Home Blog Page 90

ಇರಾನ್‌ನಿಂದ 110 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್

ನವದೆಹಲಿ: ಯುದ್ಧಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟ 110 ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ತಡರಾತ್ರಿ ನವದೆಹಲಿಗೆ ಬಂದಿಳಿಯಿತು. ಈ ಸ್ಥಳಾಂತರ ಕಾರ್ಯಾಚರಣೆಗೆ ಭಾರತ ‘ಆಪರೇಷನ್ ಸಿಂಧು’ ಎಂದು ಹೆಸರಿಟ್ಟಿದೆ.

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಈ ಪೈಕಿ 110 ಮಂದಿ ಇರಾನ್ ಗಡಿ ದಾಟಿ ನೆರೆಯ ಅರ್ಮೇನಿಯಾ ದೇಶಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳನ್ನು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವಿನೊಂದಿಗೆ ಸ್ವದೇಶಕ್ಕೆ ಕರೆತರಲಾಗುತ್ತಿದೆ

ವಿದ್ಯಾರ್ಥಿಗಳ ಸ್ಥಳಾಂತರಿಸುತ್ತಿರುವ ಕಾರ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘವು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಧನ್ಯವಾದ ತಿಳಿಸಿದೆ. ಉಳಿದ ವಿದ್ಯಾರ್ಥಿಗಳನ್ನೂ ಶೀಘ್ರದಲ್ಲೇ ಸ್ಥಳಾಂತರಿಸುವ ಭರವಸೆ ಇದೆ ಎಂದು ಸಂಘ ಹೇಳಿಕೆಯಲ್ಲಿ ತಿಳಿಸಿದೆ.

ಇರಾನ್ ನಿಂದ ಸ್ವದೇಶಕ್ಕೆ ಆಗಮಿಸಿದ ವಿದ್ಯಾರ್ಥಿಗಳ ಪ್ರತಿಕ್ರಿಯೆಗಳು:

ಇರಾನ್‌ನಿಂದ ಆಗಮಿಸಿದ ವಿದ್ಯಾರ್ಥಿಗಳ ಪೈಕಿ ಹಲವರು ದೆಹಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದಕ್ಕೆ ಪ್ರತಿಕ್ರಿಯೆ ನೀಡಿದರು. ಈ ಪೈಕಿ ಓರ್ವ ವಿದ್ಯಾರ್ಥಿ, “ನಮ್ಮ ದೇಶಕ್ಕೆ ಮರಳಿರುವುದು ತುಂಬಾ ಹರ್ಷ ತಂದಿದೆ. ಇರಾನ್ ನಲ್ಲಿ ನಾವಿದ್ದ ಉರ್ಮಿಯಾದಲ್ಲಿ ಪರಿಸ್ಥಿತಿ ಹದಗೆಟ್ಟಿರಲಿಲ್ಲ . ಆದರೆ ಇತರ ಸ್ಥಳಗಳಲ್ಲಿ ಪರಿಸ್ಥಿತಿ ತೀರಾ ಕೆಟ್ಟದಾಗಿತ್ತು. ಭಾರತ ಸರ್ಕಾರದ ಸಹಾಯದಿಂದಾಗಿ ನಾವು ಮನೆಗೆ ಮರಳಿದ್ದೇವೆ” ಎಂದರು.

ಮತ್ತೋರ್ವ ವಿದ್ಯಾರ್ಥಿ ಮಾತನಾಡಿ, “ನಾನು ಉರ್ಮಿಯಾ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ. ನಾವು ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹತ್ತಿರದಿಂದ ನೋಡಿದ್ದೇವೆ. ನಮಗೆ ಭಯವಾಗುತ್ತಿತ್ತು. ಇದೀಗ ಭಾರತಕ್ಕೆ ಮರಳಿರುವುದಕ್ಕೆ ಖುಷಿಯಾಗಿದೆ. ಭಾರತ ಸರ್ಕಾರ ಅದರಲ್ಲೂ ವಿಶೇಷವಾಗಿ ವಿದೇಶಾಂಗ ಸಚಿವಾಲಯಕ್ಕೆ ನಾನು ತುಂಬಾ ಕೃತಜ್ಞ. ನಮ್ಮ ಪೋಷಕರು ಕೂಡಾ ನನ್ನ ಬಗ್ಗೆ ಚಿಂತಿತರಾಗಿದ್ದರು. ಆದರೆ ಈಗ ಅವರ ದುಗುಡ ದೂರವಾಗಿದೆ” ಎಂದು ಹೇಳಿದರು.

ವಿದ್ಯಾರ್ಥಿ ಯಾಸಿರ್ ಗಫರ್ ಮಾತನಾಡಿ, “ನಾವು ಕ್ಷಿಪಣಿಗಳು ಹಾದುಹೋಗುವುದನ್ನು ಮತ್ತು ರಾತ್ರಿಯಲ್ಲಿ ದೊಡ್ಡ ಶಬ್ದಗಳನ್ನು ಕೇಳುತ್ತಿದ್ದೆವು. ಇದೀಗ ಸ್ವದೇಶಕ್ಕೆ ತಲುಪಿರುವುದು ಸಂತೋಷ ತಂದಿದೆ. ನಾನು ನನ್ನ ಕನಸುಗಳನ್ನು ಬಿಟ್ಟಿಲ್ಲ. ಪರಿಸ್ಥಿತಿ ತಿಳಿಯಾದಾಗ ಮತ್ತೆ ಇರಾನ್‌ಗೆ ಹೋಗುತ್ತೇವೆ” ಎಂದು ತಿಳಿಸಿದರು.

ಭಾರತೀಯ ರಾಯಭಾರ ಕಚೇರಿ ನಮಗಾಗಿ ಎಲ್ಲವನ್ನೂ ಸಿದ್ಧಪಡಿಸಿತ್ತು. ನಮಗೆ ಯಾವುದೇ ಸಮಸ್ಯೆಯಾಗಲಿಲ್ಲ. ನಾವು ಮೂರು ದಿನಗಳಿಂದ ಪ್ರಯಾಣಿಸುತ್ತಿದ್ದೇವೆ. ಆದ್ದರಿಂದ ಸ್ವಲ್ಪ ದಣಿದಿದ್ದೇವೆ. ನಾವು ಹೊರಡುವಾಗ ಉರ್ಮಿಯಾದಲ್ಲಿ ಪರಿಸ್ಥಿತಿ ಅಷ್ಟೊಂದು ಕೆಟ್ಟದಾಗಿರಲಿಲ್ಲ. ಆದರೆ, ನಮ್ಮ ವಸತಿ ನಿಲಯದ ಕಿಟಕಿಗಳಿಂದ ನಾವು ಕ್ಷಿಪಣಿಗಳನ್ನು ನೋಡುತ್ತಿದ್ದೆವು” ಎಂದು ವಿದ್ಯಾರ್ಥಿನಿ ಮರಿಯಮ್ ರೋಜ್ ಹೇಳಿದರು

ವಿದ್ಯಾರ್ಥಿನಿಯೊಬ್ಬರ ತಾಯಿ ಮಾತನಾಡಿ, “ನನ್ನ ಮಗಳು ಮನೆಗೆ ಮರಳಿದ್ದಕ್ಕೆ ನನಗೆ ಭಾರೀ ಸಂತೋಷವಾಗಿದೆ. ಆದಷ್ಟು ಬೇಗ ಎಲ್ಲರ ಮಕ್ಕಳೂ ಅಲ್ಲಿಂದ ಸುರಕ್ಷಿತವಾಗಿ ಹಿಂತಿರುಗಲಿ. ಭಾರತ ಸರ್ಕಾರ ಎಲ್ಲವನ್ನೂ ಚೆನ್ನಾಗಿ ನಿರ್ವಹಿಸಿದೆ. ನಮ್ಮ ಮಕ್ಕಳು ಎಲ್ಲಿಯೂ ಯಾವುದೇ ತೊಂದರೆ ಎದುರಿಸಲಿಲ್ಲ” ಎಂದು ನಿರಾಳರಾದರು.

B.PAC/B.CLIP 18 member delegation safely boarded the flight to return to Bengaluru

Eighteen delegates from B.PAC/B.CLIP were on a 7 day study tour (June 7-13) hosted by Israel’s Ministry of Foreign Affairs focused on civic leadership, policymaking and sustainability.

The scheduled departure of the delegation on June 13, 2025 from Tel Aviv to Bengaluru was disrupted because of airport closure in Israel. Upon receipt of this information and assessment of the situation, B.PAC   has been working with the Israel Consulate, Government of Karnataka (GoK) and Ministry of External Affairs, Government of India (GoI) for supporting the safe return of delegates. The officials of Indian High Commission in Israel were immediately contacted   to support the delegation locally.

Ms. Orli Weitzman, The Consul General of South India who accompanied the delegation extended full support to B.PAC/B.CLIP delegation to ensure their security and safety during their extended stay in Tel Aviv.

We are pleased to inform you that the team has boarded the flight from Jordan and will be reaching Bengaluru tomorrow.

B.PAC is deeply thankful to the Israeli Consulate, The Indian High Commission in Israel, the Indian Embassy in Jordan for ensuring safety and security of our team at all times and safe boarding of flight.

B.PAC is also extremely thankful to the GOK and the MEA for all its coordination efforts in this matter.

Contact:

sharath@bpac.in | -91-9886196640

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಗೆ ಕಂಗನಾ ರನೌತ್ ರಾಯಭಾರಿ!

ನವದೆಹಲಿ: ಖ್ಯಾತ ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ಅವರನ್ನು ನವದೆಹಲಿ 2025 ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ಭಾರತೀಯ ಪ್ಯಾರಾಲಿಂಪಿಕ್ ಸಮಿತಿ ಘೋಷಿಸಿದೆ,
ಈ ಹೊಸ ಪಾತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಕಂಗನಾ, ಭಾರತದ ಪ್ಯಾರಾ ಅಥ್ಲೀಟ್‍ಗಳು ಪ್ರತಿದಿನ ಅದ್ಭುತ ಸಾಧನೆಗಳ ಇತಿಹಾಸವನ್ನು ಪುನಃ ಬರೆಯುತ್ತಿದ್ದಾರೆ, ಅವರನ್ನು ಬೆಂಬಲಿಸಲು ಮತ್ತು ಅವರ ಅದ್ಬುತ ಸಾಧನೆಗಳ ಬಗ್ಗೆ ಪ್ರಚಾರ ಮಾಡಲು ನನಗೆ ತುಂಬಾ ಹೆಮ್ಮೆಯೆನಿಸುತ್ತಿದೆ, ಪ್ಯಾರಾ ಕ್ರೀಡೆ ಕೇವಲ ಸ್ಪರ್ಧೆಯ ಬಗ್ಗೆ ಅಲ್ಲ, ಇದು ಧೈರ್ಯವನ್ನು ತೋರಿಸುತ್ತದೆ, ಮತ್ತು ನಮ್ಮ ಚಾಂಪಿಯನ್ ಗಳ ಹಿಂದೆ ನಿಲ್ಲಲು ನನಗೆ ತುಂಬಾ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ,
ಕಂಗನಾ ರನೌತ್ ಅವರ ಧ್ವನಿಯ ಪ್ಯಾರಾ ಕ್ರೀಡೆಗಳೊಂದಿಗೆ ಸಾರ್ವಜನಿಕವಾಗಿ ತೊಡಗಿಸಿಕೊಳ್ಳುವಿಕೆಯನ್ನು ಗಮನಾರ್ಹವಾಗಿ ವರ್ಧಿಸುತ್ತದೆ ಮತ್ತು ದೇಶಾದ್ಯಂತ ಮುಂದಿನ ಪೀಳಿಗೆಯ ಕ್ರೀಡಾಪಟುಗಳು ಮತ್ತು ಅಭಿಮಾನಿಗಳಿಗೆ ಸ್ಫೋರ್ತಿ ನೀಡುತ್ತದೆ ಎಂದು ಭಾರತದ ಪ್ಯಾರಾಲಿಂಪಿಕ್ ಸಮಿತಿ ಹೇಳಿದೆ,

ವಾರದಲ್ಲಿ 2 ದಿನ ರಜೆ – ಕಾರ್ಮಿಕರ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ?

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯ (10 Hour Workday For Labourers) ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ (Karnataka Government) ಚಿಂತನೆ ನಡೆಸಿದೆ.

ಸದ್ಯ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ ಕೆಲಸದ ಅವಧಿ ದಿನಕ್ಕೆ ಒಂಬತ್ತು ಗಂಟೆ ಮೀರಬಾರದು ಮತ್ತು ಗರಿಷ್ಠ ಒಟಿ 10 ಗಂಟೆಗಳನ್ನು ಮೀರಬಾರದು ಎಂಬ ನಿಯಮವಿದೆ.

ಈಗ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 10 ಗಂಟೆ ಮತ್ತು ಹೆಚ್ಚುವರಿ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 12 ಗಂಟೆಗಳಿಗೆ ವಿಸ್ತರಿಸಲು ಚಿಂತನೆ ನಡೆಸಿದೆ.

ಕಾನೂನು ತಿದ್ದುಪಡಿ ವಿಚಾರ ಈಗ ಚರ್ಚಾ ಹಂತದಲ್ಲಿದ್ದು ಈ ಸಂಬಂಧ ರಾಜ್ಯ ಸರ್ಕಾರ ವಿಕಾಸ ಸೌಧದಲ್ಲಿ ಕೈಗಾರಿಕಾ ಮತ್ತು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸುತ್ತಿದೆ. ಈ ಸಭೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳ ಮಾಲೀಕರು, ಕಾರ್ಮಿಕ ಸಂಘಟನೆಗಳು ಸದಸ್ಯರು ಭಾಗಿಯಾಗಿದ್ದಾರೆ.

ಈಗಾಗಲೇ ಕೇಂದ್ರ ಹಾಗೂ ಖಾಸಗಿ ಉದ್ಯೋಗಿಗಳ ಸಂಘದಿಂದಲೂ ಪ್ರಸ್ತಾವನೆ ಬಂದಿದೆ. ನಿತ್ಯ 10 ಗಂಟೆ ಕೆಲಸ ಮಾಡಿದರೆ ಶನಿವಾರ ಭಾನುವಾರ ಎರಡು ದಿನದ ರಜೆ ನೀಡಲಾಗುತ್ತದೆ,

ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಸರ್ಕಾರ ಕೆಲ ದಿನಗಳ ಹಿಂದೆ ನಡೆಸಿದ ಸಂಪುಟ ಸಭೆಯಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸುವ ತಿದ್ದುಪಡಿ ಮಸೂದೆಗೆ  ಅನುಮೋದನೆ ನೀಡಿತ್ತು

ಅಕ್ಷಯ ವಿಪ್ರ ಮಹಾಸಭಾಗೆ ನೂತನ ಪಧಾಧಿಕಾರಿಗಳ ಆಯ್ಕೆ

ಬೆಂಗಳೂರು: *ಅಕ್ಷಯ ವಿಪ್ರ ಮಹಾಸಭಾಗೆ ನೂತನ ಪಧಾಧಿಕಾರಿಗಳ ಆಯ್ಕೆ ಆಗಿದ್ದು, ಕೆಳಕಂಡವರು ನೇಮಕ ಗೊಂಡಿರುವರು.

ಅಧ್ಯಕ್ಷರಾಗಿ ಎನ್. ಕೆ. ರಾಮಾಚಂದ್ರ ರಾವ್ ಹಾಗು ಗೌರವಾಧ್ಯಕ್ಷರಾಗಿ ಡಾ, ಎನ್. ಕೀರ್ತಿರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-28ನೇ ಸಾಲಿಗೆ ನೆಡೆದ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯಲ್ಲಿ 45ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು,
ಭಾನುವಾರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಕೆಳಕಂಡ ನೂತನ ಪಧಾಧಿಕಾರಿಗಳ ಆಯ್ಕೆಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಎನ್. ಕೆ. ರಾಮಾಚಂದ್ರ ರಾವ್ ಹಾಗು ಗೌರವಾಧ್ಯಕ್ಷರಾಗಿ ಡಾ, ಎನ್. ಕೀರ್ತಿರಾಜ್, ಉಪಾಧ್ಯಕ್ಷರಾಗಿ ಡಾ, ಕೆ. ರಘುನಾಥರಾವ್, ಡಾ, ಕಿರಣ್. ಎಸ್. ಮೂರ್ತಿ, ಕೆ. ಆನಂದರಾವ್, ಲಕ್ಷ್ಮೀಶ ಸತ್ಯವಾರ ಮತ್ತು ವಿ. ಶ್ರೀಪ್ರಕಾಶ್, ಪ್ರಧಾನ ಕಾರ್ಯದರ್ಶಿಯಾಗಿ ಕೆ. ರಾಘವೇಂದ್ರ ರಾವ್, ಕಾರ್ಯದರ್ಶಿಯಾಗಿ ಎನ್. ಎಸ್. ಸುಧೀಂದ್ರ ರಾವ್, ಜಂಟಿಕಾರ್ಯದರ್ಶಿಯಾಗಿ ಎನ್. ಪಿ. ಮಂಜುನಾಥ್, ಟಿ. ಎನ್. ಶಾಂತಕುಮಾರ್, ಎಲ್. ಜಗನಾಥ್, ಆರ್.ಶ್ರೀನಿವಾಸ, ಮಹೇಶ್ ಕುಮಾರ್, ಖಜಾಂಚಿಯಾಗಿ ಎನ್. ರಾಘವೇಂದ್ರ ರಾವ್, ಅಂತರೀಕಾ ಲೆಕ್ಕ ಪರಿಶೋಧಕರಾಗಿ ಎನ್. ಜೆ. ಮಣಿಕುಮಾರ್, ಕಾನೂನು ಸಲಹೆಗಾರರಾಗಿ ಎ. ವಿಜಯಕುಮಾರ್ ಭಟ್ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಧಾಕೃಷ್ಣ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?
ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಜನಪ್ರಿಯ ಡೈರಿ ಕಂಪನಿ ಅಮುಲ್ ಮಳಿಗೆ ತೆರೆಯಲು ಬಿಎಂಆರ್‍ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ, ಇದೀಗ ಈ ಸಂಬಂಧ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದು, ನಂದಿನಿಗೆ ಅನ್ಯಾಯ ಆಗೋಕೆ ಬಿಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ,
ಬೆಂಗಳೂರಲ್ಲಿ ಮಾತನಾಡಿದ ಅವರು ಗ್ಲೋಬಲ್ ಟೆಂಡರ್ ಮೂಲಕ ಬಿಎಂಆರ್‍ಸಿಎಲ್ ಅಮುಲ್ ಜತೆ ಒಪ್ಪಂದ ಮಾಡಿಕೊಂಡಿದ್ದು, ಈ ಬಗ್ಗೆ ಪರಮಾರ್ಶೆ ಮಾಡಾಲಾಗಿದೆ, ಟೆಂಡರ್ ನಲ್ಲಿ ನಂದಿನಿ ಭಾಗವಹಿಸಿರಲಿಲ್ಲ, ಇದೀಗ ಈ ವಿಚಾರ ಗಮನಕ್ಕೆ ಬಂದಿದ್ದು 10 ಮೆಟ್ರೋ ನಿಲ್ದಾಣಗಳ ಪೈಕಿ 8 ರಲ್ಲಿ ನಂದಿನಿ ಮಳಿಗೆಗೆ, ಹಾಗೆ ಈಗಾಗ್ಲೇ ಉಳಿದ 2 ಕಡೆ ಮಾತ್ರ ಓಪನ್ ಮಾಡಲಾಗಿರುವ ಅಮುಲ್ ಸಂಸ್ಧೆಯ ಅಂಗಡಿಗೆ ಅವಕಾಶ ಮಾಡಿಕೊಟ್ಟಿರೋದಾಗಿ ಹೇಳಿದ್ದಾರೆ,
ನಂದಿನಿ ಇದ್ದರೂ ಅಮುಲ್ ಜೊತೆ ಒಪ್ಪಂದ ಯಾಕೆ ಎಂಬ ಪ್ರಶ್ರೆಯನ್ನು ಜನ ಎತ್ತಿದ್ದಾರೆ, ಅಧಿಕಾರಿಗಳ ಜೊತೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿರೋದಾಗಿ ಡಿಕೆಶಿ ಹೇಳಿದ್ದಾರೆ,
ಬಿಎಂಆರ್‍ಸಿಎಲ್ ನಡೆ ವಿರದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು

ಕನ್ನಡ ಪರ ಸಂಘಟನೆಯ ಮುಖಂಡರಿಗೆ ನೋಟಿಸ್

ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿರುವ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ,
ಕನ್ನಡದ ಹುಟ್ಟಿನ ಬಗ್ಗೆ ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ಅವಕಾಶ ಸಿಕ್ಕ ಬೆನ್ನಲ್ಲೇ ಇದೀಗ ಕರವೇ ನಾರಾಯಣ ಗೌಡ, ಪ್ರವೀಣ್ ಶೆಟ್ಟಿ ಸೇರಿದಂತೆ ಕನ್ನಡ ಪರ ಸಂಘಟನೆಯ ಪ್ರಮುಖರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ,
ನಟ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆ ಮಾಡುವ ಹಾಗಿದ್ದರೆ ನ್ಯಾಯಾಲಯ ತಿಳಿಸಿರುವಂತೆ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು, ಒಂದು ವೇಳೆ ನಿಯಮ ಮೀರಿ ಥಗ್ ಲೈಫ್ ಸಿನಿಮಾ ಬಿಡುಗಡೆ ಆಗಿರುವ ಚಿತ್ರಮಂದಿರ ಬಳಿ ಪ್ರತಿಭಟನೆ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಪೊಲೀಸರು ತಿಳಿಸಿದ್ದಾರೆ,
ಪೊಲೀಸರ ನೋಟಿಸ್ ವಿರುದ್ಧ ಕನ್ನಡ ಪರ ಸಂಘಟನೆಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು ನಮ್ಮ ರಾಜ್ಯ ಸರ್ಕಾರವೇ ನಟನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು, ಅದರೆ ಈಗ ಹೀಗ್ಯಾಕೆ ಮಾಡಿದ್ದಾರೋ ಗೊತ್ತಿಲ್ಲ, ಆ ಸಿನಿಮಾ ನೋಡಲು ನಮ್ಮ ಜನ ಕೂಡ ಹೋಗಲ್ಲ ಎನ್ನುವ ನಂಬಿಕೆ ಇದೆ ಎಂದಿದ್ದಾರೆ,

ನಾಳೆ ಕಾವೇರಿ ನೀರು ಬಂದ್!

ಗುರುವಾರ (ಜೂನ್ 19, 2025) ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ (ಜೂನ್ 20, 2025) ಬೆಳಗ್ಗೆ 6 ಗಂಟೆವರೆಗೆ, ಅಂದರೆ ಸತತ 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಈ ತಾತ್ಕಾಲಿಕ ಸ್ಥಗಿತದ ಹಿಂದಿನ ಕಾರಣ ಕಾವೇರಿ 5ನೇ ಹಂತದ ಕೊಳವೆ ಮಾರ್ಗ ಜೋಡಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳಾಗಿವೆ. ಈ ಕಾಮಗಾರಿಯು ಭವಿಷ್ಯದಲ್ಲಿ ನಗರಕ್ಕೆ ಸ್ಥಿರವಾದ ಮತ್ತು ಉತ್ತಮ ಪ್ರಮಾಣದ ನೀರು ಸರಬರಾಜಿಗೆ ಸಹಕಾರಿಯಾಗಲಿದೆ.

ಕಾವೇರಿ ನೀರು ಸ್ಥಗಿತದ ಕಾರಣ

ಬೆಂಗಳೂರು ಜಲಮಂಡಳಿ (BWSSB) ಪ್ರಕಾರ, ಕಾವೇರಿ 5ನೇ ಹಂತದ ಕೊಳವೆ ಮಾರ್ಗದ ಜೋಡಣೆ ಕಾಮಗಾರಿಯು ಈ ಸ್ಥಗಿತಕ್ಕೆ ಪ್ರಮುಖ ಕಾರಣವಾಗಿದೆ. ಈ ಕಾಮಗಾರಿಯು ನಗರದ ಜನಸಂಖ್ಯೆಯ ಹೆಚ್ಚಳ ಮತ್ತು ನೀರಿನ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿದೆ. ಈ ಯೋಜನೆಯು ಯಶಸ್ವಿಯಾದರೆ, ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸರಬರಾಜಾಗಲಿದೆ, ಇದರಿಂದ ನೀರಿನ ಕೊರತೆ ಸಮಸ್ಯೆಯನ್ನು ಕಡಿಮೆ ಮಾಡಬಹುದು.

ಈ 24 ಗಂಟೆಗಳ ಸ್ಥಗಿತದಿಂದ ಬೆಂಗಳೂರಿನ ಬಹುತೇಕ ಎಲ್ಲ ಪ್ರದೇಶಗಳು ಪರಿಣಾಮ ಬೀರಲಿವೆ. ಬಾಗಲೂರು, ಹೆಬ್ಬಾಳ, ಜಯನಗರ, ಮಲ್ಲೇಶ್ವರಂ, ರಾಜಾಜಿನಗರ, ಬನಶಂಕರಿ, ಕೆಂಗೇರಿ ಸೇರಿದಂತೆ ನಗರದ ಪೂರ್ವ, ದಕ್ಷಿಣ, ಪಶ್ಚಿಮ, ಮತ್ತು ಉತ್ತರ ಭಾಗಗಳು ಈ ಸ್ಥಗಿತದಿಂದ ಬಾಧಿತವಾಗಲಿವೆ. ಆದ್ದರಿಂದ, ಈ ಪ್ರದೇಶಗಳ ಜನರು ಮುಂಗಡವಾಗಿ ಅಗತ್ಯವಿರುವ ನೀರನ್ನು ಸಂಗ್ರಹಿಸಿಕೊಳ್ಳುವುದು ಅತೀ ಮುಖ್ಯ.

ಈ ತಾತ್ಕಾಲಿಕ ಸ್ಥಗಿತವು ಒಂದು ದಿನದ ಕಾಮಗಾರಿಗೆ ಸೀಮಿತವಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ನೀರಿನ ಸರಬರಾಜು ಪುನರಾರಂಭವಾಗುವ ನಿರೀಕ್ಷೆಯಿದೆ. ಆದರೆ, ಕಾಮಗಾರಿಯ ಸಂಕೀರ್ಣತೆಯ ಆಧಾರದ ಮೇಲೆ ಕೆಲವು ಪ್ರದೇಶಗಳಲ್ಲಿ ಸ್ವಲ್ಪ ವಿಳಂಬವಾಗಬಹುದು ಎಂದು BWSSB ಎಚ್ಚರಿಕೆ ನೀಡಿದೆ.

ಕಾವೇರಿ 5ನೇ ಹಂತದ ಕೊಳವೆ ಮಾರ್ಗ ಜೋಡಣೆ ಕಾಮಗಾರಿಯು ಯಶಸ್ವಿಯಾದರೆ, ಬೆಂಗಳೂರಿನ ನೀರಿನ ಸಮಸ್ಯೆಗೆ ದೀರ್ಘಕಾಲೀನ ಪರಿಹಾರ ಸಿಗಬಹುದು. ಈ ಯೋಜನೆಯು ನಗರದ ವಿವಿಧ ಭಾಗಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಾತ್ರಿಪಡಿಸಲಿದ್ದು, ಜನಸಂಖ್ಯೆಯ ಹೆಚ್ಚಳದಿಂದ ಉಂಟಾಗುವ ನೀರಿನ ಬೇಡಿಕೆಯನ್ನು ಪೂರೈಸಲು ಸಹಾಯಕವಾಗಲಿದೆ

ಶ್ಯಾನುಭೋಗ್ ಸಹೋದರಿಯರಿಂದ “ದಾಸ ಶೃತಿ” ಗಾಯನ ಕಾರ್ಯಕ್ರಮ

ಬೆಂಗಳೂರು : ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜೂನ್ 19, ಗುರುವಾರ ಸಂಜೆ 7-00ಕ್ಕೆ ಶ್ಯಾನಭೋಗ್ ಸಹೋದರಿಯರಿಂದ “ದಾಸ ಶೃತಿ”. ಗಾಯನ ಮತ್ತು ಹಾರ್ಮೋನಿಯಂ : ಕು|| ಶ್ರೀರಕ್ಷಾ ಶ್ಯಾನಭೇಗ್ ಹಾಗೂ ಗಾಯನ ಮತ್ತು ತಬಲಾ : ಕು|| ಶ್ರೀರಶ್ಮಿ ಶ್ಯಾನುಭೋಗ್. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ 6ನೇ ಹಂತ ಬನಶಂಕರಿ, ಬೆಂಗಳೂರು

ಅಪಾಯಕಾರಿ ಹಂತಕ್ಕೆ ತಲುಪಿದ ಇರಾನ್ – ಇಸ್ರೇಲ್ ನಡುವಿನ ಯುದ್ಧ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಯಾಗಿದ್ದು ಅಪಾಯಕಾರಿ ಹಂತಕ್ಕೆ ತಲುಪಿದೆ. ಇಸ್ರೇಲ್‌ ಬೆಂಬಲಕ್ಕೆ ನಿಂತಿರುವ ಟ್ರಂಪ್‌ ಶರಣಾಗುವಂತೆ ಧಮ್ಕಿ ಹಾಕಿದ್ದಾರೆ. ಆದ್ರೆ ಅಮೆರಿಕ ಬೆದರಿಕೆಗೂ ಜಗ್ಗದ ಇರಾನ್‌ನ ಸರ್ವೋಚ್ಛ ನಾಯಕ (Iran’s Supreme Leader Ali Khamenei) ʻಯುದ್ಧ ಶುರುವಾಗಿದೆʼ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ನಮಿ ಹೆಸರಿನಲ್ಲಿ, ಯುದ್ಧ ಪ್ರಾರಂಭವಾಗುತ್ತದೆ. ಅಲಿ ತನ್ನ ಜುಲ್ಫಿಕರ್‌ನೊಂದಿಗೆ ಖಮೇನಿಗೆ ಹಿಂತಿರುಗುತ್ತಾನೆ. ಹೈದರ್‌ ಹೆಸರಿನಲ್ಲಿ ಯುದ್ಧ ಶುರುವಾಗುತ್ತೆ, ಜಿಯೋನಿಸ್ಟ್‌ (ಯಹೂದಿಗಳು) ಗಳಿಗೆ ಯಾವುದೇ ಕರುಣೆ ತೋರಲ್ಲ.  ಎಂದು ಅಯತೊಲ್ಲಾ ಅಲಿ ಖಮೇನಿ ಅವರ ಅನುವಾದ ಪೋಸ್ಟ್‌ ಸೂಚಿಸಿದೆ.

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ನೇರವಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಖಮೇನಿ ಅವರ ಈ ಪೋಸ್ಟ್‌ ಬಂದಿದೆ.

ಟ್ರಂಪ್‌ ಹೇಳಿದ್ದೇನು? ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಅವನನ್ನು ನಾವು ಹತ್ಯೆ ಮಾಡಲು ಹೋಗುವುದಿಲ್ಲ. ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ಸಹನೆಯನ್ನು ಪರೀಕ್ಷೆ ಮಾಡುವುದು ಬೇಡ. ನಾವು ಈಗ ಇರಾನ್ ಆಕಾಶದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದೇವೆ. ಇರಾನ್ ಉತ್ತಮ ಸ್ಕೈ ಟ್ರ್ಯಾಕರ್‌ಗಳು ಮತ್ತು ಇತರ ರಕ್ಷಣಾ ಸಾಧನಗಳನ್ನು ಹೊಂದಿತ್ತು. ಆದರೆ ಅಮೇರಿಕ ನಿರ್ಮಿತ ಸಾಮಾಗ್ರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಮೆರಿಕ ತಯಾರಿಸಿದಂತೆ ಯಾರೂ ಉತ್ತಮವಾಗಿ ತಯಾರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದರು.