ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಕಾರ್ಯಾಚರಣೆ; ಡ್ರಗ್‌ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವಿದೇಶಿ ಮಹಿಳೆ ಬಂಧನ

5 ಕೆ.ಜಿ 325 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎA.ಎ ಕ್ರಿಸ್ಟೆಲ್ ವಶ. ಮೌಲ್ಯ ₹ 10 ಕೋಟಿ.
ದಿನಾಂಕ:10/06/2025 ರಂದು ಬೆಂಗಳೂರು ನಗರದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಖಚಿತ ಮಾಹಿತಿಯೊಂದು ಬಾತ್ಮೀದಾರರಿಂದ ದೊರೆತಿರುತ್ತದೆ. ಮಾಹಿತಿಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣಾ ಸರಹದ್ದಿನ ರಾಜಾನುಕುಂಟೆ ಮುಖ್ಯರಸ್ತೆಯ ಬಳಿ, ಓರ್ವ ವಿದೇಶಿ ಮಹಿಳೆಯು ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಾ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದಾರೆಂದು ತಿಳಿಸಿರುತ್ತಾರೆ.
ಈ ಮಾಹಿತಿಯ ಆಧಾರದ ಮೇರೆಗೆ, ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ದಾವಿಸಿ, ಓರ್ವ ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮಹಿಳೆಯ ವಶದಿಂದ 5 ಕೆ.ಜಿ 325 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎA.ಎ ಕ್ರಿಸ್ಟಲ್, ಒಂದು ಆಪಲ್ ಮೊಬೈಲ್ ಫೋನ್ ಹಾಗೂ 11 ಜೊತೆ ಹೊಸ ಚೂಡಿದಾರ್ ಡ್ರೆಸ್ ಪೀಸ್‌ಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು. ಇವುಗಳ ಒಟ್ಟು ಮೌಲ್ಯ ₹ 10,00,00,000/-(ಹತ್ತು ಕೋಟಿ ರೂಪಾಯಿ).
ವಶಕ್ಕೆ ಪಡೆದ ವಿದೇಶಿ ಮಹಿಳೆಯನ್ನು ಪ್ರಶ್ನಿಸಲಾಗಿ, ಆಕೆಯು 2021ನೇ ಸಾಲಿನ ಅಕ್ಟೋಬರ್ 04 ರಂದು ಬ್ಯುಸಿನೆಸ್ ವೀಸಾದಡಿ, ನವದೆಹಲಿಗೆ ಬಂದು ವಾಸವಾಗಿದ್ದುಕೊಂಡು, ನಂತರ ತೆಲಂಗಾಣ ರಾಜ್ಯದ ಡೀಮ್ಡ್ ಯುನಿವರ್ಸಿಟಿಯೊಂದರಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದುಕೊಂಡು ಕಾಲೇಜಿಗೂ ಸಹ ದಾಖಲಾಗದೆ, ಹೆಚ್ಚು ಹಣ ಸಂಪಾದನೆ ಮಾಡುವ ಉದ್ದೇಶದಿಂದ ಹಾಗೂ ಮೋಜಿನ ಜೀವನ ನಡೆಸಲು, ತನ್ನ ಸ್ನೇಹಿತೆಯೊಂದಿಗೆ ಸೇರಿಕೊಂಡು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿರುವುದಾಗಿ ತಿಳಿಸಿರುತ್ತಾಳೆ. ಈಕೆಯೂ ಹೊಸ ಡ್ರೆಸ್‌ಪೀಸ್ ಮೆಟಿರಿಯಲ್‌ಗಳ ಮಧ್ಯದಲ್ಲಿ ಎಂಡಿಎAಎ ಕ್ರಿಸ್ಟೆಲ್‌ನ್ನು ಅಡಗಿಸಿಕೊಟ್ಟುಕೊಂಡು, ದೆಹಲಿಯಿಂದ ಬೆಂಗಳೂರಿಗೆ ಬಸ್ ಮಾರ್ಗವಾಗಿ ಸಾಗಾಟ ಮಾಡಿಕೊಂಡು, ಬೆಂಗಳೂರಿನಲ್ಲಿರುವ ಸ್ಥಳೀಯ ಡ್ರಗ್‌ಪೆಡ್ಲರ್‌ಗಳಿಗೆ ಸರಬರಾಜು ಮಾಡುತ್ತಾ ಅಕ್ರಮ ಹಣದ ಸಂಪಾದನೆಯಲ್ಲಿ ತೊಡಗಿಸಿಕೊಂಡಿರುವುದು ತಿಳಿದುಬಂದಿರುತ್ತದೆ.
ಈ ಕುರಿತು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿತೆಯ ಸ್ನೇಹಿತೆಯ ಪತ್ತೆಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯ ನ್ನೊಳಗೊಂಡ ತಂಡದವರು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles