ವಿವಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸಿದ ರಾಜ್ಯಪಾಲರು

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿ ವತಿಯಿಂದ ವಿತರಿಸುತ್ತಿರುವ ಬಿಸಿಯೂಟ ವಿತರಣಾ ಕೇಂದ್ರಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಭೇಟಿಕೊಟ್ಟು, ವಿದ್ಯಾರ್ಥಿಗಳಿಗೆ ತಾವೇ ಊಟ ಬಡಿಸುವ ಮೂಲಕ ಯೋಜನೆಗೆ ಮೆಚ್ಚುಗೆ ಸೂಚಿಸಿದರು.

ಪಾವಗಡ ರಾಮಕೃಷ್ಣ ಸೇವಾಶ್ರಮ ಹಾಗೂ ಶಿರಡಿ ಸಾಯಿಮಂದಿರ ಆದರ್ಶನಗರ ತುಮಕೂರು ಸಹಯೋಗದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ಮಾಡುತ್ತಿರುವ ಕಾರ್ಯ ಅತ್ಯಂತ ಮಹತ್ವದ್ದಾಗಿ ಎಂದು ಶ್ಲಾಘಿಸಿದ ರಾಜ್ಯಪಾಲರು, ತಮ್ಮ ಘಟಿಕೋತ್ಸವ ಭಾಷಣದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿ ರಾಜ್ಯದಲ್ಲಿ ಬೇರೆ ಯಾವ ವಿವಿಯಲ್ಲೂ ಇಂತಹ ಯೋಜನೆ ಕಂಡಿಲ್ಲ.  ತುಮಕೂರು ವಿವಿಯಲ್ಲಿ ಕೇವಲ ೫ ರೂಪಾಯಿಗೆ ಮಕ್ಕಳಿಗೆ ಊಟ ಕೊಡುತ್ತಿರುವುದು ಮಾದರಿಯಾಗಿದೆ ಎಂದು ಪ್ರಶಂಸಿಸಿದರು.

ಈ ವೇಳೆ ಯೋಜನೆ ಕುರಿತು ರಾಜ್ಯಪಾಲರಿಗೆ ವಿವರಿಸಿದ ಪಾವಗಡ ರಾಮಕೃಷ್ಣ ಸೇವಾಶ್ರಮದ ಮುಖ್ಯಸ್ಥರಾದ ಸ್ವಾಮಿ ಜಪಾನಂದಜೀ ಹಾಗೂ ಕುಲಪತಿ ಪ್ರೊ.ಎಂ.ವೆoಕಟೇಶ್ವರಲು ಅವರು ಕಳೆದ ಮೂರು ವರ್ಷಗಳಿಂದ ದಾನಿಗಳ ಸಹಕಾರ, ಸಮಿತಿ ಸದಸ್ಯರ ನಿಸ್ಪೃಹ ಕಾರ್ಯ ಬದ್ಧತೆಯಿಂದಾಗಿ ಯೋಜನೆ ಅನೂಚಾನವಾಗಿ ನಡೆದುಬಂದಿದ್ದು, ಪ್ರಸಕ್ತ ಊಟದ ಯೋಜನೆ ಪ್ರಯೋಜನ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ  ೪೦೦೦ಕ್ಕೆ ವಿಸ್ತರಣೆಯಾಗಿದೆ. ವಿವಿಯ ನೂತನ ಜ್ಞಾನಸಿರಿ ಕ್ಯಾಂಪಸ್‌ನ ವಿದ್ಯಾರ್ಥಿಗಳಿಗೂ ಊಟ ವಿತರಿಸುತ್ತಿದ್ದು, ದೂರದ ಊರುಗಳಿಂದ ಬೆಳಿಗ್ಗೆ ಹಸಿದು ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟ ಅನುಕೂಲವಾಗಿದೆ ಎಂದರು.

ಅನ್ನಪೂರ್ಣೆಶ್ವರಿ ಆಹಾರ ಸಮಿತಿ ಸದಸ್ಯರಾದ ಡಾ. ಎಸ್.ನಾಗಣ್ಣ , ಡಾ.ಎಚ್.ಜಿ.ಚಂದ್ರಶೇಖರ್, ಡಾ.ರಮೇಶ್‌ಬಾಬು, ನಟರಾಜಶೆಟ್ಟಿ, ಕುಲಸಚಿವರುಗಳು, ಕಾಲೇಜಿನ ಪ್ರಾಂಶುಪಾಲೆ ಪ್ರೊ.ದ್ರಾಕ್ಷಾಯಿಣಿ, ಹಾಜರಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles