ಸರ್ಕಾರಿ ಶಾಲೆ ಮಕ್ಕಳಿಗೆ ನೆರವಾದ ರಾಜಮ್ಮಗೆ ಮೋಹನ್ ಕುಮಾರ್ ದಾನಪ್ಪರಿಂದ ಅಭಿನಂದನೆ!

ಕಂಪ್ಲಿ: 12, ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌, ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಪರೋಪಕಾರಿ ಕಾರ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಸನ್ಮಾನಿಸಿ ಅಭಿನಂದಿಸಿದ್ದಾರೆ

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಲಿಂಗತ್ವ ಅಲ್ಪಸಂಖ್ಯಾತರಾದ ರಾಜಮ್ಮನವರು ಜೀವನ ಸಾಗಿಸಲು ಭೀಕ್ಷಾಟನೆಯಲ್ಲಿ ತೊಡಗಿ ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸಾಮಾಜಿಕ ಕಾರ್ಯ ಮಾಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ಸುಗ್ಗೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾರದಾ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಓಟ್ಟು 150 ಮಕ್ಕಳಿಗೆ 60 ಸಾವಿರ ರೂಪಾಯಿ ಮೌಲ್ಯದ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌ಗಳನ್ನು ಮತ್ತು 2023ನೇ ಸಾಲಿನಲ್ಲಿ ಸದರಿ ಸುಗ್ಗೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿಗಳ ಮೌಲ್ಯದ ಬಟ್ಟೆಗಳನ್ನು ಕೊಡುಗೆಯಾಗಿ ನೀಡಿ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆದಿರುತ್ತಾರೆ,

ಪ್ರಸ್ತುತದ ದಿನಮಾನಗಳಲ್ಲಿ ತಮ್ಮ ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಬದುಕುತ್ತಿರುವ ಜನಗಳ ಮಧ್ಯೆ ಲಿಂಗತ್ವ ಅಲ್ಪಸಂಖ್ಯಾತರಾದ ರಾಜಮ್ಮನವರು ತಮ್ಮ ಬಾಲ್ಯದ ಜೀವನದಲ್ಲಿದ್ದ ಬಡತನದ ಕಾರಣದಿಂದ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಆಸಾಧ್ಯವಾಯಿತೆಂಬುವ ಕಾರಣದಿಂದ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಾದರೂ ಉತ್ತಮ ವಿದ್ಯಾಭ್ಯಾಸ ಮಾಡಬೇಕು, ಅಂದ ಚಂದವಾಗಿ ಕಾಣಬೇಕೆನ್ನುವ ಹಿತಾದೃಷ್ಟಿಯಿಂದ ತಮ್ಮ ಭೀಕ್ಷಾಟನೆಯಿಂದ ಬಂದ ಹಣದಲ್ಲಿ ಒಂದಿಷ್ಟೂ ಹಣವನ್ನು ಉಳಿತಾಯ ಮಾಡಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿರುವ ಇವರ ಪರೋಪಕಾರಿ ಕಾರ್ಯವು ತೃತೀಯ ಲಿಂಗಿಗಳನ್ನು ಅಸಹ್ಯವಾಗಿ ನೋಡುತ್ತಿದ್ದ ವರ್ಗವನ್ನೆ ನಾಚಿಸುವಂತೆ ಮಾಡಿದೆ, ಮಂಗಳಮುಖಿ ಸಮುದಾಯ ಸೇರಿದಂತೆ ರಾಜ್ಯಕ್ಕೆ ಯಾಗಿದ್ದಾರೆ, ಇಂತಹ ವಿಶಿಷ್ಟ ವ್ಯಕ್ತಿ ನನ್ನ ಮೂಲ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನವರೆಂದು ಹೇಳಲು ಗರ್ವಪಡುತ್ತಾ, ಸರ್ಕಾರಿ ಶಾಲೆ ಮಕ್ಕಳ ಮೇಲಿರುವ ಪ್ರೀತಿ, ಸೇವಾ ಮನೋಭಾವನೆ, ಪರೋಪಕಾರಿ ಗುಣವನ್ನು ಮತ್ತು ಸಮಾಜಮುಖಿ ಕಾರ್ಯಗಳನ್ನು ಪ್ರಶಂಸಿಸಿ ಮೋಹನ್ ಕುಮಾರ್ ದಾನಪ್ಪನವರು ಹಾರೈಸಿದ್ದಾರೆ,

ಶಿಕ್ಷಣ ಮಾರ್ಗದರ್ಶಿ

VK NEWS DIGITAL : HEADLINES :

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles