ಕೆ ಐ ಎ ಡಿ ಬಿ ವತಿಯಿಂದ ಬೃಹತ್ ಮೆರವಣಿಗೆ: ಮಾದಿಗ ದಂಡೋರ ಸಂಘಟನೆಯಿಂದ ಸಂಪೂರ್ಣ ಬೆಂಬಲ

ಶಿಡ್ಲಘಟ್ಟ : ಜೂನ್ 30 ಸೋಮವಾರದಂದು ಕೆ ಐ ಎ ಡಿ ಬಿ ವತಿಯಿಂದ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆಯನ್ನು ದಲಿತ ಪರ ಸಂಘಟನೆಗಳು ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಪರ ಸಂಘಟನೆಗಳು ಹಮ್ಮಿಕೊಂಡಿರುವ ಪ್ರತಿಭಟನೆಗೆ ಮಾದಿಗ ದಂಡೋರ ಸಂಘಟನೆಯಿಂದ ಸಂಪೂರ್ಣ ಬೆಂಬಲ ಇದೆ ಎಂದು ಮಾದಿಗ ದಂಡೋರ ಜಿಲ್ಲಾ ಸದಸ್ಯ ದೇವರ ಮಳ್ಳೂರು ಕೃಷ್ಣಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಂಗಮಕೋಟೆ ಹೋಬಳಿಯ 13 ಹಳ್ಳಿಗಳಿಗೆ ಸೇರಿದ ಕೆ ಐ ಎ ಡಿ ಬಿ ಗೆ ಸಂಬಂಧಿಸಿದಂತೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವು ಬಹಳ ಹಿಂದುಳಿದಿದ್ದು ಅನೇಕ ಯುವಕರು ವರರಾಜ್ಯ ಹಾಗೂ ಅವರ ಜಿಲ್ಲೆಗಳಿಗೆ ಉದ್ಯೋಗವನ್ನರಸಿ ತೆರಳುತ್ತಿದ್ದಾರೆ. ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆಕರಣ ಆದರೆ ನಮ್ಮ ಶಿಡ್ಲಘಟ್ಟ ಜನತೆಗೆ ಉದ್ಯೋಗ ಸಿಗುತ್ತದೆ, ತಾಲೂಕಿನಲ್ಲಿ ಅತಿ ಹೆಚ್ಚು ಬಡತನವನ್ನು ಹೊಂದಿದ್ದರೆ ಬಡತನ ನಿರ್ಮೂಲವಾಗಬೇಕಾದರೆ, ನಮ್ಮ ತಾಲೂಕಿಗೆ ಕೈಗಾರಿಕೆಗಳು ಅತ್ಯವಶ್ಯಕವಾಗಿವೆ. ಹಿಂದುಳಿದ ತಾಲೂಕಾಗಿರುವ ಶಿಡ್ಲಘಟ್ಟವು ಅಭಿವೃದ್ಧಿಯತ್ತ ಸಾಗುತ್ತದೆ.
ಸೋಮವಾರ ದಲಿತ ಪರ ಸಂಘಟನೆಗಳು ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿರುವ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆಗೆ ನಮ್ಮ ರಾಜ್ಯ ಪ್ರಧಾನ ಕಾರ್ಯದರ್ಶಿ ಜಂಗಮ ಶೀಗಹಳ್ಳಿ ದೇವರಾಜ್ ಅವರ ಸೂಚನೆಯಂತೆ ನಾವು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಮಾದಿಗ ದಂಡೋರ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಅಲಸೂರದಿನ್ನೇ ಅಂಜಿ ಮಾತನಾಡಿ ದಲಿತ ಪರ ಸಂಘಟನೆಗಳು ಕನ್ನಡಪರ ಸಂಘಟನೆಗಳು ಹಾಗೂ ವಿವಿಧಪರ ಸಂಘಟನೆಗಳು ಸೋಮವಾರ ಮೆರವಣಿಗೆ ಹಾಗು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಕೆ ಐ ಎ ಡಿಬಿ ಸಂಸ್ಥೆಯು ಜಂಗಮಕೋಟೆಯ 13 ಹಳ್ಳಿಗಳ ಭೂಮಿಯನ್ನು ಪಡೆದುಕೊಂಡು ಆದಷ್ಟು ಬೇಗ ಕಾರ್ಖಾನೆಗಳನ್ನು ಸ್ಥಾಪಿಸಬೇಕು ಹಾಗೂ ಈ ಭಾಗದ ಹೆಚ್ಚು ವಿದ್ಯಾವಂತ ಯುವಕರಿದು ಅಂತವರಿಗೆ ನಿರುದ್ಯೋಗವನ್ನು ನೀಗಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ನಮ್ಮ ಸಂಘಟನೆಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಮಂಜುನಾಥ್ ಎ ಎನ್, ತಾಲೂಕು ಅಧ್ಯಕ್ಷ ನರಸಿಂಹಪ್ಪ, ಚಾಲಕರ ಘಟಕದ ಅಧ್ಯಕ್ಷ ವೇಣು,ತಾಲೂಕು ಖಜಾಂಚಿ ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ನಾರಾಯಣಸ್ವಾಮಿ, ಆಟೋ ಘಟಕ ಅಧ್ಯಕ್ಷ ಮುನಿರಾಜು,
ನಲಪ್ಪ, ಕೃಷ್ಣಪ್ಪ ಮತ್ತು ಇತರರು ಹಾಜರಿದ್ದರು.

*ವರದಿ ಚಿಕ್ಕತೇಕಹಳ್ಳಿ ಡಿ ಶಿವಕುಮಾರ್*

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles