ಮಲ್ಲಕಂಭ ದೇಸೀ ಕ್ರೀಡೆಯ ಪ್ರೋತ್ಸಾಹಕ್ಕೆ ಸರ್ಕಾರ ಸದಾ ಸಿದ್ಧ : ಸಿ.ಕೆ.ರಾಮಮೂರ್ತಿ

ಬೆಂಗಳೂರು : ಮಲ್ಲಕಂಭ ಕ್ರೀಡೆಯು ಅಪ್ಪಟ ದೇಸಿ ಕ್ರೀಡೆಯಾಗಿದ್ದು, ಆರೋಗ್ಯವಂತ ಸಮಾಜಕ್ಕೆ ಹಾಗೂ ಒಳ್ಳೆಯ ದೇಹಪ್ರಕೃತಿಗೆ ಉತ್ತಮ ಯೋಗಸಾಧನವಾಗಿದೆ (YOGA) ಎಂದು ಜಯನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ(MLA) ಸಿ.ಕೆ.ರಾಮಮೂರ್ತಿ (C.K.Rama Murthy) ಯವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ನಗರ ಜಿಲ್ಲೆ ಹಾಗೂ ಕರ್ನಾಟಕ ಅಮೆಚೂರ್(Ameture) ಮಲ್ಲಕಂಭ ಅಸೋಸಿಯೇಷನ್ ಇವರ ಸಹಯೋಗದಲ್ಲಿ ರಾಜ್ಯ ಮಟ್ಟದ ಮಲ್ಲಕಂಭ ಕ್ರೀಡೋತ್ಸವ 2025-26ರ ಕಾರ್ಯಕ್ರಮವನ್ನು ಜಯನಗರದ ದುರ್ಗಾಪರಮೇಶ್ವರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆದು ಉದ್ಘಾಟಿಸಿ ಮಾತನಾಡಿದ ಅವರು, ಶಾಸಕರು ಈ ದೇಸಿ ಕ್ರೀಡೆಯನ್ನ ನೆಲಮಟ್ಟದಿಂದ ಕೆಲ ಮೀಟರ್ ಎತ್ತರದ ಕಟ್ಟಿಗೆ ಕಂಬವನ್ನು ಕುಸ್ತಿಪಟುಗಳು(Wrestlers) ಸಾಧನೆಗಾಗಿ ಬಳಸುತ್ತಿದ್ದರು ಆದರೆ ನಂತರದ ದಿನಗಳಲ್ಲಿ ಇದೇ ಒಂದು ಸ್ವತಂತ್ರ ಕ್ರೀಡೆಯಾಗಿ ರೂಪುಗೊಂಡಿದೆ ಎಂದರು.

ರಾಜ್ಯದ 18 ಜಿಲ್ಲೆಗಳಿಂದ ತಲಾ 16 ಮಲ್ಲಕಂಭ ಕ್ರೀಡಾಪಟುಗಳು ಸೇರಿ ಒಟ್ಟು 300 ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಜಯಶಾಲಿಯಾಗಲಿ ಹಾಗೂ ಇನ್ನು ಹೆಚ್ಚಿನ ಪ್ರೋತ್ಸಾಹ ಮಲ್ಲಕಂಭ ಕ್ರೀಡೆಗೆ ಒದಗಿಸಿಕೊಡಲು ವೈಯಕ್ತಿಕವಾಗಿ ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ಎಲ್ಲ ಕ್ರೀಡಾಪಟುಗಳನ್ನು ಹುರಿದುಂಬಿಸಿ ಸಂತೋಷ ವ್ಯಕ್ತಪಡಿಸಿದ ಅವರು ಇಷ್ಟು ಅದ್ಬುತ ಕಾರ್ಯಕ್ರಮವನ್ನು ಜಯನಗರದಲ್ಲಿ ಆಯೋಜಿಸಿರುವುದಕ್ಕೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಅಭಿನಂಧಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ ಅವರು ಎಲ್ಲರನ್ನ ಸ್ವಾಗತಿಸಿ. ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, 14 ವರ್ಷ ಮೇಲ್ಪಟ್ಟ ಮತ್ತು 14 ವರ್ಷದೊಳಗಿನ ವಿಭಾಗಗಳಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ದಿನಾಂಕ11 ಮತ್ತು 12ರಂದು ಎರಡೂ ದಿನಗಳು ಸ್ಪರ್ಧೆಗಳು ನಡೆಯಲಿವೆ ಎಂದು ಹೇಳಿದರು.

ವಿಜೇತರಾದವರಿಗೆ ಪ್ರಥಮ ಬಹುಮಾನ ವೈಯಕ್ತಿಕ ವಿಭಾಗದಲ್ಲಿ ರೂ.5000/ದ್ವಿತೀಯ ಬಹುಮಾನ ರೂ.3000/ಹಾಗೂ ತೃತೀಯ ಬಹುಮಾನ ರೂ.2000 ನೀಡಲಾಗುವುದು. ಗುಂಪು ವಿಭಾಗದಲ್ಲಿ ಪ್ರಥಮ ಬಹುಮಾನ ರೂ.10000/- ದ್ವಿತೀಯ ಬಹುಮಾನ ರೂ. 7000 ಮತ್ತು ತೃತೀಯ ಬಹುಮಾನ ರೂ.5000/ನೀಡಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರು ನಗರ ಜಿಲ್ಲೆಗೆ ಆಗಮಿಸಿರುವ ಕ್ರೀಡಾಪಟುಗಳಿಗೆ ಪ್ರಯಾಣ ವೆಚ್ಚ ಮತ್ತು ಊಟೋಪಚಾರವನ್ನು ಇಲಾಖೆಯಿಂದ ಭರಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಅಮೆಚೂರು ಮಲ್ಲಕಂಭ ಅಸೋಸಿಯೇಷನ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಖಜಾಂಚಿ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

ಫುಟ್‌ಪಾತ್ ವ್ಯಾಪಾರಿಗಳಿಂದ ಆಗುತ್ತಿದ್ದ ಕಷ್ಟ ಅಷ್ಟಿಷ್ಟಲ್ಲ  – Bengaluru Footpath Encroachment

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

Topics

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

Related Articles