ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಕಾರ್ಯಾಚರಣೆ; ಡ್ರಗ್‌ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವಿದೇಶಿ ಮಹಿಳೆ ಬಂಧನ

5 ಕೆ.ಜಿ 325 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎA.ಎ ಕ್ರಿಸ್ಟೆಲ್ ವಶ. ಮೌಲ್ಯ ₹ 10 ಕೋಟಿ.
ದಿನಾಂಕ:10/06/2025 ರಂದು ಬೆಂಗಳೂರು ನಗರದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಖಚಿತ ಮಾಹಿತಿಯೊಂದು ಬಾತ್ಮೀದಾರರಿಂದ ದೊರೆತಿರುತ್ತದೆ. ಮಾಹಿತಿಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣಾ ಸರಹದ್ದಿನ ರಾಜಾನುಕುಂಟೆ ಮುಖ್ಯರಸ್ತೆಯ ಬಳಿ, ಓರ್ವ ವಿದೇಶಿ ಮಹಿಳೆಯು ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಾ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದಾರೆಂದು ತಿಳಿಸಿರುತ್ತಾರೆ.
ಈ ಮಾಹಿತಿಯ ಆಧಾರದ ಮೇರೆಗೆ, ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ದಾವಿಸಿ, ಓರ್ವ ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮಹಿಳೆಯ ವಶದಿಂದ 5 ಕೆ.ಜಿ 325 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎA.ಎ ಕ್ರಿಸ್ಟಲ್, ಒಂದು ಆಪಲ್ ಮೊಬೈಲ್ ಫೋನ್ ಹಾಗೂ 11 ಜೊತೆ ಹೊಸ ಚೂಡಿದಾರ್ ಡ್ರೆಸ್ ಪೀಸ್‌ಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು. ಇವುಗಳ ಒಟ್ಟು ಮೌಲ್ಯ ₹ 10,00,00,000/-(ಹತ್ತು ಕೋಟಿ ರೂಪಾಯಿ).
ವಶಕ್ಕೆ ಪಡೆದ ವಿದೇಶಿ ಮಹಿಳೆಯನ್ನು ಪ್ರಶ್ನಿಸಲಾಗಿ, ಆಕೆಯು 2021ನೇ ಸಾಲಿನ ಅಕ್ಟೋಬರ್ 04 ರಂದು ಬ್ಯುಸಿನೆಸ್ ವೀಸಾದಡಿ, ನವದೆಹಲಿಗೆ ಬಂದು ವಾಸವಾಗಿದ್ದುಕೊಂಡು, ನಂತರ ತೆಲಂಗಾಣ ರಾಜ್ಯದ ಡೀಮ್ಡ್ ಯುನಿವರ್ಸಿಟಿಯೊಂದರಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದುಕೊಂಡು ಕಾಲೇಜಿಗೂ ಸಹ ದಾಖಲಾಗದೆ, ಹೆಚ್ಚು ಹಣ ಸಂಪಾದನೆ ಮಾಡುವ ಉದ್ದೇಶದಿಂದ ಹಾಗೂ ಮೋಜಿನ ಜೀವನ ನಡೆಸಲು, ತನ್ನ ಸ್ನೇಹಿತೆಯೊಂದಿಗೆ ಸೇರಿಕೊಂಡು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿರುವುದಾಗಿ ತಿಳಿಸಿರುತ್ತಾಳೆ. ಈಕೆಯೂ ಹೊಸ ಡ್ರೆಸ್‌ಪೀಸ್ ಮೆಟಿರಿಯಲ್‌ಗಳ ಮಧ್ಯದಲ್ಲಿ ಎಂಡಿಎAಎ ಕ್ರಿಸ್ಟೆಲ್‌ನ್ನು ಅಡಗಿಸಿಕೊಟ್ಟುಕೊಂಡು, ದೆಹಲಿಯಿಂದ ಬೆಂಗಳೂರಿಗೆ ಬಸ್ ಮಾರ್ಗವಾಗಿ ಸಾಗಾಟ ಮಾಡಿಕೊಂಡು, ಬೆಂಗಳೂರಿನಲ್ಲಿರುವ ಸ್ಥಳೀಯ ಡ್ರಗ್‌ಪೆಡ್ಲರ್‌ಗಳಿಗೆ ಸರಬರಾಜು ಮಾಡುತ್ತಾ ಅಕ್ರಮ ಹಣದ ಸಂಪಾದನೆಯಲ್ಲಿ ತೊಡಗಿಸಿಕೊಂಡಿರುವುದು ತಿಳಿದುಬಂದಿರುತ್ತದೆ.
ಈ ಕುರಿತು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿತೆಯ ಸ್ನೇಹಿತೆಯ ಪತ್ತೆಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯ ನ್ನೊಳಗೊಂಡ ತಂಡದವರು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles