ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳ ಬಗ್ಗೆ ತರಬೇತಿಗೆ ನೀಡಿ

ತುಮಕೂರು: ವಿಕಲಚೇತನರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು, ಬಾಲ ಬ್ಯಾಯ ಕಾಯಿದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ ಹಾಗೂ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೇರಿದಂತೆ ಮಕ್ಕಳ ರಕ್ಷಣಾ ಕಾಯಿದೆಗಳು ಹಾಗೂ ಸಾಂಸ್ಥಿಕ ವ್ಯವಸ್ಥೆಗಳ ಬಗ್ಗೆ ತರಬೇತಿ ನೀಡುವುದು ಅತ್ಯಗತ್ಯವಾಗಿದ್ದು ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆ ಈ ಬಗ್ಗೆ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.
ಅವರು ನಗರದ ಬಾಲಭವನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ 45412 ವಿಕಲಚೇತನರ ಪೈಕಿ 5467 ಮಕ್ಕಳು ಇದ್ದು ಅವರ ಸಬಲೀಕರಣಕ್ಕಾಗಿ ತಳಮಟ್ಟದಲ್ಲಿ ಪುನರ್ವಸತಿ ಕಾರ್ಯಕರ್ತರು ಕೆಲಸಮಾಡುತ್ತಿದ್ದು ಅವರಿಗೆ ಮಕ್ಕಳ ಸಂಬಂಧಿತ ಕಾಯಿದೆಗಳ ಅರಿವಿರುವುದು ಅಗತ್ಯವಿದೆ ಎಂದರು.
ಜಿಲ್ಲೆಯಲ್ಲಿ ಪಂಚಾಯ್ತಿಗೆ ಒಬ್ಬರಂತೆ ಒಟ್ಟು 322 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸದ್ಯ ಕಾರ್ಯನಿರ್ವಹಿಸುತ್ತಿದ್ದಾರೆ ಉಳಿದ 8 ಗ್ರಾಮ ಪಂಚಾಯ್ತಿಗಳಿಗೆ ನೇಮಕ ಮಾಡಿಕೊಳ್ಳಲು ಕ್ರಮವಹಿಸಿರುವುದಾಗಿ ವಿಕಲಚೇತನರ ಕಲ್ಯಾಣ ಅಧಿಕಾರಿ ಶ್ರೀ ಚಿದಾನಂದ್ ಸಭೆಗೆ ಮಾಹಿತಿ ನೀಡಿದರು. ಮುಂದುವರೆದು ವಿಕಲಚೇತನ ಮಕ್ಕಳ ಪೈಕಿ ವ್ಯಾಸಂಗ ಮಾಡುತ್ತಿರುವ 828 ಮಕ್ಕಳಿಗೆ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ವಿತರಣೆ ಮಾಡುತ್ತಿರುವುದು, 11 ಮಕ್ಕಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಮತ್ತು 4 ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ನೀಡಿರುವುದಾಗಿ ಸಭೆಗೆ ಮಾಹಿತಿ ನೀಡಿದರು. ಇದರ ಜೊತೆಯಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುತ್ತಿದೆ, ವಿಶೇಷ ಶಾಲೆಗಳಿಗೆ ಇಲಾಖೆಯ ನಿಯಮಾನುಸಾರ ಅನುದಾನ ನೀಡಲಾಗುತ್ತಿದೆ ಎಂದರು.
ವಿಕಲಚೇತನ ಮಕ್ಕಳ ಶಾಲೆಗಳು ಹಾಗೂ ವಸತಿ ನಿಲಯಗಳಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಅನುಷ್ಟಾನ ಮಾಡಲು ಸೂಚಿಸಿದರು. ಸದರಿ ಶಾಲೆಗಳಿಗೆ ನಿಯಮಿತವಾಗಿ ಬೇಟಿನೀಡಿ ಪರಿಶೀಲಿಸಿ ಮಕ್ಕಳ ಕೊಂದುಕೊರತೆಗಳನ್ನು ಆಲಿಸಲು ಸೂಚಿಸಿದರು.
ತುಮಕೂರು ತಾಲ್ಲೂಕು ಬೆಳಗುಂಬದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ನಡೆಯುತ್ತಿರುವ ಶ್ರವಣ ದೋಷವುಳ್ಳ ಮಕ್ಕಳ ವಸತಿಯುತ ಪಾಠಶಾಲೆಯಲ್ಲಿ ಮಂಜುರಾದ 12 ಹುದ್ದೆಗಳ ಪೈಕಿ ಕೇವಲ ಒಂದು ಹುದ್ದೆ ಮಾತ್ರ ಭರ್ತಿಯಾಗಿದೆ. ಉಳಿದ 11 ಹುದ್ದೆಗಳಿಗೆ ಆತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಸದಸ್ಯರು ಇಂತಹ ಮಕ್ಕಳಿಗೆ ತರಬೇತಿ ಹೊಂದಿದೆ ಕೌಶಲ್ಯಯುತ ಶಿಕ್ಷಕರು ಅಗತ್ಯವಿದ್ದು ಇಲಾಖೆ ಈ ಬಗ್ಗೆ ತುರ್ತಾಗಿ ಗಮನಹರಿಸಬೇಕೆಂದರು.
ಗ್ರಾಮ ಪಂಚಾಯ್ತಿಗಳಲ್ಲಿ ಪ್ರತೀ ವರ್ಷ ವಿಕಲಚೇತನರಿಗಾಗಿ ವಿಶೇಷ ಗ್ರಾಮಸಭೆ ನಡೆಸುವುದನ್ನು ಖಚಿತಪಡಿಸಿಕೊಳ್ಳಬೇಕು, ನಗರ ಸ್ಥಳೀಯಾಡಳಿತಗಳು ಸೇರಿದಂತೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಅನುದಾನದಲ್ಲಿ ವಿಕಲಚೇತನರ ಅಭಿವೃದ್ಧಿಗಾಗಿ ಮೀಸಲಿರುವ ಶೇ 5ರಷ್ಟು ಅನುದಾನದ ಸಮರ್ಪಕ ಬಳಕೆಯನ್ನು ಖಚಿತಪಡಿಸಿಕೊಳ್ಳಬೇಕು, ಈ ಎಲ್ಲಾ ಪ್ರಕ್ರಿಯೆಯಲ್ಲಿ ವಿಕಲಚೇತನ ಮಕ್ಕಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು, ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜೊತೆಗೆ ಸಮನ್ವಯ ಸಾಧಿಸಿ ವಿಕಲಚೇತನ ಮಕ್ಕಳ ಗೃಹ ಆಧಾರಿತ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಬೇಕೆಂದು ಸೂಚಿಸಿದರು.
ಸದರಿ ಸಭೆಯ ಜೊತೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂಧಿಗಳ ಸಭೆ ನಡೆಸಿ ವಿಷನ್ ವಾತ್ಸಲ್ಯ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರದ ಕಟ್ಟಡ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಬರೆಸುವುದು, ಆಯೋಗ ಈ ವರೆಗೂ ನಡೆಸಿದ ಸಭೆಗಳ ಬಗ್ಗೆ ಎಲ್ಲಾ ಇಲಾಖೆಗಳಿಂದ ಅನುಪಾಲನ ವರದಿ ಪಡೆಯುವುದು, ಆಯೋಗದಲ್ಲಿ ತುಮಕೂರು ಜಿಲ್ಲೆಯಿಂದ ದಾಖಲಾಗಿರುವ ಪ್ರಕರಣಗಳ ಬಗ್ಗೆ ಅನುಪಾಲನೆ ಮಾಡುವುದು, ಸೇರಿದಂತೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀ ದಿನೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಪವಿತ್ರ, ರಕ್ಷಣಾಧಿಕಾರಿ ಶ್ರೀ ಶಿವಣ್ಣ, ಶ್ರೀ ಗೌತಮ್, ಮಕ್ಕಳ ಸಹಾಯವಾಣಿ ಜಿಲ್ಲಾ ವ್ಯವಸ್ಥಾಪಕಿ ಅನುಷ ಸೇರಿದಂತೆ ಇತರರು ಉಪಸ್ಥಿತರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles