`ಅತಿಥಿ ಉಪನ್ಯಾಸಕರು – ಸಂಪನ್ಮೂಲ ವ್ಯಕ್ತಿ’ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ (ಕಾವಾ) ಅತಿಥಿ ಉಪನ್ಯಾಸಕರು – ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ

ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವ) ಸಂಸ್ಥೆಯಲ್ಲಿ 2025-26ನೇ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ / ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬಿವಿಎ ಮತ್ತು ಎಂಬಿಎ ವಿದ್ಯಾರ್ಥಿಗಳು ಸೇರಿದಂತೆ, ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ (ಗ್ರಾಫಿಕ್ಸ್) ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ಪ್ರಾಯೋಗಿಕ ಮತ್ತು ಥಿಯರಿ ಬೋಧನಾ ವಿಷಯಗಳಿಗೆ ಹಾಗೂ ಕಲಾ ಇತಿಹಾಸ ಥಿಯರಿ ಬೋಧನಾ ವಿಷಯಗಳಿಗೆ ಅರ್ಜಿಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪೋಸ್ಟ್ ಡಿಪ್ಲೊಮದಲ್ಲಿ (ಪಿ.ಜಿ.ಡಿಪ್ಲೋಮಾ) ಕನಿಷ್ಠ ಶೇಕಡ 55% ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಬಿವಿಎ ಮತ್ತು ಎಂಬಿಎ ವಿದ್ಯಾರ್ಥಿಗಳು ಸೇರಿದಂತೆ, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷಾ ವಿಷಯಗಳ ಬೋಧನ ವಿಷಯಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಕನ್ನಡ ಭಾಷಾ (ಎಂ.ಎ. ಇನ್ ಕನ್ನಡ) ಇಂಗ್ಲೀಷ್ ಭಾಷಾ (ಎಂ.ಎ. ಇನ್ ಇಂಗ್ಲೀಷ್) ಹಾಗೂ ಹಿಂದಿ ಭಾಷಾ (ಎಂ.ಎ. ಇನ್ ಹಿಂದಿ) ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ಕನಿಷ್ಠ ಶೇಕಡ 55% ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.

ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ಎಸ್.ಇ.ಸಿ ಪೇಪರ್ ಬೋಧನಾ ವಿಷಯಕ್ಕೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಕಾನೂನು ವಿಷಯದಲ್ಲಿ (ಎಲ್.ಎಲ್.ಎಂ) ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ 55% ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.

ಸೈಬರ್ ಸೆಕ್ಯೂರಿಟಿ / ಆರ್ಟಿಪಿಷಿಯಲ್ ಇಂಟಲಿಜೆನ್ಸ್ ಎಸ್.ಇ.ಸಿ ಪೇಪರ್ ಬೋಧನಾ ವಿಷಯಕ್ಕೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಎಂಎಸ್.ಸ್ಸಿ (ಐ.ಟಿ) ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ 55% ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.

ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ 25%ನ್ನು ಗಣನೆಗೆ ತೆಗೆದುಕೊಳ್ಳಲಾಗುವುದು (ಉದಾ. ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25ರಷ್ಟು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಂಡು ಒಟ್ಟಾರೆ ಗರಿಷ್ಠ 25 ಅಂಕಗಳಿಗೆ ಸೀಮಿತಗೊಳಿಸಲಾಗುವುದು. ಹೆಚ್ಚುವರಿ ವಿದ್ಯಾರ್ಹತೆ ಅಂದರೆ ಪಿಹೆಚ್.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ ಗರಿಷ್ಠ 12, ಎನ್.ಇ.ಟಿ. / ಕೆ.ಸೆಟ್ / ಎಸ್.ಎಲ್.ಇ.ಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ ಗರಿಷ್ಠ 09 ಹಾಗೂ ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದಲ್ಲಿ ಗರಿಷ್ಠ 06 ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು.

ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳಿಗೆ 48 ಅಂಕಗಳನ್ನು ಅನುಭವದ ಆಧಾರದ ಮೇಲೆ ತೆಗೆದುಕೊಳ್ಳಲಾಗುವುದು. (ಪ್ರತಿ ಶೈಕ್ಷಣಿಕ ವರ್ಷದ ಪೂರ್ಣ ಅವಧಿ ಸೇವೆಗೆ 3 ಅಂಕಗಳು, ಶೈಕ್ಷಣಿಕ ವರ್ಷದಲ್ಲಿ 1 ಸೆಮಿಸ್ಟರ್‍ನಲ್ಲಿ ಮಾತ್ರ ಸೇವೆ ಸಲ್ಲಿಸಿದ್ದರೆ 1.5 ಅಂಕಗಳು, ಸೆಮಿಸ್ಟರ್‍ನ 1 ತಿಂಗಳ ಅವಧಿಗೆ 0.5 ಅಂಕ, 1 ತಿಂಗಳು ಮೇಲ್ಪಟ್ಟು 2 ತಿಂಗಳ ವರೆಗಿನ ಸೇವಾ ಅವಧಿಗೆ 1 ಅಂಕ ಹಾಗೂ 2 ತಿಂಗಳು ಮೇಲ್ಪಟ್ಟ ಸೇವಾ ಅವಧಿಗೆ 1.5 ಅಂಕಗಳು) ಅಲ್ಲದೆ ವೈಯಕ್ತಿಕ ಸಂದರ್ಶನಕ್ಕೆ ಗರಿಷ್ಠ 10 ಅಂಕಗಳಂತೆ ಒಟ್ಟಾರೆ 110 ಅಂಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು.

ಗೌರವ ಸಂಭಾವನೆ:
ಪ್ರಾಯೋಗಿಕ ಹಾಗೂ ಥಿಯರಿ ತರಗತಿಗಳನ್ನು ತೆಗೆದುಕೊಳ್ಳುವ ಹಾಗೂ ವಾರದ 06 ದಿನಗಳ ಪೂರ್ಣಾವಧಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಇ.ಟಿ, ಎಸ್.ಎಲ್.ಇ.ಟಿ, ಪಿ.ಹೆಚ್.ಡಿ ಪದವಿ ಹೊಂದಿದವರಿಗೆ ರೂ 27,000/- ಪ್ರಾಯೋಗಿಕ ಹಾಗೂ ಥಿಯರಿ ತರಗತಿಗಳನ್ನು ತೆಗೆದುಕೊಳ್ಳುವ ಹಾಗೂ ವಾರದ 06 ದಿನಗಳು ಪೂರ್ಣವಧಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಇ.ಟಿ, ಎಸ್.ಎಲ್.ಇ.ಟಿ, ಪಿ.ಹೆಚ್.ಡಿ ಪದವಿ ಹೊಂದದೇ ಇರುವವರಿಗೆ ರೂ. 22500/- ಥಿಯರಿ ತರಗತಿಗಳನ್ನು ಮಾತ್ರ ತೆಗೆದುಕೊಳ್ಳುವವರಿಗೆ ಹಾಗೂ ವಾರದ 06 ದಿನಗಳು ಕರ್ತವ್ಯ ನಿರ್ವಹಿಸುತ್ತಿರುವ ಎನ್.ಇ.ಟಿ, ಎಸ್.ಎಲ್.ಇ.ಟಿ, ಪಿ.ಹೆಚ್.ಡಿ ಪದವಿ ಹೊಂದಿದವರಿಗೆ 19,500/- ಹಾಗೂ ಥಿಯರಿ ತರಗತಿಗಳನ್ನು ಮಾತ್ರ ತೆಗೆದುಕೊಳ್ಳುವವರಿಗೆ ಹಾಗೂ ವಾರದ 06 ದಿನಗಳು ಕರ್ತವ್ಯ ನಿರ್ವಹಿಸುತ್ತಿರುವ ಎನ್.ಇ.ಟಿ, ಎಸ್.ಎಲ್.ಇ.ಟಿ, ಪಿ.ಹೆಚ್.ಡಿ ಪದವಿ ಹೊಂದದೇ ಇರುವವರಿಗೆ 16,500/- ರೂ.ಗಳ ಗೌರವ ಸಂಭಾವನೆ ನೀಡಲಾಗುವುದು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯನ್ವಯ ಪ್ರತಿ ಗಂಟೆಗೆ ರೂ 500/- ರಂತೆ ಪ್ರತಿ ಮಾಹೆಗೆ ಗರಿಷ್ಠ ರೂ. 10,500/- ರೂ.ಗಳ ಗೌರವ ಸಂಭಾವನೆಯನ್ನು ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲು ನಿಯಮಾನುಸಾರ ಕ್ರಮ ವಹಿಸಲಾಗುವುದು.

ಅಸಕ್ತ ಅಭ್ಯಥಿಗಳು 2025ನೇ ಜೂನ್ 16ರ ಸಂಜೆ 5.30 ಗಂಟೆ ಒಳಗಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. 2025ನೇ ಜೂನ್ 26ರಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವ) ಸಂಸ್ಥೆಯಲ್ಲಿ ಸಂದರ್ಶನವನ್ನು ನಡೆಸಲಾಗುವುದು ಅಲ್ಲದೆ ತರಗತಿಗಳು ಅನ್ವಯವಾಗುವಂತೆ ಕಾರ್ಯನಿರ್ವಹಿಸಲು ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂತರ್ಜಾಲ www.mysore.nic.in ಮತ್ತು www.cavamysore.karnataka.gov.in ನ್ನು ವೀಕ್ಷಿಸಬಹುದು ಅಥವಾ ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವ) ಸಂಸ್ಥೆಯ ದೂರವಾಣಿ ಸಂಸ್ಥೆ 0821-2438931ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವ) ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles