ್ಯದಲ್ಲಿ ವಿಳಂಬವಾಗಬಾರದು, ತ್ವರಿತಗತಿಯ ಕಾರ್ಯವೈಖರಿಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಅನಗತ್ಯವಾಗಿ ಹೊಸ ಪಡಿತರ ಕಾರ್ಡುಗಳನ್ನು ವಿತರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸೂಚನೆ ಕೂಡ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚನೆ ಮಾಡುವಂತೆ ತಿಳಿಸಿದ ಅವರು, ಸಾರ್ವಜನಿಕರಲ್ಲಿ ಮಾಹಿತಿ ಅರಿವು ಹೆಚ್ಚಿಸಲು ಕ್ರಮ ಜರುಗಿಸಬೇಕೆಂದು ಹೇಳಿದರು.

ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ಸುರಕ್ಷತೆ ಕುರಿತಂತೆ ಮಾತನಾಡಿದ ಸಚಿವರು, ಗೋದಾಮುಗಳಲ್ಲಿ ಭದ್ರತೆಯೊಂದಿಗೆ ಸಂಗ್ರಹಿಸಬೇಕು ಮತ್ತು ಖರೀದಿ ಮಾಡಲಾದ ಧಾನ್ಯಗಳು ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ವಾಹನ ಸೌಲಭ್ಯ ಹಾಗೂ ಖಾಲಿ ಹುದ್ದೆಗಳ ಭರ್ತಿ ವಿಷಯದಲ್ಲಿಯೂ ಚರ್ಚೆ ನಡೆಯಿತು. ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ಖಾಲಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ನೀಡುವುದು ಹಾಗೂ ಕಂದಾಯ ಇಲಾಖೆಯಿಂದ ತಾತ್ಕಾಲಿಕ ಪ್ರಭಾರ ನೀಡುವುದು ಎಂದೂ ಹೇಳಿದ್ದಾರೆ.

ಸಮಾವೇಶ ಶಕ್ತಿಪ್ರದರ್ಶನವಲ್ಲ, ಇದು ಸಾಧನೆಯ ವೇದಿಕೆ: ಸಚಿವ ತಿಮ್ಮಾಪುರ ಸ್ಪಷ್ಟನೆ

ಹುಬ್ಬಳ್ಳಿ: ಮೈಸೂರಿನಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶ ಯಾವುದೇ ಶಕ್ತಿಪ್ರದರ್ಶನವಲ್ಲ, ಅದು ಕೇವಲ ಸರ್ಕಾರದ ಸಾಧನೆಗಳನ್ನು ಜನತೆಗೆ ತಲುಪಿಸುವ ಉದ್ದೇಶದೊಂದಿಗೆ ಆಯೋಜಿಸಲಾಗಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ತಿಮ್ಮಾಪುರ, “ಸಮಾವೇಶವನ್ನು ಸಿದ್ದರಾಮಯ್ಯನ ಶಕ್ತಿಪ್ರದರ್ಶನವೆಂದು ಬಿಂಬಿಸಲು ವಿರೋಧ ಪಕ್ಷ ಪ್ರಯತ್ನಿಸುತ್ತಿದೆ. ಆದರೆ ಸತ್ಯವೆಂದರೆ ಸಿದ್ದರಾಮಯ್ಯ ಅವರು ಈಗಾಗಲೇ ಮುಖ್ಯಮಂತ್ರಿ ಆಗಿದ್ದು, ರಾಜ್ಯದಾದ್ಯಂತ ಅವರಿಗೆ ಹೆಚ್ಚಿನ ಜನಮೆಚ್ಚುಗೆ ಇದೆ. ಅವರ ಬಹುಮಾನ ಮತ್ತು ನಾಯಕತ್ವವನ್ನು ಪಕ್ಷದ ಹೈಕಮಾಂಡ್ ಕೂಡಾ ಗುರುತಿಸಿದೆ. ಅವರ ವರ್ಚಸ್ಸು ವಿರೋಧ ಪಕ್ಷದ ನಾಯಕರಿಗೆ ಭಯ ಹುಟ್ಟಿಸುವಂತಾಗಿದೆ,” ಎಂದು ತೀವ್ರವಾಗಿ ಟೀಕಿಸಿದರು.

ತಿಂಗಳುಗಳ ಹಿಂದೆ ಮೈಸೂರು ಸಮಾವೇಶದ ಪ್ಲ್ಯಾನ್ ಆಗಿದ್ದು, ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ₹50 ಕೋಟಿ ಅನುದಾನ ಮೀಸಲಾಗಿರುವ ನಿರ್ಧಾರ ಈ ಸಮಾವೇಶಕ್ಕೆ ಯಾವುದೇ ಸಂಬಂಧವಿಲ್ಲವೆಂದು ಅವರು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಬಂದು ಶಾಸಕರ ಸಭೆ ನಡೆಸಿದ್ದು, ಹೈಕಮಾಂಡ್ ಸೂಚನೆಯಂತೆ ನಡೆದುಕೊಂಡಂತೆಯೇ ಆಗಿದೆ. “ಅವರು ಅಭಿವೃದ್ಧಿ ಕುರಿತು ಚರ್ಚೆ ನಡೆಸಿರಬಹುದು. ಆದರೆ ಸಚಿವರ ವಿರುದ್ಧ ಶಾಸಕರ ದೂರು ಹಾಗೂ ನಾನು ಸಭೆಗೆ ಕರೆದಿಲ್ಲ ಎಂಬುದು ನನಗೆ ಸ್ಪಷ್ಟವಾಗಿದೆ,” ಎಂದು ತಿಮ್ಮಾಪುರ ತಿಳಿಸಿದರು.

ರಾಯಚೂರಿನಲ್ಲಿ ರಾಜಕೀಯ ತೀವ್ರತೆ: ಕೆಡಿಪಿ ಸಭೆಯಲ್ಲಿ ಶಾಸಕರ ಅಸಮಾಧಾನ ಮತ್ತು ಅಧಿಕಾರಿಯ ಅವ್ಯವಸ್ಥೆ

ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಶಾಸಕರ ಅಸಮಾಧಾನ, ಶಾಸಕಿ ಭೂಪಟದ ಪ್ರತಿಭಟನೆ ಮತ್ತು ಅಧಿಕಾರಿ ರಮ್ಮಿ ಆಟವಾಡಿದ ಘಟನೆಗಳು ಪ್ರಮುಖ ವಿಷಯಗಳಾಗಿ ಹೊರಹೊಮ್ಮಿವೆ.

ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರ ಕಾರ್ಯಪದ್ಧತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರ ಮಾತಿನಂತೆ, ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದರೂ ಅಭಿವೃದ್ಧಿಯ ಪ್ರಗತಿ ಕಾಣುತ್ತಿಲ್ಲ, ಅಧಿಕಾರಿಗಳು ಶಾಸಕರಿಗೆ ಅಗತ್ಯ ಮಾಹಿತಿಯನ್ನು ನೀಡುವುದಿಲ್ಲ ಎಂಬುದಾಗಿ ತೀವ್ರ ಆರೋಪ ಹೊರಿಸಿದರು. ಮಸ್ಕಿ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ರೈತರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಂಡಿಸಿದರು. ಅವರು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಜೊತೆಯಾಗಿ ದೇವದುರ್ಗ ಕ್ಷೇತ್ರದ ಶಾಸಕಿ ಕರಿಯಮ್ಮ ನಾಯಕ ಅವರು ಸಭೆಯ ನಡುವೆ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಟೋಲ್ ಗೇಟ್ ನಿರ್ಮಾಣದಿಂದ ತಮ್ಮ ಕ್ಷೇತ್ರದ ಜನತೆಗೆ ತೊಂದರೆ ಆಗುತ್ತಿದೆ ಎಂಬ ಕಾರಣಕ್ಕೆ ಅವರು ಅಧಿಕಾರಿಗಳ ನಿರ್ಲಕ್ಷ್ಯವನ್ನು ಪ್ರಶ್ನಿಸಿದರು. ಅವರ ಪ್ರಕಾರ, ತಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ, ಅಧಿಕಾರಿಗಳು ಮಾಹಿತಿಯನ್ನೂ ನೀಡುತ್ತಿಲ್ಲ.

ಸಭೆಯಲ್ಲಿ ಮತ್ತೊಂದು ವಿವಾದಾತ್ಮಕ ಘಟನೆ ನಡೆದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಎಂಬವರು ಸಭೆ ನಡೆಯುತ್ತಿರುವಾಗಲೇ ತಮ್ಮ ಮೊಬೈಲ್‌ನಲ್ಲಿ ರಮ್ಮಿ ಆಟ ಆಡುತ್ತಿದ್ದುದು ದೃಢಪಟ್ಟಿದೆ. ಈ ಘಟನೆ ಸಭೆಯಲ್ಲಿ ಗಮನ ಸೆಳೆದ ನಂತರ ಸಚಿವರು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸಭೆಯಿಂದ ಹೊರಹಾಕಿದರು. ಅಲ್ಲದೆ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಯಿತು.

ಈ ಘಟನೆಗಳು ರಾಯಚೂರಿನ ಸ್ಥಳೀಯ ಆಡಳಿತದ ಸಮಸ್ಯೆಗಳನ್ನೂ, ಶಾಸಕರ ಹಾಗೂ ಅಧಿಕಾರಿಗಳ ನಡುವಿನ ಸಂವಹನದ ಕೊರತೆಯನ್ನೂ ಹೊರಹಾಕಿವೆ. ಸಭೆಯಲ್ಲಿ ಶಾಸಕಿಯ ಭೂಮಿಕೆಯಿಂದ ಹಿಡಿದು, ಅಧಿಕಾರಿಯ ಅಮಾನ್ಯ ವರ್ತನೆವರೆಗೆ ಹಲವು ವಿವಾದಗಳು ನಿಕಟಭವಿಷ್ಯದಲ್ಲಿ ರಾಜಕೀಯವಾಗಿ ಗಮನ ಸೆಳೆಯುವ ಸಾಧ್ಯತೆಯಿದೆ.

ಸಾಧನಾ ಸಮಾವೇಶದಿಂದ ಕಾಂಗ್ರೆಸ್‌ಗೆ ಬಲ?: ಸಿಎಂ ಸಿದ್ದರಾಮಯ್ಯ ಭಾರಿ ರ‍್ಯಾಲಿಗೆ ಸಜ್ಜು

ಮೈಸೂರು: ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಭರ್ಜರಿ ಸಾಧನಾ ಸಮಾವೇಶ (Sadhana Samavesha) ನಡೆಯಲಿದೆ. ಈ ಸಮಾರಂಭವನ್ನು “ಶಕ್ತಿ ಪ್ರದರ್ಶನ” ಎನ್ನುವ ರೀತಿಯಲ್ಲಿ ಬಿಜೆಪಿ ಟೀಕಿಸುತಿದ್ದರೂ, ಸಿಎಂ ಸಿದ್ದರಾಮಯ್ಯ ಇದನ್ನು ತಿರಸ್ಕರಿಸಿದ್ದಾರೆ.

600 ಅಡಿ ಉದ್ದದ ವಿಶಿಷ್ಟ ರ್ಯಾಂಪ್ ಸ್ಟೇಜ್ ಮೂಲಕ ಸಿಎಂ ಜನರ ಮಧ್ಯದಿಂದ ವೇದಿಕೆಗೆ ಎಂಟ್ರಿ ಕೊಡಲಿದ್ದು, ಜನರತ್ತ ಕೈ ಬೀಸಿ ತಮ್ಮ ಸ್ತಾನವನ್ನು ಪಡೆದುಕೊಳ್ಳಲಿದ್ದಾರೆ. ಸಭಾಂಗಣದ ಪ್ರತಿಯೊಂದು ಕುರ್ಚಿಯಲ್ಲಿ ಸಿಎಂ ಭಾವಚಿತ್ರ ಅಳವಡಿಸಲಾಗಿದ್ದು, ಇದು ಅಭಿಮಾನಿಗಳ ಮನಸ್ಸು ಗೆಲ್ಲುವ ಪ್ರಯತ್ನವೆನ್ನಬಹುದು.

ಈ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮತ್ತು ಸುರ್ಜೇವಾಲಾ ಉಪಸ್ಥಿತರಿರುವುದಾಗಿ ಪ್ರಕಟಿಸಲಾಗಿದ್ದರೂ, ವೇದಿಕೆಯಲ್ಲಿ ಅಥವಾ ಕುರ್ಚಿಗಳ ಮೇಲೆ ಅವರ ಫೋಟೋ ಕಾಣಿಸದಿರುವುದು ಗಮನ ಸೆಳೆಯುತ್ತಿದೆ.

ಪ್ರಮುಖ ಅಂಕಿಅಂಶಗಳು:

  • ಸಮಾವೇಶ ಬೆಳಗ್ಗೆ 11 ಗಂಟೆಗೆ ಪ್ರಾರಂಭ

  • ಸುಮಾರು 1 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ

  • ಮೈಸೂರು ನಗರ ವ್ಯಾಪ್ತಿಯಲ್ಲಿ ₹2,658 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

  • ಸ್ಥಳೀಯ ಫಲಾನುಭವಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಭಾರಿ ಸಭೆ.

  • ಸಿಎಂ ಸಿದ್ದರಾಮಯ್ಯ ತಮ್ಮ ಸಾಧನೆಗಳನ್ನ ಜನತೆಗೆ ತಲುಪಿಸಲು ಈ ವೇದಿಕೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಏನೆಲ್ಲ ಘೋಷಣೆಗಳು ಹೊರಬೀಳುತ್ತವೆ ಎಂಬ ನಿರೀಕ್ಷೆ ಮೈಸೂರಿನಲ್ಲಿ ಹೆಚ್ಚಾಗಿದೆ.

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸೀಮೆನ್ಸ್ ಮತ್ತು ಇಟಾಲ್ಸರ್ಟಿಫರ್‌ನಿಂದ ISA ಸೆರ್ಟಿಫಿಕೇಟ್

ಬೆಂಗಳೂರು: ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ (Yellow Line) ಇದೀಗ ಸ್ವತಂತ್ರ ಸುರಕ್ಷತಾ ಮೌಲ್ಯಮಾಪನ (ISA) ಪ್ರಮಾಣೀಕರಣ ಪಡೆದಿದ್ದು, ಮಾರ್ಗವನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ತೆರೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಈ ISA ಪ್ರಮಾಣಪತ್ರವನ್ನು ಇಟಲಿಯ ಸರ್ಕಾರಿ ಸ್ವಾಮ್ಯದ ಇಟಾಲ್ಸರ್ಟಿಫರ್ ಕಂಪನಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಗೆ ಸಲ್ಲಿಸಿದೆ. ಹಳದಿ ಮಾರ್ಗದ ಸಿಗ್ನಲಿಂಗ್ ಗುತ್ತಿಗೆದಾರ ಸೀಮೆನ್ಸ್ ಇಂಡಿಯಾ ಲಿಮಿಟೆಡ್–ಸೀಮೆನ್ಸ್ ಎಜಿ ಸಹಯೋಗದೊಂದಿಗೆ ಈ ಪ್ರಮಾಣೀಕರಣ ಕಾರ್ಯ ಪೂರ್ಣಗೊಂಡಿದೆ.

ಹಳೆಯ ತಾಂತ್ರಿಕ ದೋಷಗಳಿಂದಾಗಿ ಈ ಪ್ರಮಾಣೀಕರಣ ವಿಳಂಬವಾಗಿದ್ದರೂ, ಇದೀಗ ತಂತ್ರಾಂಶ ನವೀಕರಣದೊಂದಿಗೆ ಎಲ್ಲಾ ತೊಂದರೆಗಳನ್ನು ಸರಿಪಡಿಸಲಾಗಿದೆ. ISA ಪ್ರಮಾಣಪತ್ರದ ನಂತರ, ವರದಿಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಗೆ (CMRS) ಸಲ್ಲಿಸಲಾಗುವುದು ಎಂದು BMRCL ಪಿಆರ್ ಅಧಿಕಾರಿ ಯಶವಂತ್ ಚವಾಣ್ ತಿಳಿಸಿದ್ದಾರೆ.

BMRCL ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರು ಈ ಮೊದಲು ಹೇಳಿದಂತೆ, ಆಗಸ್ಟ್ 15ರೊಳಗೆ ಹಳದಿ ಮಾರ್ಗ ಆರಂಭವಾಗುವ ನಿರೀಕ್ಷೆ ಇದೆ.

ಹಳದಿ ಮಾರ್ಗದ ವಿವರಗಳು:
RV ರಸ್ತೆ – ಬೊಮ್ಮಸಂದ್ರ ನಡುವಿನ ಈ 18.8 ಕಿ.ಮೀ ಉದ್ದದ ಹಳದಿ ಮಾರ್ಗದಲ್ಲಿ 16 ನಿಲ್ದಾಣಗಳು ಇರುವುದರ ಜೊತೆಗೆ, ಗ್ರೀನ್‌ಲೈನ್ ಜತೆ ಸಂಪರ್ಕ ಹೊಂದಿರುವುದರಿಂದ ದಕ್ಷಿಣ ಬೆಂಗಳೂರು ಪ್ರದೇಶದ ನಾಗರಿಕರಿಗೆ ನಗರದ ಕೇಂದ್ರ ಭಾಗಗಳಿಗೆ ಸುಲಭ ಪ್ರವೇಶ ಲಭ್ಯವಾಗಲಿದೆ.

ಉಕ್ರೇನ್‌ಗೆ ಹೊಸ ಪ್ರಧಾನಿ ಯೂಲಿಯಾ ಸ್ವೈರಿಡೆಂಕೊ: ಯುದ್ಧದ ನಡುವೆ ನೂತನ ನಾಯಕತ್ವ

ಕೀವ್, ಜುಲೈ 18 – ರಷ್ಯಾ ವಿರುದ್ಧದ ಯುದ್ಧದ ಮಧ್ಯೆ ಉಕ್ರೇನ್ ಹೊಸ ಪ್ರಧಾನಿಯನ್ನು ಪಡೆದಿದೆ. 39 ವರ್ಷದ ಅರ್ಥಶಾಸ್ತ್ರಜ್ಞೆ ಹಾಗೂ ಅನುಭವಿ ತಂತ್ರಜ್ಞೆ ಯೂಲಿಯಾ ಸ್ವೈರಿಡೆಂಕೊ ಅವರನ್ನು ರಾಷ್ಟ್ರಪತಿ ವ್ಲಾದಿಮಿರ್ ಝೆಲೆನ್ಸ್ಕಿ ಅವರು ನೂತನ ಪ್ರಧಾನಿಯಾಗಿ ನೇಮಕ ಮಾಡಿದ್ದಾರೆ.

ಯೂಲಿಯಾ ಸ್ವೈರಿಡೆಂಕೊ ಹಿಂದಿನ ವಿತ್ತಸಚಿವರಾಗಿದ್ದು, ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ಆಡಳಿತದಲ್ಲಿ ದೀರ್ಘ ಅನುಭವ ಹೊಂದಿದ್ದಾರೆ. ಅವರು ದೇಶೀಯ ಆರ್ಥಿಕ ಅಭಿವೃದ್ಧಿಗೆ ಮಹತ್ವಪೂರ್ಣ ಕೊಡುಗೆ ನೀಡಿರುವ ಹಿಂದೆ ಪ್ರಾದೇಶಿಕ ಆರ್ಥಿಕ ನಾಯಕತ್ವದಿಂದ ಪ್ರಥಮ ಉಪ ಪ್ರಧಾನ ಮಂತ್ರಿಯವರೆಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಈ ನೇಮಕಕ್ಕೆ ಕೇವಲ ಎರಡು ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ಡೆನಿಸ್ ಶ್ಮೆಹಾಲ್ ರಾಜೀನಾಮೆ ನೀಡಿದ್ದರು. ಯೂಲಿಯಾ ತಮ್ಮ ಪ್ರಮಾಣವಚನ ಕಾರ್ಯಕ್ರಮದಲ್ಲಿ, “ರಕ್ಷಣಾ ಉತ್ಪಾದನೆಯ ಬೆಳವಣಿಗೆ, ಸಾರ್ವಜನಿಕ ಹಣಕಾಸಿನ ಪಾರದರ್ಶಕತೆ ಮತ್ತು ಖಾಸಗೀಕರಣದ ತ್ವರಿತೀಕರಣ” ಎಂಬ ಮೂರೂ ನಿಖರ ಗುರಿಗಳನ್ನು ಉಲ್ಲೇಖಿಸಿದರು.

ರಷ್ಯಾ ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸುತ್ತಿರುವ ಈ ಹಿನ್ನಲೆಯಲ್ಲಿ, ಹೊಸ ಪ್ರಧಾನಿಯ ನೇಮಕವು ಉಕ್ರೇನ್ ಸೇನೆಯ ಪುನಶ್ಚೇತನ ಮತ್ತು ಆರ್ಥಿಕ ಸ್ಥೈರ್ಯದತ್ತ ದಿಟ್ಟ ಹೆಜ್ಜೆಯಾಗಿ ಪರಿಗಣಿಸಲಾಗಿದೆ.