Home Blog Page 50

ನಟಿ ಸರೋಜಾದೇವಿ ನಿಧನ – ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ತೀವ್ರ ಸಂತಾಪ.

ಬೆ0ಗಳೂರು/ಹುಬ್ಬಳ್ಳಿ.  ಕನ್ನಡದ ಗಿಳಿ ಅಭಿನಯ ಸರಸ್ವತಿ, ಸರಳ ಸಜ್ಜನಿಕೆ ಹೆಸರುವಾಸಿಯಾದ ಬಹುಬಾಷಾ ನಟಿ ಶ್ರೀಮತಿ ಬಿ. ಸರೋಜಾದೇವಿ ಇವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಶೋಕ ಸಂದೇಶದಲ್ಲಿ ಅವರು, ಸುಮಾರು 6 ರಿಂದ 7 ದಶಕಗಳ ಕಾಲ ಚಿತ್ರರಂಗವನ್ನು ಆಳಿದ ಹಿರಿಯ ನಟಿ ಬಿ. ಸರೋಜಾದೇವಿ ಅವರು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತುಮಿಳು ಭಾಷೆಗಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ತಮ್ಮ ಮನೋಜ್ಞ ಅಭಿನಯದ ಮೂಲಕ ಅಭಿನಯ ಸರಸ್ವತಿ ಎಂದು ಪ್ರಖ್ಯಾತಿಯನ್ನು ಪಡೆದಿದ್ದರು. “ಕಿತ್ತೂರು ಚೆನ್ನಮ್ಮ” ಚಲನ ಚಿತ್ರದಲ್ಲಿ ರಾಣಿ ಚೆನ್ನಮ್ಮನಾಗಿ ಸರೋಜಾದೇವಿ ಅವರ ಮನೋಜ್ಞ ಅಭಿನಯ ಇಂದಿಗೂ ಕಣ್ಣಿಗೆ ಕಟ್ಟಿದ್ದಂತಿದೆ ಎಂದು ಹೇಳಿರುವ ಶ್ರೀ ಬಸವರಾಜ ಹೊರಟ್ಟಿ, ರಾಣಿ ಕಿತ್ತೂರ ಚೆನ್ನಮ್ಮನನ್ನು ನೋಡಿರದ ತಾವು ಶಾಲಾ ದಿನಗಳಲ್ಲಿ ಬಿ. ಸರೋಜಾದೇವಿ ಅವರನ್ನೇ ಚೆನ್ನಮ್ಮ ರಾಣಿ ಎಂದೇ ಭಾವಿಸಿದ್ದು, ಇಂದಿಗೂ ತಮ್ಮ ಸ್ಮೃತಿ÷ ಪಟಲದಲ್ಲಿದೆ ಎಂದು ಹಳೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಕನ್ನಡದಲ್ಲಿ ಡಾ. ರಾಜ್‌ಕುಮಾರ್, ಉದಯಕುಮಾರ್, ಕಲ್ಯಾಣ ಕುಮಾರ್, ತಮಿಳಿನ ಶಿವಾಜಿ ಗಣೇಶನ್, ಎಂ.ಜಿ ರಾಮಚಂದ್ರನ್, ತೆಲುಗು ನಟ ಎನ್.ಟಿ.ಆರ್, ನಾಗೇಶ್ವರರಾವ್ ಸೇರಿದಂತೆ ಹಲವು ಖ್ಯಾತನಾಮ ಕಲಾವಿದರೊಂದಿಗೆ ನಟಿಸಿದ್ದ ಸರೋಜಾದೇವಿ ಅವರು ಕನ್ನಡದ ಮೊಟ್ಟ ಮೊದಲ ಸೂಪರ್‌ಸ್ಟಾರ್ ಲೇಡಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು. ಪದ್ಮಶ್ರೀ, ಪದ್ಮಭೂಷಣ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತು ಹಲವು ರಾಜ್ಯ, ರಾಷ್ಟç ಮತ್ತು ಚಿತ್ರರಂಗದ ಹಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದ ಕನ್ನಡದ ಅಪ್ರತಿಮ ಕಲಾವಿದೆಯಾಗಿದ್ದ ಬಿ. ಸರೋಜಾದೇವಿ ಅವರ ನಿಧನದಿಂದ ಕನ್ನಡದ ಸಾಂಸ್ಕೃತಿಕ ಲೋಕ ಒಂದು ಅನರ್ಘ್ಯ ರತ್ನವನ್ನು ಕಳೆದುಕೊಂಡAತಾಗಿದೆ ಎಂದು ಶ್ರೀ ಬಸವರಾಜ ಹೊರಟ್ಟಿ ಕಂಬಿನಿ ಮಿಡಿದಿದ್ದಾರೆ.
ಇವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮಾನ್ಯ ಶ್ರೀ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
VKNEWS DIGITAL :

ಬೆಂಗಳೂರಿನಲ್ಲಿ ಏರಿಕೆ ಕಂಡ ಚಿನ್ನದ ಬೆಲೆ

ಬೆಂಗಳೂರು: ಬೆಂಗಳೂರು ನಗರದಲಿಲ ಚಿನ್ನದ ಬೆಲೆ ವಾರ ಏರಿಕೆ ಕಂಡಿದ್ದು, 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 9,140 ರೂ.ನಿಂದ 9,155 ರೂ.ಗೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿರುವುದಿಲ್ಲ ಎಂದು ತಿಳಿದುಬಂದಿದೆ. 24 ಕ್ಯಾರಟ್ ಚಿನ್ನದ ಬೆಲೆ 9,988 ರೂ.ಗೆ ತಲುಪಿದ್ದು, ಬೆಂಗಳೂರು, ಮುಂಬೈ, ದೆಹಲಿ ಮುಂತಾದ ಕಡೆ ಬೆಳ್ಳಿ ಬೆಲೆ 100 ಗ್ರಾಮ್‌ಗೆ 11,500 ರೂ. ಇದ್ದರೆ, ಚೆನ್ನೆöÊ ಮತ್ತು ಕೇರಳದಲ್ಲಿ 12,500 ರೂ. ದಾಖಲೆಯ ಗರಿಷ್ಠ ಮಟ್ಟ ಮುಟ್ಟಿದೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆಯು ಸ್ಥಿರ ಏರಿಕೆ ಕಂಡಿದೆ, ಆದರೆ ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಗಮನಾರ್ಹ ಬದಲಾವಣೆ ಇಲ್ಲ. ಭಾರತದಲ್ಲಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 91,550 ರೂ. ಮತ್ತು 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 99,880 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಮ್‌ಗೆ 11,500 ರೂ.ನಲ್ಲಿ ಸ್ಥಿರವಾಗಿದೆ.

VK NEWS DIGITAL :

ದೇಶದ ರಾಜಕಾರಣಕ್ಕೆ ನಿವೃತ್ತಿ ಇದೆಯಾ?

BIG NEWS : ಅಭಿನಯ ಸರಸ್ವತಿ ಸರೋಜಾದೇವಿ ಅಸ್ತಂಗತ…!

ಬೆ0ಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ಅವರು ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಬಾರದ ಲೋಕಕ್ಕೆ ತೆರಳಿದ್ದಾರೆ.
ಜನವರಿ 7, 1938 ರಲ್ಲಿ ಜನಿಸಿದ ಬಿ. ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಲ್ಲೇಶ್ವರದ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು ಎಂದು ತಿಳಿಬಂದಿದ್ದು, ಮೃತದೇಹವನ್ನು ಆಸ್ಪತ್ರೆಯ ಸಮೀಪದ ನಿವಾಸದಲ್ಲಿ ಇರಿಸಲಾಗಿದ್ದು ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ.

ಈಗಾಗಲೇ ಹಲವಾರು ಗಣ್ಯರು ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಿಗ್ಗೆ ಹಿರಿಯ ನಟರುಗಳಾದ ಉಪೇಂದ್ರ ಹಾಗೂ ಜಗ್ಗೇಶ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಎನ್ನಲಾಗಿದೆ.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಕನ್ನಡದ ಮೇರು ನಟ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷಿಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಇತ್ಯಾದಿ ಹಲವು ಚಿತ್ರಗಳಲ್ಲಿ ನಟಿಸಿರುವ ಹೆಮ್ಮೆ ಬಿ.ಸರೋಜಾ ದೇವಿ ಅವರದು…
ಅಂತೆಯೇ, ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿರುವರು. ಹಿಂದಿಯಲ್ಲಿ ಕೂಡಾ ಬಿ. ಸರೋಜಾದೇವಿ ಅವರು ನಟಸಿದ್ದು, ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿರುವರು.

 

 

BIG NEWS : ಅಕ್ರಮ ಆಸ್ತಿ : ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು,ಜು.13; ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ  ಕೆ ಎಸ್ ಈಶ್ವರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದೆ.

ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಮತ್ತು ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಈಶ್ವರಪ್ಪ, ಅವರ ಪುತ್ರ ಕೆ ಇ ಕಾಂತೇಶ್‌ ಮತ್ತು ಸೊಸೆ ಶಾಲಿನಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ನಡೆಸಿತು.  ಪ್ರಕರಣಕ್ಕೆ ತಡೆ ನೀಡಿದ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು. ಈಶ್ವರಪ್ಪ ಪರ ವಕೀಲ ವಿನೋದ್‌ ಕುಮಾರ್‌ ವಕಾಲತ್ತು ವಹಿಸಿದ್ದಾರೆ.

ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ 2006ರಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವರಾದ ನಂತರ ಶಿವಮೊಗ್ಗದಲ್ಲಿ ತಮ್ಮ ಪುತ್ರ ಕೆ ಇ ಕಾಂತೇಶ್‌ ಮತ್ತು ಸೊಸೆ ಶಾಲಿನಿ ಅವರು ಹೆಸರಿನಲ್ಲಿ ಕೋಟ್ಯಂತರ ಬೆಲೆ ಬಾಳುವ ಚರ ಮತ್ತು ಸ್ಥಿರಾಸ್ತಿ ಖರೀದಿಸಿದ್ದಾರೆ. ಅಲ್ಲದೆ, ಈ ಮೂವರು ಜಂಟಿಯಾಗಿ ಹಲವು ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳು, ಆಟೋ ಮೊಬೈಲ್‌ ಶೋರೂಂಗಳನ್ನು ನಡೆಸುತ್ತಿದ್ಧಾರೆ.ಈ ಶ್ವರಪ್ಪ ಶಾಸಕರಾಗುವ ಮುನ್ನ 2006ರಲ್ಲಿ ಸಚಿವರಾದ ನಂತರ ಕೇವಲ ಮೂರೂವರೆ ವರ್ಷದಲ್ಲಿ ಶೇ.100ರಷ್ಟು ಅಧಿಕ ಆಸ್ತಿ ಸಂಪಾದನೆ ಮಾಡಿದ್ದಾರೆ. ಆದ್ದರಿಂದ, ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿಯಲ್ಲಿ ಭ್ರಷ್ಟಚಾರ, ಅಕ್ರಮ ಆಸ್ತಿ ಸಂಪಾದನೆ ಮತ್ತು ಅಧಿಕಾರ ದುರುಪಯೋಗ ಆರೋಪದ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸುವಂತೆ ಕೋರಿ ವಕೀಲ ಬಿ ವಿನೋದ್‌ 2021ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿ ವಿನೋದ್‌ ಅವರ ದೂರು ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ಸೆಕ್ಷನ್‌ 13(1)(ಡಿ) (ಅಕ್ರಮ ಸಂಪಾದನೆಗೆ ಅಧಿಕಾರ ದುರ್ಬಳಕೆ ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್‌ 420ರ (ವಂಚನೆ), ಸೆಕ್ಷನ್‌ 120-ಬಿ (ಅಪರಾಧಿಕ ಒಳಸಂಚು) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ 2025ರ ಏಪ್ರಿಲ್‌ 5ರಂದು ಆದೇಶಿಸಿತ್ತು.

ಎಂಜಿ ರೋಡ್ ಮತ್ತು ಕೋರಮಂಗಲ ಪಬ್ ಮೇಲೆ ದಾಳಿ: ವಿದೇಶಿ ಡ್ರಗ್ ಪೆಡ್ಲರ್‍ ಗಳ ಅರೆಸ್ಟ್

ಬೆಂಗಳೂರು: ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಮತ್ತು ಸಿಸಿಬಿ ಪೊಲೀಸರು ಬೆಂಗೂರಿನ ಪ್ರಮುಖ ಪಬ್‍ಗಳ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‍ಗಳ ಬಂಧಿಸಿರುವುದಾಗಿ ವರದಿಯಾಗಿದೆ.
ಬೆಂಗಳೂರಿನ ಐಷಾರಾಮಿ ಟೆಕ್ನೋ ಪಾರ್ಟಿಗಳಿಗೆ ವಿವಿಧ ರೀತಿಯ ಡ್ರಗ್ ಸರಬರಾಜು ಮಾಡುತ್ತಿದ್ದುದರ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಇದೇ ವೇಳೆ ವಿದೇಶಿಗರು ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ಮೇರೆಗೆ ಶನಿವಾರ ರಾತ್ರಿ ನಗರದ ಎಂಜಿ ರೋಡ್ ಮತ್ತು ಕೋರಮಂಗಲದ ಎರಡು ಪಬ್‍ಗಳ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಡಿಜೆ ಆಪರೇಟರ್‍ಗಳಾಗಿ ಕೆಲಸ ಮಾಡ್ತಿದ್ದ ಇಬ್ಬರು ವಿದೇಶಿಗರು ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಪಬ್‍ಗಳಿಂದಲೇ ಯುವಕರನ್ನು ಸಂಪರ್ಕ ಮಾಡಿ ಡ್ರಗ್ಸ್ ರವಾನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಐಷಾರಾಮಿ ಪಾರ್ಟಿಗಳಿಗೂ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. ವಿಚಾರಣೆ ಸಂದರ್ಭದಲ್ಲಿ ನಗರಕ್ಕೆ ವಿದ್ಯಾಭ್ಯಾಸ ವೀಸಾದಲ್ಲಿ ಬಂದಿರುವ ಹಲವರು, ವೀಸಾ ಅವಧಿ ಮುಗಿದ ನಂತರವೂ ಇಲ್ಲೇ ಉಳಿದುಕೊಂಡು ಡ್ರಗ್ ಪೆಡ್ಲರ್‍ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

14-7-2025ರ ಸೋಮವಾರದಂದು ಲೋಕಾರ್ಪಣೆಗೊಳ್ಳಲಿರುವ ಸಿಗಂದೂರಿನ ಪ್ರತಿಷ್ಠಿತ ಕೇಬಲ್ ಸೇತುವೆ

ಬೆಂಗಳೂರು,ಜು.13; ರಾಜ್ಯದ ಅತಿದೊಡ್ಡ ಕೇಬಲ್ ಸೇತುವೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಸಿಗಂಧೂರು ಕೇಬಲ್ ಸೇತುವೆಯನ್ನು ನಾಳೆ ಲೋಕಾರ್ಪಣೆಗೊಳಿಸಲಾಗುತ್ತಿದೆ.

ಸುಮಾರು 423 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ದೇಶದಲ್ಲಿ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾದ ಅಂಬಾರಗೋಡ್ಲು- ಕಳಸವಳ್ಳಿ- ಸಿಗಂಧೂರು ಸಂಪರ್ಕ ಸೇತುವೆಯನ್ನು ನಿರ್ಮಿಸಲಾಗಿದೆ.

ಈ ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿ ಪಕ್ಷ ಆರ್. ಅಶೋಕ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಶರಾವತಿ ಹಿನ್ನೀರು ಪ್ರದೇಶದಲ್ಲಿರುವ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಭಕ್ತರು ಈ ಮೊದಲು ಶರಾವತಿ ಹಿನ್ನೀರಿನಲ್ಲಿ ಬಾರ್ಜ್ ನಲ್ಲಿ ಪ್ರಯಾಣಿಸಬೇಕಿತ್ತು. ಇದೀಗ ಸೇತುವೆ ನಿರ್ಮಾಣದಿಂದ ಭಕ್ತರಿಗೆ ಹಾಗೂ ಅಂಬಾರಗೋಡ್ಲು- ಕಳಸವಳ್ಳಿ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ಈ ಸೇತುವೆ ನಿರ್ಮಾಣದಿಂದ ಈ ಪ್ರದೇಶದ ಜನರ ಆರು ದಶಕಗಳ ಕನಸು ನನಸಾದಂತಾಗಿದೆ.

ಶರಾವತಿ ನದಿಯ ಹಿನ್ನೀರಿನ ಮೇಲೆ ನಿರ್ಮಾಣವಾಗಿರುವುದರಿಂದ, ಸ್ಥಳೀಯರಿಗೆ ಸಂಪರ್ಕದ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ್ದಾಗಿದೆ. ಆರ್ಥಿಕತೆ ದೃಷ್ಟಿಯಿಂದ ಹಲವಾರು ಜನರಿಗೆ ಇದರಿಂದ ಪ್ರಯೋಜನವಾಗಲಿದೆ. ಈ ಸೇತುವೆ ಸಾಗರ ತಾಲೂಕಿನ ಜನರಿಗೆ ಪಕ್ಕದ ಊರುಗಳಿಗೆ ತೆರಳಲು ಸುಗಮ ಸಂಪರ್ಕ ಸೇತುವೆಯಾಗಿ ಸೇವೆಗೆ ಒದಗಲಿದೆ.
2019ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂಪಾಯಿ ವೆಚ್ಚದ ಈ ಕಾಮಗಾರಿಗೆ ಚಾಲನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸೇತುವೆ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2.24 ಕಿಲೋಮೀಟರ್ ಉದ್ದ ಮತ್ತು 16 ಮೀಟರ್ ಅಗಲವಿರುವ ಈ ಸೇತುವೆ 740 ಮೀಟರ್ ಕೇಬಲ್‍ಗಳ ಆಧಾರದ ಮೇಲೆ ನಿರ್ಮಾಣಗೊಂಡಿದೆ.
ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸಂಪರ್ಕ ಕಲ್ಪಿಸಲಿರುವ ಈ ಸೇತುವೆ, ಸ್ಥಳೀಯರಿಗೆ ಹಲವಾರು ರೀತಿಯ ಸೌಕರ್ಯವಾಗಲಿದೆ.
ಸೇತುವೆಯ ಉದ್ದ: 2,125 ಮೀಟರ್ (2.1 ಕಿಲೋಮೀಟರ್), ಅಗಲ: 16 ಮೀಟರ್, ಕೇಬಲ್ ಎತ್ತರ: 38.5 ಮೀಟರ್, ಪಾದಚಾರಿ ಮಾರ್ಗ: 2 X 1.5 ಮೀಟರ್ , ಸಂಪರ್ಕ ರಸ್ತೆ: 1.05 ಕಿಮೀ ರಿಂದ 3 ಕಿಮೀ ವರೆಗೆ ಇರುತ್ತದೆ., ಸೇತುವೆಯ ತಳಪಾಯ: 164 ಫೈಲ್ ಗಳು (ಭದ್ರವಾದ ನಿರ್ಮಾಣ) ಹಾಗೂ ಉಕ್ಕಿನ ಕೇಬಲ್ ಉದ್ದ: 470 ಮೀಟರ್

ತಂಬೂರಿ ಪದ ಗಾಯಕರು ಕೇಬ್ಬೇಪುರದ ಆರ್. ಸಿದ್ಧರಾಜು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್.ಸಿದ್ಧರಾಜು ಆ ಭಾಗದಲ್ಲಿ ಹೆಸರುವಾಸಿಯಾಗಿರುವ ತಂಬೂರಿಪದ ಕಲಾವಿದರು. ಜನಪದ ಕಾವ್ಯವನ್ನು ರಾತ್ರಿಯಿಡಿ ತಂಬೂರಿ ನುಡಿಸಿಕೊಂಡು ಹಾಡುವ ಪ್ರತಿಭಾವಂತರು.

ಇವರ ತಂದೆ ದಿವಂಗತ ಕೆ.ಬಿ.ರಾಚಯ್ಯ ಕೂಡ ಜನಪದ ಹಾಡುಗಾರರಾಗಿ ಆಕಾಶವಾಣಿಯ ಎ-ಗ್ರೇಡ್ ಕಲಾವಿದರಾಗಿದ್ದರು. ಹಾಡುಗಾರಿಕೆಯನ್ನು ತಂದೆಯಿಂದ ಬಳುವಳಿಯಾಗಿ ಪಡೆದಿರುವ ಸಿದ್ಧರಾಜು ಕೂಡ ಆಕಾಶವಾಣಿ ಎ-ಗ್ರೇಡ್ ಕಲಾವಿದರು. ಕಳೆದ 42 ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕøತಿಕ ಕಾರ್ಯಕ್ರಮ, ಜಾತ್ರೆ ಉತ್ಸವಗಳಲ್ಲಿ ಜನಪದ ಕತೆ ಕಾವ್ಯಗಳನ್ನು ಹಾಡಲು ಹೋಗುತ್ತಾರೆ. 3ನೇ ತರಗತಿ ಅಷ್ಟೇ ಓದಿದ್ದರೂ ತಮ್ಮ ಮಸ್ತಕದಲ್ಲಿ ಪುಸ್ತಕಕ್ಕಿಂತಲೂ ಹೆಚ್ಚಾದ ಜನಪದ ಸಾಹಿತ್ಯ ತುಂಬಿಕೊಂಡಿದ್ದಾರೆ. ಇವರು ಸುಮಾರು 15ಕ್ಕೂ ಹೆಚ್ಚಿನ ಕತೆಗಳನ್ನು ತಾಳ ತಂಬೂರಿಗೆ ತಕ್ಕಂತೆ ಹಾಡುವರು. ಇವರು ಹಾಡಿಕೊಂಡು ಬಂದಿರುವ ಕಥೆಗಳು ಮಂಟೇಸ್ವಾಮಿ ತಂಬೂರಿ ಕಥೆ, ರಾಜ ಸತ್ಯವ್ರತ, ಬಣಜಿ ಹೊನ್ನಮ್ಮ, ದೊಡ್ಡಬಸವಣ್ಣನ ಕತೆ, ಅಣ್ಣತಂಗಿ ಕಥೆ, ನಲ್ಲತಂಗಿ ಕಥೆ, ಕುಂತಿ ಪದ, ಮುಡುಕುತೊರೆ ಮಲ್ಲಪ್ಪ, ಅರ್ಜುನ ಜೋಗಿ, ಬಾಲ್ನಾಗÀಮ್ಮ, ಮೈದಾಲರಾಮ, ನಿಂಗರಾಜಮ್ಮ. ಚೆನ್ನಿಗರಾಯ, ಕಾಳಿಂಗರಾಜನ ಕಥೆ ಪಿರಿಯಾಪಟ್ಟಣ ಕಾಳಗ.. ಹೀಗೆ ಜನಪದ ಕಥೆ ಕಾವ್ಯಗಳನ್ನು ಸುಶ್ರಾವ್ಯವಾಗಿ ಹಾಡುವುದನ್ನು ಮೈಗೂಡಿಸಿಕೊಂಡಿದ್ದಾರೆ.

ಇಷ್ಟೂ ಕಥೆ ಹಾಡುಗಳನ್ನು ಕಲಿತಿರುವುದು ಇವರ ತಂದೆಯವರಿಂದ. ಜನಪದ ಹಾಡುವಾಗ ಇವರು ತಾಳ ತಂಬೂರಿ ಡಿಕ್ಕಿ ದಂಬ್ಡಿ, ಕಂಬ್ಚಿ ಜಾರ್ಲಿ ಚಿಟಗದಾಳ ಬಳಸಿಕೊಂಡು ರಾಗತಾಳಗಳಿಗೆ ಹೊಂದಿಸಿ ಹಾಡುವರು. ಪಿ.ನಾಗರತ್ನಮ್ಮ ಮಳವಳ್ಳಿ ಇವರ ಸಂಪಾದಿತ ಮಂಟೇಸ್ವಾಮಿ ಜನಪದ ಕಾವ್ಯ ಕೃತಿಗೆ ಇವರಿಂದ ಹಾಡಿಸಿ ಹೊಸ ಕಾವ್ಯ ಸಂಗ್ರಹಿಸಿದ್ದಾರೆ. ‘ಈವರೆವಿಗೆ ಇವರು ಹಾಡಿರುವ ಕಥೆಯಲ್ಲಿ ಎಲ್ಲರೂ ಹಾಡುವ ಕತೆ ಮಾತ್ರ ಇತ್ತು. ಈಗ ಮಂಟೇಸ್ವಾಮಿಯವರ ಜೀವನಯಾತ್ರೆಯ ಪ್ರತಿಯೊಂದು ಸ್ಥಳ, ಪ್ರತಿಯೊಂದು ಜನರ ಬಗ್ಗೆ ಪದ ಕಟ್ಟಿ ಹಾಡಲಾಗಿರುತ್ತದೆ. ನಾನು ಹೊಸಕಥೆಯನ್ನು ಹೇಳುವಾಗ ಅವರಿಗೆ ತುಂಬಾ ಕುತೂಹಲ. ಅಷ್ಟೇ ಸುಶ್ರಾವ್ಯವಾಗಿ ಹಾಡಿರುತ್ತಾರೆ. ಸಿದ್ಧರಾಜುರವರ ಜೊತೆಗೆ ಹಿಮ್ಮೇಳ ಕಲಾವಿದರು ನೀಲಿಸಿದ್ದಯ್ಯ, ರಾಚಯ್ಯ ಇವರು ಸಹ ಅಷ್ಟೇ ರಾಗವಾಗಿ ಮನತುಂಬಿ ಹಾಡಿರುತ್ತಾರೆ. ನಾನು ರಚಿಸಿರುವ ಧರೆ ಕಂಡ ಧರ್ಮಗುರು ಪುಸ್ತಕದಲ್ಲಿರುವ ಸ್ಥಳ ಮಾಹಿತಿಯನ್ನು ಹೇಳಿದಾಗ ಅವರು ರಾಗ ಕಟ್ಟಿ ತಮ್ಮ ತಾಳ ತಂಬೂರಿಗೆ ತಕ್ಕಂತೆ ಹಾಡಿನ ದಾಟಿಗೆ ಹೊಂದಿಕೊಂಡಂತೆ ಕೆಲವು ಕಡೆ ಉದಾಹರಣೆಗೆ ರಾಜಕ್ಕ ಕಾಳಮ್ಮ ಇಂತ ಕಾಲ್ಪನಿಕ ಹೆಸರು ಸೇರಿಸಿಕೊಂಡು ಹಾಡಿದರು. ಇದು ನಿಜವಾಗಿಯೂ ಒಬ್ಬ ಕಲಾವಿದನ ಚತುರತೆ ಎನಿಸಿತು ಎಂದು ನಾಗರತ್ನಮ್ಮ ಶ್ಲಾಘಿಸಿದ್ದಾರೆ. ಗುಂಡ್ಲುಪೇಟೆ ಶಿಕ್ಷಕರ ಭವನದಲ್ಲಿ ದಿ.13-3-2023ರಂದು ಮಂಟೆಸ್ವಾಮಿ ಜಾನಪದ ಕಾವ್ಯ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ತಾ. ಕಸಾಪ ಮತ್ತು ತಾವು ಅಧ್ಯಕ್ಷರಾಗಿರುವ ಮಳವಳ್ಳಿ ಸುಂದ್ರಮ್ಮ ಸಾಂಸ್ಕøತಿಕ ವೇದಿಕೆಯಿಂದ ಸನ್ಮಾನಿಸಿದ್ದಾರೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು ಪುತ್ತೂರು ದ.ಕ. 2016ರ ಅಕ್ಟೋಬರ್ 15,16ರಂದು ಏರ್ಪಡಿಸಿದ ಜಾನಪದ ಉತ್ಸವದಲ್ಲಿ ಕಲಾರಶ್ಮಿ ಸಮ್ಮಾನ ನೀಡಿದೆ. ಗುಂಡ್ಲುಪೇಟೆಯಲ್ಲಿ 2022ರಲ್ಲಿ ಕೆಲವು ಸಂಘಸಂಸ್ಥೆಗಳು 75ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಂಟೇಸ್ವಾಮಿ ನೀಲಗಾರ ಪ್ರಶಸ್ತಿ ನೀಡಿವೆ. ಇದೇ ವರ್ಷ ಮಂಠೆಸ್ವಾಮಿ ಮಠ ಮಳವಳ್ಳಿ ಅಡಿಹೊನ್ನಾಯನಕನಹಳ್ಳಿ ಶ್ರೀಕ್ಷೇತ್ರ ಕಪ್ಪಡಿ ಜಾತ್ರೆಯಲ್ಲಿ ಪ್ರಶಸ್ತಿ ಪತ್ರ ಸಂದಿದೆ.

ಇವರ ತಂಬೂರಿ ಪದ ಗಾಯನ ಸಾಧನೆ ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಬೀದರ್‍ನ ಚನ್ನಬಸಪ್ಪ ಪಟ್ಟದೇವರ ರಂಗಮಂದಿರದಲ್ಲಿ ದಿ.15-3-2025ರಂದು 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಸಿದ್ದರಾಜುರವರೇ, ನೀವು ಈವರೆಗೆ ಎಷ್ಟು ಕಾರ್ಯಕ್ರಮ ನೀಡಿರುವಿರಿ ಎಂದು ನಾನು ಕೇಳಿದೆ. ಐದು ಸಾವಿರ ಆಗಿರಬಹುದು, ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಬೇಕು ಎಂದರು. ಹಾಕಿ ಶುಭವಾಗಲಿ ಎಂದೆ.

ಗೊರೂರು ಅನಂತರಾಜು, ಹಾಸನ.
ಮೊ: 9449462879
ವಿಳಾಸ: ಹುಣಸಿನಕೆರೆ ಬಡಾವಣೆ, 29ನೇ ವಾರ್ಡ್, ಶ್ರೀ ಶನೀಶ್ವರ ದೇವಸ್ಥಾನ ರಸ್ತೆ, ಹಾಸನ.

 

Safety measures taken in Food Safety and Drug Administration Department

In Food Safety and Drug Administration Department both Food Safety and Drugs Administration wing is working to ensure the quality and safety of the food and drug consumed by the public and thereby maintaining the health of the public.

Drug Administration:

In the of June 2025 Enforcement officers of Drug Administration wing has conducted 2,544 Inspection, 133 Drug license were suspended and 20 drug licenses cancelled for the violations of the provisions of the Drugs and Cosmetics Act, 1940 and Rules thereunder.

In the Month of June 2025. Drugs Testing Laboratories at Bangalore, Hubli and Bellary have analysed 1,333 samples. Among them 1,292 samples are declared as Standard Quality, 41 samples are declared as a Not of Standard quality.

The department is providing 26 services under Sakala and 1,439 Application have been received in the month of June 2025 and 1012 application have been disposed, including application carried over.

The Enforcement officers of the Drug Administration have conducted a Special Drive on 24.06.2025 and 25.06.2025 to control the misuse of NDPS drugs. During the NDPS special Drive 279 inspection is carried out and notice has been given to 233 shops.

From April-2025 to June 2025, the Enforcement Officers filed a total 81 cases in the Hon’ble Courts against firms that violated the provisions of the Drugs and Cosmetics Act, 1940 and Rules thereunder.

The Department has ensured Not of Standard Quality Drugs worth of Rs. 40,48,436/-lakhs were recalled from the market and seized in the month of June 2025.

A special drive was conducted by Enforcement officers of the Department of Food Safety and Drug Administration across the blood centres in the entire state. As part of this special operation, inspected a total of 122 blood centres. Based on the various violations observed, show cause notices were issued to 44 blood centres and Compliance letters were issued to 80 blood centres.

Food Safety:

The Food Safety and Drug Administration Department is working diligently to ensure the quality and safety aspects of the food served to the public, thereby safeguarding public health

In celebration of World Food Safety Day on 07.06.2025, a series of meaningful programs have been organized throughout the month. In this regard, the Food Safety Division of the Food Safety and Drug Administration Department has undertaken the following actions over the past month:

Inspection of Street Vendors:

In compliance with the Food Safety and Standards Act, 2006, food safety, quality, and hygiene aspects were inspected across the state, covering 1557 street food vendors. Notices were issued to 406 establishments where violations were identified, and fines totalling Rs.44,500/- were imposed on the spot. Additionally, free registration was provided to 866 street vendors, and 64 FoSTaC training sessions were conducted, benefiting 1240 street food vendors with the necessary food safety training.

 Inspection of Food Stalls at Bus Stations:

In order to ensure adherence to the Food Safety and Standards Act, 2006, inspections were conducted at 184 bus stations covering 871 food stalls across the state. Notices were issued to 216 establishments with identified violations, and fines amounting to Rs.55,000/- were imposed on the spot. 95 food samples were collected and sent for laboratory analysis.

 Inspection of Anganwadi Centres:

As part of ensuring food safety and hygiene at Anganwadi centres, 604 centres across the state were inspected. 541 food samples were collected and sent for laboratory analysis. In addition, free registration was provided to a total of 903 Anganwadi centres.

 Inspection of Hotels and Restaurants:

Inspections were carried out at 720 hotels/restaurants across the state to ensure compliance with food safety, quality, and hygiene standards. Notices were issued to 183 establishments with violations, and fines totalling Rs.21,500/- were imposed on the spot. 234 drinking water samples were also collected and sent for laboratory analysis.

 Inspection of High-Risk Food Businesses:

Under the Food Safety and Standards Act, 2006, inspections were conducted for 1,492 food businesses categorized under the High-Risk sector to ensure the implementation of food safety and quality standards. Among these, notices were issued to 415 establishments where violations were identified. Based on the laboratory analysis results of the food samples, further legal action will be taken accordingly says Commissioner Food Safety and Drug Administration Bengaluru in Press Release.

ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿಆಹ್ವಾನ

ಫಾಸ್ಟ್ ಫುಡ್ ತಯಾರಿಕೆ ಮತ್ತು ಮಾರಾಟ ಕ್ಷೇತ್ರದಲ್ಲಿ(Free fast food training)ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಫಾಸ್ಟ್ ಫುಡ್(Fast food training) ಸ್ಟಾಲ್ ಉದ್ಯಮಿ ಕ್ಷೇತ್ರವು ಉತ್ತಮ ಆದಾಯ ತರಬಲ್ಲ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ದಿನೇ ದಿನೇ ಬೇಡಿಕೆಯು ಏರುಗತಿಯಲ್ಲಿ ಸಾಗುತ್ತಿದ್ದು, ಈ ವಿಭಾಗದಲ್ಲಿ ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಂಡು ತರಬೇತಿಯಲ್ಲಿ ಭಾಗವಹಿಸಬಹುದು.

ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಯಲ್ಲಿ ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು?ತರಬೇತಿ ಪ್ರಾರಂಭ ದಿನಾಂಕ ಹಾಗೂ ಫಾಸ್ಟ್ ಫುಡ್ ಉದ್ದಿಮೆ ಆರಂಭಿಸಲು ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬಹುದು? ಎನ್ನುವ ಮಾಹಿತಿ ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

12 Days Fast Food Training-ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿರುತ್ತದೆ.

ಗ್ರಾಮೀಣ ಭಾಗದಲ್ಲಿ ವಾಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

Fast food business- ಈ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ:

ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯು ಒಟ್ಟು 12 ದಿನ ನಡೆಯಲಿದ್ದು, ತರಬೇತಿಯಲ್ಲಿ ಬಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಕಟ್ಟುವ ಅವಶ್ಯಕತೆ ಇರುವುದಿಲ್ಲ.

Bank loan for fast food business- ಬ್ಯಾಂಕ್ ಮೂಲಕ ಸಾಲ ಸೌಲಭ್ಯ:

ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಉಚಿತವಾಗಿ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಹಾಯಧನದಲ್ಲಿ ಸಾಲವನ್ನು ತೆಗೆದುಕೊಂಡು ಉದ್ಯಮಿಯನ್ನು ಆರಂಭಿಸಬಹುದು ಎಂದು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.

Fast food Training-ತರಬೇತಿಯಲ್ಲಿ ಯಾವೆಲ್ಲ ವಿಷಯದ ಕುರಿತು ಮಾಹಿತಿ ತಿಳಿಸಲಾಗುತ್ತದೆ?

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಈ ಕೇಂದ್ರದಿಂದ ಪಾನಿಪುರಿ, ಮಸಾಲಪುರಿ, ಗೋಬಿ ಮಂಚೂರಿ, ಸಮೋಸ,ಕಚೋರಿ,ನೂಡಲ್ಸ್, ಕೇಕ್, ಪಪ್ಸ್ ಹಾಗೂ ಸಿಹಿ ತಿಂಡಿಗಳನ್ನು ತಯಾರಿಕೆ ಮಾಡುವ ವಿಧಾನದ ಕುರಿತು ಪ್ರಯೋಗಿಕವಾಗಿ ತಿಳಿಸಿಕೊಡಲಾಗುತ್ತದೆ.

VK  NEWS HEADLINES :

ವೈಚಾರಿಕ ಸಾಹಿತ್ಯಕ್ಕೆ ಕನ್ನಡದಲ್ಲಿ ಮಾನ್ಯತೆ ಸಿಗುತ್ತಿರುವುದು ಆರೋಗ್ಯಕರ ಬೆಳವಣಿಗೆ ಕಾಸರವಳ್ಳಿ

ಕನ್ನಡ ಪುಸ್ತಕ  ಓದುವವರು ಇಲ್ಲ ಅನ್ನುತ್ತಿರುವ ಮಾತುಗಳು ಕೇಳಿಬರುತ್ತಿರುವಾಗಲೇ ಪ್ರಕಾಶಕರು ವೈವಿದ್ಯಮಯ ಪುಸ್ತಕವನ್ನು ಪ್ರಕಟಿಸುತ್ತಲೇ ಇದ್ದಾರೆ. ಇದರಿಂದ  ಒಂದು ಆರೋಗ್ಯಕರ ಬೆಳವಣಿಗೆ ಆಗಿದೆ. ಮೊದಲಿನಿಂದಲೂ ಸೃಜನಶೀಲ ಸಾಹಿತ್ಯಕ್ಕೆ ನೀಡಿದ ಮಹತ್ವ ವೈಚಾರಿಕ ಸಾಹಿತ್ಯಕ್ಕೆ ಸಿಗುತ್ತಿಲ್ಲ ಎನ್ನುವ ಸಕಾರಣವಾದ ಆರೋಪ ಕೇಳಿಬರುತ್ತಿತ್ತು. ಈಗ ಸಂತೋಷದ ಸಂಗತಿ ಎಂದರೆ ಸೃಜನೇತರ ವೈಚಾರಿಕ ಸಾಹಿತ್ಯಗಳು ಪ್ರಕಟವಾಗುತ್ತಿವೆ. ಸಾಕಷ್ಟು ಮಾನ್ಯತೆ ಸಿಗುತ್ತಿದೆ ಎಂದು ಕೃತಿಗಳನ್ನು ಲೋಕಾರ್ಪಣೆ ಮಾಡಿದ ಅಂತರರಾಷ್ಟ್ರಿಯ ಖ್ಯಾತಿಯ ಚಿತ್ರನಿರ್ದೇಶಕ ಗಿರೀಶ್‌ ಕಾಸರವಳ್ಳಿ ತಿಳಿಸಿದರು.
ಇಂದು ಲೋಕಾರ್ಪಣೆಗೊಂಡಿರುವ ಪುಸ್ತಕಗಳು ಹಳತು ಹೊಸತು ಎರಡು ತಲೆಮಾರಿನವರು ಇವೆ. ಇಂದು ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಬಾನುಮುಷ್ತಾಕ್‌ ಅವರಿಂದ ಮಾನ್ಯತೆ ದೊರೆತಿರುವುದು ಸಂತೋಷ, ಇಂತಹ ಸಂತೋಷ ಕನ್ನಡಕ್ಕೆ ನಿರಂತವಾಗಿರಲು ಇನ್ನಷ್ಟು ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್‌ಗೆ ಅನುವಾದ ಆಗಬೇಕೆಂದು ಕಾಸರವಳ್ಳಿ ಅಭಿಪ್ರಾಯ ಪಟ್ಟರು
ಮುಖ್ಯ ಅತಿಥಿಯಾಗಿದ್ದ ಶ್ರೀ ಜೋಗಿಯವರು  ಎಲ್ಲಾ ಪುಸ್ತಕಗಳನ್ನು ಪರಿಚಯಿಸಿ ಇಂದು ಬಿಡುಗಡೆಯಾದ 15 ಪುಸ್ತಕಗಳು ವಿಭಿನ್ನ ಪುಸ್ತಕಗಳು ಪ್ರಕಟವಾಗಿರುವುದು ಒಳ್ಳೇಯ ಬೆಳವಣಿಗೆ.  ಪುಸ್ತಕಗಳ ಬೆಳವಣಿಗೆ ಹುಲುಸಾಗಿದೆ ಆದರೆ ಓದುಗರು ಒಂದು ವಯೋಮಾನಕ್ಕೆ ನಿಂತಿದೆ. ಈಗ ಲೇಖಕರ ಜವಾಬ್ದಾರಿ ಹೆಚ್ಚಿದ್ದು. ಓದುಗರ ನಿರಂತರ ಸಂಪರ್ಕ ಬೆಳೆಸುವುದು ಮಾತನಾಡುವುದು ಕಾಣಿಸಿಕೊಳ್ಳುವುದು ಮುಖ್ಯವಾಗಿದ್ದು ಜೊತೆಗೆ ಇಂದಿನ ಕಾಲಮಾನಕ್ಕೆ ಪ್ರಸ್ತತವಾಗಿರುವ ಹೊಸ ಸಾಮಾಜಿಕ ಮಾಧ್ಯಮಗಳಿಗೆ ತೆರೆದುಕೊಳ್ಳಬೇಕೆಂದರು.
ಸಮಾರಂಭದಲ್ಲಿ ಡಾ. ಡಿ. ವಿ. ಗುರುಪ್ರಸಾದ್‌, ಡುಂಡಿರಾಜ್‌, ನಾಗತಿಹಳ್ಳಿ ಜಯಪ್ರಕಾಶ್‌ ತಮ್ಮ ಕೃತಿಗಳ ಕುರಿತು ಮಾತನಾಡಿದರು. ಎಂ. ಕೆ. ಇಂದಿರಾ ಅವರ ಪುತ್ರ ಮಂಜುನಾಥ್‌ ಸಭೆಯಲ್ಲಿ ಹಾಜರಿದ್ದರು.
ಸಮಾರಂಭದಲ್ಲಿ ಸಪ್ನ ಬುಕ್‌ ಹೌಸ್‌ ನಿತಿನ್‌ ಷಾ ಸ್ವಾಗತಿಸಿದರು. ಆರ್.‌ ದೊಡ್ಡೆಗೌಡ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯಸಾಹಿತಿಗಳು ಉಪಸ್ಥಿತರಿದ್ದರು.
VK NEWS DIGITAL :