ಕೆ ಐ ಎ ಡಿ ಬಿ ವತಿಯಿಂದ ಬೃಹತ್ ಮೆರವಣಿಗೆ: ಮಾದಿಗ ದಂಡೋರ ಸಂಘಟನೆಯಿಂದ ಸಂಪೂರ್ಣ ಬೆಂಬಲ

ಶಿಡ್ಲಘಟ್ಟ : ಜೂನ್ 30 ಸೋಮವಾರದಂದು ಕೆ ಐ ಎ ಡಿ ಬಿ ವತಿಯಿಂದ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆಯನ್ನು ದಲಿತ ಪರ ಸಂಘಟನೆಗಳು ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಪರ ಸಂಘಟನೆಗಳು ಹಮ್ಮಿಕೊಂಡಿರುವ ಪ್ರತಿಭಟನೆಗೆ ಮಾದಿಗ ದಂಡೋರ ಸಂಘಟನೆಯಿಂದ ಸಂಪೂರ್ಣ ಬೆಂಬಲ ಇದೆ ಎಂದು ಮಾದಿಗ ದಂಡೋರ ಜಿಲ್ಲಾ ಸದಸ್ಯ ದೇವರ ಮಳ್ಳೂರು ಕೃಷ್ಣಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಂಗಮಕೋಟೆ ಹೋಬಳಿಯ 13 ಹಳ್ಳಿಗಳಿಗೆ ಸೇರಿದ ಕೆ ಐ ಎ ಡಿ ಬಿ ಗೆ ಸಂಬಂಧಿಸಿದಂತೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವು ಬಹಳ ಹಿಂದುಳಿದಿದ್ದು ಅನೇಕ ಯುವಕರು ವರರಾಜ್ಯ ಹಾಗೂ ಅವರ ಜಿಲ್ಲೆಗಳಿಗೆ ಉದ್ಯೋಗವನ್ನರಸಿ ತೆರಳುತ್ತಿದ್ದಾರೆ. ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆಕರಣ ಆದರೆ ನಮ್ಮ ಶಿಡ್ಲಘಟ್ಟ ಜನತೆಗೆ ಉದ್ಯೋಗ ಸಿಗುತ್ತದೆ, ತಾಲೂಕಿನಲ್ಲಿ ಅತಿ ಹೆಚ್ಚು ಬಡತನವನ್ನು ಹೊಂದಿದ್ದರೆ ಬಡತನ ನಿರ್ಮೂಲವಾಗಬೇಕಾದರೆ, ನಮ್ಮ ತಾಲೂಕಿಗೆ ಕೈಗಾರಿಕೆಗಳು ಅತ್ಯವಶ್ಯಕವಾಗಿವೆ. ಹಿಂದುಳಿದ ತಾಲೂಕಾಗಿರುವ ಶಿಡ್ಲಘಟ್ಟವು ಅಭಿವೃದ್ಧಿಯತ್ತ ಸಾಗುತ್ತದೆ.
ಸೋಮವಾರ ದಲಿತ ಪರ ಸಂಘಟನೆಗಳು ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿರುವ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆಗೆ ನಮ್ಮ ರಾಜ್ಯ ಪ್ರಧಾನ ಕಾರ್ಯದರ್ಶಿ ಜಂಗಮ ಶೀಗಹಳ್ಳಿ ದೇವರಾಜ್ ಅವರ ಸೂಚನೆಯಂತೆ ನಾವು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಮಾದಿಗ ದಂಡೋರ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಅಲಸೂರದಿನ್ನೇ ಅಂಜಿ ಮಾತನಾಡಿ ದಲಿತ ಪರ ಸಂಘಟನೆಗಳು ಕನ್ನಡಪರ ಸಂಘಟನೆಗಳು ಹಾಗೂ ವಿವಿಧಪರ ಸಂಘಟನೆಗಳು ಸೋಮವಾರ ಮೆರವಣಿಗೆ ಹಾಗು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಕೆ ಐ ಎ ಡಿಬಿ ಸಂಸ್ಥೆಯು ಜಂಗಮಕೋಟೆಯ 13 ಹಳ್ಳಿಗಳ ಭೂಮಿಯನ್ನು ಪಡೆದುಕೊಂಡು ಆದಷ್ಟು ಬೇಗ ಕಾರ್ಖಾನೆಗಳನ್ನು ಸ್ಥಾಪಿಸಬೇಕು ಹಾಗೂ ಈ ಭಾಗದ ಹೆಚ್ಚು ವಿದ್ಯಾವಂತ ಯುವಕರಿದು ಅಂತವರಿಗೆ ನಿರುದ್ಯೋಗವನ್ನು ನೀಗಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ನಮ್ಮ ಸಂಘಟನೆಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಮಂಜುನಾಥ್ ಎ ಎನ್, ತಾಲೂಕು ಅಧ್ಯಕ್ಷ ನರಸಿಂಹಪ್ಪ, ಚಾಲಕರ ಘಟಕದ ಅಧ್ಯಕ್ಷ ವೇಣು,ತಾಲೂಕು ಖಜಾಂಚಿ ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ನಾರಾಯಣಸ್ವಾಮಿ, ಆಟೋ ಘಟಕ ಅಧ್ಯಕ್ಷ ಮುನಿರಾಜು,
ನಲಪ್ಪ, ಕೃಷ್ಣಪ್ಪ ಮತ್ತು ಇತರರು ಹಾಜರಿದ್ದರು.

*ವರದಿ ಚಿಕ್ಕತೇಕಹಳ್ಳಿ ಡಿ ಶಿವಕುಮಾರ್*

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles