ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ ಮತ್ತು ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ಧಿ : ಸಿದ್ದರಾಮಯ್ಯ

ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ ಎನ್‍ಒಸಿ ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ:

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ.

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles