GKVKಯಲ್ಲಿ ವಿಭಿನ್ನ ‘ರೈತ ಸಂತೆ’ ಸಂಭ್ರಮ: ಜನಮನ ಸೆಳೆದ ನೇರಳೆ ಜೂಸ್ – ಎತ್ತಿನ ಬಂಡಿ ಸವಾರಿ

BENGALURU : ಬೆಂಗಳೂರಿನ ಜಿ.ಕೆ.ವಿ.ಕೆ (GKVK) ಆವರಣದ ಗಣಪತಿ ದೇವಸ್ಥಾನದ ಸಮೀಪವಿರುವ ಗುಂಡು ತೋಪಿನಲ್ಲಿ ಈ ತಿಂಗಳ ‘ರೈತ ಸಂತೆ’ಯನ್ನು (Raitha Santhe) ಅತ್ಯಂತ ವಿಭಿನ್ನ ಹಾಗೂ ಯಶಸ್ವಿಯಾಗಿ ನಡೆಯಿತು. ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಆಯೋಜಿಸಲಾಗಿದ್ದ ಈ ಸಂತೆಯು ನವೀನ ಉತ್ಪನ್ನಗಳು ಮತ್ತು ವೈವಿಧ್ಯಮಯ ಗ್ರಾಮೀಣ ಚಟುವಟಿಕೆಗಳ ಮೂಲಕ ನಗರವಾಸಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಗ್ರಾಹಕರನ್ನು ಆಕರ್ಷಿಸಿದ ವಿಶೇಷ ಉತ್ಪನ್ನಗಳು ಈ ಬಾರಿಯ ರೈತ ಸಂತೆಯಲ್ಲಿ ರೈತರು ನೇರವಾಗಿ ತಂದು ಮಾರಾಟ ಮಾಡಿದ ಹಲವು ವಿಶಿಷ್ಟ ಉತ್ಪನ್ನಗಳು ಸಾರ್ವಜನಿಕರ ವಿಶೇಷ ಗಮನ ಸೆಳೆದವು.

GKVK - RAITHA SANTHE, BENGALURU

ನೇರಳೆ ಜೂಸ್ ಶಾಟ್ಸ್: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ, ನೈಸರ್ಗಿಕ ರುಚಿ ಮತ್ತು ತಾಜಾತನದಿಂದ ಕೂಡಿದ ಈ ಆರೋಗ್ಯಪೂರ್ಣ ಪಾನೀಯ ಬೇಸಿಗೆಗೆ ಉತ್ತಮ ಪೌಷ್ಟಿಕ ಆಹಾರವಾಗಿ ಮೆಚ್ಚುಗೆ ಪಡೆಯಿತು. ಸ್ವೀಟ್ ಕಾರ್ನ್ ಸುಲಿಯುವ ಯಂತ್ರ: ಸಿಹಿ ಜೋಳದ ಕಾಳುಗಳನ್ನು ವೇಗವಾಗಿ ಮತ್ತು ಸುಲಭವಾಗಿ ಬೇರ್ಪಡಿಸುವ ಈ ಯಂತ್ರವು ರೈತರ ಸಮಯ ಮತ್ತು ಶ್ರಮವನ್ನು ಉಳಿಸುವ ತಂತ್ರಜ್ಞಾನವಾಗಿ ಸಾರ್ವಜನಿಕರ ಆಸಕ್ತಿಗೆ ಕಾರಣವಾಯಿತು.

ಮಳ್ಳು ಬದನೆಕಾಯಿ: ದೂರದ ವಿಜಯಪುರದಿಂದ ರೈತ ಮಹಿಳೆಯರು ತಂದಿದ್ದ ಪಾರಂಪರಿಕ ಅಡುಗೆಗಳ ವಿಶೇಷ ತರಕಾರಿಯಾದ ಮಳ್ಳು ಬದನೆಕಾಯಿ ನಾಟಿ ಬೆಳೆಗಳ ಮಹತ್ವವನ್ನು ಪರಿಚಯಿಸಿತು.

ಇತರ ನೈಸರ್ಗಿಕ ಉತ್ಪನ್ನಗಳು: ರಾಸಾಯನಿಕ ಮುಕ್ತ ‘ಪರಿಸರ ಸ್ನೇಹಿ ಆಯುರ್ವೇದಿಕ್ ಹೇರ್ ಡೈ’, ಪೌಷ್ಟಿಕಾಂಶ ಸಮೃದ್ಧ ‘ಮಲ್ಟಿ ಮಿಲೆಟ್ಸ್ ಮಿಶ್ರಣ’, ವಿಟಮಿನ್-ಸಿ ಯುಕ್ತ ‘ಬೆಟ್ಟದ ನೆಲ್ಲಿಕಾಯಿ’, ತಾಜಾ ಮಾವು, ಹಲಸು ಹಾಗೂ ನಾಟಿ ಸೌತೆಕಾಯಿ ಗ್ರಾಹಕರನ್ನು ಭಾರೀ ಪ್ರಮಾಣದಲ್ಲಿ ಸೆಳೆದವು.

ಇವುಗಳೊಂದಿಗೆ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಗೊಬ್ಬರಗಳು, ಜೈವಿಕ ಕೀಟನಾಶಕಗಳು, ಅಲಂಕಾರಿಕ ಗಿಡಗಳು, ಜೇನು ಕೃಷಿ ಉತ್ಪನ್ನಗಳು ಮತ್ತು ಅಲಂಕಾರಿಕ ಮೀನುಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆಯೂ ಇಲ್ಲಿದ್ದವು. ಮೃಗಾಲಯ ಪ್ರೇಮಿಗಳ ಸಂತೆ ವಾತಾವರಣದ ನಡುವೆ ಹಮ್ಮಿಕೊಳ್ಳಲಾಗಿದ್ದ ಎತ್ತಿನ ಬಂಡಿ ಸವಾರಿ ನಗರದ ಮಕ್ಕಳನ್ನು ವಿಶೇಷವಾಗಿ ಆಕರ್ಷಿಸಿತು.

‘ಕೃಷಿ ಪರಿಸರದೆಡೆಗೆ ನಮ್ಮ ನಡಿಗೆ’ಗೆ ಅಭೂತಪೂರ್ವ ಯಶಸ್ಸು ರೈತ ಸಂತೆಯ ಅಂಗವಾಗಿ ಆಯೋಜಿಸಲಾಗಿದ್ದ “ಕೃಷಿ ಪರಿಸರದೆಡೆಗೆ ನಮ್ಮ ನಡಿಗೆ” ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಭಾರಿ ಸ್ಪಂದನೆ ವ್ಯಕ್ತವಾಯಿತು.

ವೈದ್ಯರು, ಐಟಿ ಉದ್ಯೋಗಿಗಳು, ಗೃಹಿಣಿಯರು, ಯುವಕರು ಮತ್ತು ಹಿರಿಯರು ಸೇರಿದಂತೆ 150ಕ್ಕೂ ಹೆಚ್ಚು ನಗರವಾಸಿಗಳು ಸ್ವಯಂಪ್ರೇರಿತರಾಗಿ ಭಾಗವಹಿಸಿ, ಜಿ.ಕೆ.ವಿ.ಕೆ.ಯ ಹಸಿರು ಪರಿಸರದಲ್ಲಿ 6 ಕಿಲೋಮೀಟರ್ ನಡಿಗೆ ನಡೆಸಿದರು.

ನಡಿಗೆಯ ಸಂದರ್ಭದಲ್ಲಿ ಕೃಷಿ ಸಂಬಂಧಿತ ವಿಷಯಗಳ ಸಮಗ್ರ ಮಾಹಿತಿಯನ್ನು ಪಡೆದ ಸಾರ್ವಜನಿಕರು, ನಂತರ ರೈತ ಸಂತೆಗೆ ಭೇಟಿ ನೀಡಿ ವೈವಿಧ್ಯಮಯ ಉತ್ಪನ್ನಗಳನ್ನು ಖರೀದಿಸಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಎಸ್.ವಿ. ಸುರೇಶ, ವಿಸ್ತರಣಾ ನಿರ್ದೇಶಕರಾದ ಡಾ. ವೈ.ಎನ್. ಶಿವಲಿಂಗಯ್ಯ, ಸಂಶೋಧನಾ ನಿರ್ದೇಶಕರಾದ ಡಾ. ಮುಡಲಗಿರಿಯಪ್ಪ ಹಾಗೂ ಸಹ ವಿಸ್ತರಣಾ ನಿರ್ದೇಶಕರಾದ ಡಾ. ಕೆ.ಪಿ. ರಘುಪ್ರಸಾದ್ ಸೇರಿದಂತೆ ಹಲವು ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳಿಗಾಗಿ ವಿನೂತನ ಬೇಸಿಗೆ ಶಿಬಿರ

ಬೆಂಗಳೂರು, ಮೇ 24 (ಕರ್ನಾಟಕ ವಾರ್ತೆ):

ಕೃಷಿ ವಿಶ್ವವಿದ್ಯಾಲಯದ ಸಿಬ್ಬಂದಿ ತರಬೇತಿ ಘಟಕದ ವತಿಯಿಂದ ಮೇ 25 ರಿಂದ 29 ರವರೆಗೆ ಮಕ್ಕಳಿಗಾಗಿ ವಿನೂತನ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದೆ.

ಈಗಾಗಲೇ ಎರಡು ಬೇಸಿಗೆ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಇದೀಗ ಅಂತಿಮ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. “ಮಕ್ಕಳಿಗೆ ಬಿತ್ತನೆಯಿಂದ ಬೆಳೆಯವರೆಗೆ-ಕೃಷಿ ಪಯಣ”  ಎಂದು ಶಿಬಿರಕ್ಕೆ ಹೆಸರಿಡಲಾಗಿದೆ. ಈ ಶಿಬಿರದಲ್ಲಿ 8 ರಿಂದ 14 ವರ್ಷ ವಯಸ್ಸಿನ ಮಕ್ಕಳು ಭಾಗವಹಿಸಬಹುದು. ನಗರದ ಮಕ್ಕಳಿಗೆ ಕೃಷಿಯ ನೈಜ ಅನುಭವ ನೀಡಲು ಇದೊಂದು ಉತ್ತಮ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ 98443 80742 ಮತ್ತು 85532 15997 ಸಂಪರ್ಕಿಸಬಹುದುಎಂದು ಪ್ರಕಟಣೆ ತಿಳಿಸಿದೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles