ವೈಚಾರಿಕ ಸಾಹಿತ್ಯಕ್ಕೆ ಕನ್ನಡದಲ್ಲಿ ಮಾನ್ಯತೆ ಸಿಗುತ್ತಿರುವುದು ಆರೋಗ್ಯಕರ ಬೆಳವಣಿಗೆ ಕಾಸರವಳ್ಳಿ

ಕನ್ನಡ ಪುಸ್ತಕ  ಓದುವವರು ಇಲ್ಲ ಅನ್ನುತ್ತಿರುವ ಮಾತುಗಳು ಕೇಳಿಬರುತ್ತಿರುವಾಗಲೇ ಪ್ರಕಾಶಕರು ವೈವಿದ್ಯಮಯ ಪುಸ್ತಕವನ್ನು ಪ್ರಕಟಿಸುತ್ತಲೇ ಇದ್ದಾರೆ. ಇದರಿಂದ  ಒಂದು ಆರೋಗ್ಯಕರ ಬೆಳವಣಿಗೆ ಆಗಿದೆ. ಮೊದಲಿನಿಂದಲೂ ಸೃಜನಶೀಲ ಸಾಹಿತ್ಯಕ್ಕೆ ನೀಡಿದ ಮಹತ್ವ ವೈಚಾರಿಕ ಸಾಹಿತ್ಯಕ್ಕೆ ಸಿಗುತ್ತಿಲ್ಲ ಎನ್ನುವ ಸಕಾರಣವಾದ ಆರೋಪ ಕೇಳಿಬರುತ್ತಿತ್ತು. ಈಗ ಸಂತೋಷದ ಸಂಗತಿ ಎಂದರೆ ಸೃಜನೇತರ ವೈಚಾರಿಕ ಸಾಹಿತ್ಯಗಳು ಪ್ರಕಟವಾಗುತ್ತಿವೆ. ಸಾಕಷ್ಟು ಮಾನ್ಯತೆ ಸಿಗುತ್ತಿದೆ ಎಂದು ಕೃತಿಗಳನ್ನು ಲೋಕಾರ್ಪಣೆ ಮಾಡಿದ ಅಂತರರಾಷ್ಟ್ರಿಯ ಖ್ಯಾತಿಯ ಚಿತ್ರನಿರ್ದೇಶಕ ಗಿರೀಶ್‌ ಕಾಸರವಳ್ಳಿ ತಿಳಿಸಿದರು.
ಇಂದು ಲೋಕಾರ್ಪಣೆಗೊಂಡಿರುವ ಪುಸ್ತಕಗಳು ಹಳತು ಹೊಸತು ಎರಡು ತಲೆಮಾರಿನವರು ಇವೆ. ಇಂದು ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಬಾನುಮುಷ್ತಾಕ್‌ ಅವರಿಂದ ಮಾನ್ಯತೆ ದೊರೆತಿರುವುದು ಸಂತೋಷ, ಇಂತಹ ಸಂತೋಷ ಕನ್ನಡಕ್ಕೆ ನಿರಂತವಾಗಿರಲು ಇನ್ನಷ್ಟು ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್‌ಗೆ ಅನುವಾದ ಆಗಬೇಕೆಂದು ಕಾಸರವಳ್ಳಿ ಅಭಿಪ್ರಾಯ ಪಟ್ಟರು
ಮುಖ್ಯ ಅತಿಥಿಯಾಗಿದ್ದ ಶ್ರೀ ಜೋಗಿಯವರು  ಎಲ್ಲಾ ಪುಸ್ತಕಗಳನ್ನು ಪರಿಚಯಿಸಿ ಇಂದು ಬಿಡುಗಡೆಯಾದ 15 ಪುಸ್ತಕಗಳು ವಿಭಿನ್ನ ಪುಸ್ತಕಗಳು ಪ್ರಕಟವಾಗಿರುವುದು ಒಳ್ಳೇಯ ಬೆಳವಣಿಗೆ.  ಪುಸ್ತಕಗಳ ಬೆಳವಣಿಗೆ ಹುಲುಸಾಗಿದೆ ಆದರೆ ಓದುಗರು ಒಂದು ವಯೋಮಾನಕ್ಕೆ ನಿಂತಿದೆ. ಈಗ ಲೇಖಕರ ಜವಾಬ್ದಾರಿ ಹೆಚ್ಚಿದ್ದು. ಓದುಗರ ನಿರಂತರ ಸಂಪರ್ಕ ಬೆಳೆಸುವುದು ಮಾತನಾಡುವುದು ಕಾಣಿಸಿಕೊಳ್ಳುವುದು ಮುಖ್ಯವಾಗಿದ್ದು ಜೊತೆಗೆ ಇಂದಿನ ಕಾಲಮಾನಕ್ಕೆ ಪ್ರಸ್ತತವಾಗಿರುವ ಹೊಸ ಸಾಮಾಜಿಕ ಮಾಧ್ಯಮಗಳಿಗೆ ತೆರೆದುಕೊಳ್ಳಬೇಕೆಂದರು.
ಸಮಾರಂಭದಲ್ಲಿ ಡಾ. ಡಿ. ವಿ. ಗುರುಪ್ರಸಾದ್‌, ಡುಂಡಿರಾಜ್‌, ನಾಗತಿಹಳ್ಳಿ ಜಯಪ್ರಕಾಶ್‌ ತಮ್ಮ ಕೃತಿಗಳ ಕುರಿತು ಮಾತನಾಡಿದರು. ಎಂ. ಕೆ. ಇಂದಿರಾ ಅವರ ಪುತ್ರ ಮಂಜುನಾಥ್‌ ಸಭೆಯಲ್ಲಿ ಹಾಜರಿದ್ದರು.
ಸಮಾರಂಭದಲ್ಲಿ ಸಪ್ನ ಬುಕ್‌ ಹೌಸ್‌ ನಿತಿನ್‌ ಷಾ ಸ್ವಾಗತಿಸಿದರು. ಆರ್.‌ ದೊಡ್ಡೆಗೌಡ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯಸಾಹಿತಿಗಳು ಉಪಸ್ಥಿತರಿದ್ದರು.
VK NEWS DIGITAL :

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles