ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಏಕ್ ಪೇಡ್ ಮಾ ಕೆ ನಾಮ್-2.0” ಅಭಿಯಾನ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಿಷನ್ ಲೈಫ್ (ಪರಿಸರಕ್ಕಾಗಿ ಜೀವಶೈಲಿ) ದೃಷ್ಠಿಕೋನದ ಅನುಗುಣವಾಗಿ “ಏಕ್ ಪೇಡ್ ಮಾ ಕೆ ನಾಮ್-2.0” ಅಭಿಯಾನವನ್ನು ಕೇಂದ್ರ ಸರ್ಕಾರ ಇದೇ ಜೂನ್ 5 ವಿಶ್ವ ಪರಿಸರ ದಿನಾಚರಣೆಯಂದು ದೇಶಾದ್ಯಂತ ಪ್ರಾರಂಭಿಸಿದೆ.

ಇಡೀ ಸರ್ಕಾರ ಹಾಗೂ ಸಮಾಜದ ಸಹಭಾಗಿತ್ವದಲ್ಲಿ, ವಿವಿಧ ಇಲಾಖೆಗಳು, ಶಾಲಾ ಕಾಲೇಜುಗಳು, ಸಂಸ್ಥೆಗಳು ಒಳಗೊಂಡಂತೆ ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಕೈ ಜೋಡಿಸಿವೆ. ಕರ್ನಾಟಕದಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ವಿವಿಧ ಇಲಾಖಾ ಮುಖ್ಯಸ್ಥರು, ಸಂಘ ಸಂಸ್ಥೆಗಳಿಗೆ ಕ್ರಮಕೈಗೊಳ್ಳುವ ಕುರಿತಂತೆ ಸೂಕ್ತ ನಿರ್ದೇಶನ ನೀಡಲಾಗಿದೆ.

ಈ ಕಾರ್ಯಕ್ರಮವನ್ನು 2025ನೇ ಜೂನ್ 05 ರಿಂದ ಸೆಪ್ಟೆಂಬರ್ 30 ರ ವರೆಗೆ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಸುಮಾರು 10 ಕೋಟಿ ಮರಗಳನ್ನು ನೆಡುವ ಗುರಿ ಹೊಂದಲಾಗಿದೆ. ಇದರಿಂದ ನಾವು ಪ್ರಕೃತಿ ಮಾತೆಯಾದ ಭೂಮಿತಾಯಿ ಹಾಗೂ ನಮ್ಮ ಹೆತ್ತ ತಾಯಿ ಇಬ್ಬರಿಗೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಪ್ರಧಾನ ಮಂತ್ರಿಗಳು ತಮ್ಮ ಸಂದೇಶದಲ್ಲಿ ತಿಳಿಸಿರುತ್ತಾರೆ.

“ಏಕ್ ಪೇಡ್ ಮಾ ಕೆ ನಾಮ್” ಅಭಿಯಾನ ನಮ್ಮ ಪರಿಸರದ ಜೊತೆಗಿನ ಭಾವನಾತ್ಮಕ ಜವಬ್ದಾರಿಯನ್ನು ಅನಾವರಣಗೊಳಿಸಲಿದೆ. ಮರದಿಂದ ದೇಶದಲ್ಲಿ ಸಮೃದ್ಧಿ ನೆಲೆಸುತ್ತದೆ. ಕಾರ್ಯಕ್ರಮ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಓರ್ವ ನೋಡಲ್ ಅಧಿಕಾರಿಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೇಮಿಸಲು ತಿಳಿಸಲಾಗಿದೆ. ಇದಕ್ಕೆ ಸಂಕ್ಷಿಪ್ತ  ಕ್ರಿಯಾ ಯೋಜನೆಯನ್ನು ಆಯಾ ಜಿಲ್ಲೆಯವರು ರೂಪಿಸಿ ತಮ್ಮಲ್ಲಿ ಲಭ್ಯವಿರುವ ಕಿರು ಅರಣ್ಯ ಪ್ರದೇಶಗಳ ಕುರಿತು ಸಹ ಮಾಹಿತಿ ನೀಡಬೇಕಿದೆ. ಈ ಕಾರ್ಯಕ್ರಮದಲ್ಲಿ ನಾಗರಿಕರು ಅದರಲ್ಲೂ ಯುವಜನತೆಯನ್ನು ಪಾಲ್ಗೊಳ್ಳುವಂತೆ ಮಾಡುವುದರಿಂದ ನಮ್ಮ ದೇಶ, ರಾಜ್ಯ ಹಸಿರಿನಿಂದ ಕಂಗೊಳಿಸುವುದರಲ್ಲಿ ಅನುಮಾನವಿಲ್ಲ.

ಹೆಚ್ಚಿನ ವಿವರಗಳಿಗೆ ಮೆರಿ ಲೈಪ್ ಪೋರ್ಟಲ್ https://merilife.nic.in ನ್ನು ವೀಕ್ಷಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles