ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(CM.D.K.ShivaKumar) ಅವರು ಪ್ರಕಟಿಸಿದ್ದಾರೆ.
ಇಂದು ಬೆಂಗಳೂರಿನ ಬಿಐಇಸಿ (BIEC) ನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026′ (Google I/O Connect India 2026) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಈ ಮಹತ್ವದ ಘೋಷಣೆ ಮಾಡಿದರು.

ಇದರೊಂದಿಗೆ, ಸ್ಟಾರ್ಟ್‍ಅಪ್‍ಗಳು ಮತ್ತು ಉದ್ಯಮಗಳ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ವಿಶೇಷ ‘ಎಐ ಹಬ್’ (AI Hub) ಅನ್ನು ಇನ್‍ಕ್ಯುಬೇಶನ್(Incubation) ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಉಪಕ್ರಮಗಳು:
ಭಾರತದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ :
ಜಾಗತಿಕ ಮಟ್ಟದ ಎಐ ಪ್ರತಿಭೆಗಳನ್ನು ರೂಪಿಸಲು, ಸುಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಬಲವಾದ ಸಮನ್ವಯ ಸಾಧಿಸಲು ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು.

ಎಐ ಹಬ್ (AI Hub), ನವೋದ್ಯಮಗಳು (Startups), ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧಕರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿ ಕೈಗೊಳ್ಳಲು ಇದು ಅತ್ಯಾಧುನಿಕ ಇನ್‍ಕ್ಯುಬೇಶನ್ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

ಸರ್ಕಾರದ ದೂರದೃಷ್ಟಿ ಮತ್ತು ‘AI-Native’ ರಾಜ್ಯದ ಗುರಿ
ತಂತ್ರಜ್ಞಾನವನ್ನು ಕೇವಲ ಘೋಷಣೆಯಾಗಿ ಉಳಿಸದೆ, ಆಡಳಿತ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಂಡು ಕರ್ನಾಟಕವನ್ನು ‘AI-Native’ (ಕೃತಕ ಬುದ್ಧಿಮತ್ತೆ ಆಧಾರಿತ) ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.

ಶಿಕ್ಷಣ: ಶಿಕ್ಷಕರಿಗೆ ಹೆಚ್ಚು ಪರಿಣಾಮಕಾರಿಯಾಗಿ ಬೋಧಿಸಲು AI ಆಧಾರಿತ ಸಹಾಯಕ ಪರಿಕರಗಳ ಬಳಕೆ.

ಆರೋಗ್ಯ ರಕ್ಷಣೆ: ಕಾಯಿಲೆಗಳ ಆರಂಭಿಕ ಪತ್ತೆ ಮತ್ತು ಸುಧಾರಿತ ವೈದ್ಯಕೀಯ ಚಿಕಿತ್ಸಾ ಬೆಂಬಲ.

ಕೃಷಿ: ರೈತರಿಗೆ ನೈಜ ಸಮಯದ (Real-time) ನಿಖರ ಕೃಷಿ ಸಲಹೆಗಳನ್ನು ನೀಡುವುದು.
ಸಾರ್ವಜನಿಕ ಸೇವೆಗಳು: ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಅತ್ಯಂತ ವೇಗವಾಗಿ ಮತ್ತು ಗೌರವಯುತವಾಗಿ ತಲುಪಿಸುವುದು.

ಸಣ್ಣ ಉದ್ಯಮಗಳು: ಸ್ಥಳೀಯ ಸಣ್ಣ ಉದ್ಯಮಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಂI ತಂತ್ರಜ್ಞಾನದ ನೆರವು ನೀಡುವುದು.

ಗೂಗಲ್ ಸಂಸ್ಥೆಯೊಂದಿಗೆ ಪಾಲುದಾರಿಕೆಗೆ ಕರೆ:
ಕಳೆದ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಗೂಗಲ್ ಸಂಸ್ಥೆಯ ಕೊಡುಗೆಯನ್ನು ಶ್ಲಾಘಿಸಿದ ಡಿ.ಕೆ. ಶಿವಕುಮಾರ್ ಅವರು, ಮುಖ್ಯವಾಗಿ 5 ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಗೂಗಲ್ ಸಂಸ್ಥೆಗೆ ಆಹ್ವಾನ ನೀಡಿದರು.

ಸ್ಥಳೀಯ ಪರಿಹಾರಗಳು: ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಣ್ಣ ಉದ್ಯಮಗಳಿಗೆ ಸೂಕ್ತವಾದ ಎಐ ಪರಿಕರಗಳನ್ನು ಜಂಟಿಯಾಗಿ ಅಭಿವೃದ್ಧಿಪಡಿಸುವುದು.
ಸ್ಟಾರ್ಟ್‍ಅಪ್‍ಗಳಿಗೆ ಬೆಂಬಲ: ಭಾರತದ ಸ್ಥಳೀಯ ಸವಾಲುಗಳಿಗೆ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವ ಸ್ಟಾರ್ಟ್‍ಅಪ್‍ಗಳಿಗೆ ಉತ್ತೇಜನ ನೀಡುವುದು.
ವಿದ್ಯಾರ್ಥಿಗಳಿಗೆ ಕಲಿಕಾ ಅವಕಾಶ: ಕರ್ನಾಟಕದಾದ್ಯಂತ ವಿದ್ಯಾರ್ಥಿಗಳಿಗೆ ಂI ತರಬೇತಿ ಮತ್ತು ಕಲಿಕಾ ಅವಕಾಶಗಳನ್ನು ವಿಸ್ತರಿಸುವುದು.

ಜವಾಬ್ದಾರಿಯುತ ಎಐ ಪ್ರಯೋಗಾಲಯ: ಕರ್ನಾಟಕವನ್ನು ಜಾಗತಿಕ ಮಟ್ಟದ ಸುರಕ್ಷಿತ, ನಂಬಿಕಸ್ಥ ಮತ್ತು ಜವಾಬ್ದಾರಿಯುತ ತಂತ್ರಜ್ಞಾನದ ಪ್ರಯೋಗಾಲಯವನ್ನಾಗಿ ರೂಪಿಸುವುದು.

ದೀರ್ಘಕಾಲೀನ ಹೂಡಿಕೆ: ಕರ್ನಾಟಕದ ತಂತ್ರಜ್ಞಾನ ಪರಿಸರ ವ್ಯವಸ್ಥೆ ಹಾಗೂ ಮೂಲಸೌಕರ್ಯದಲ್ಲಿ ಗೂಗಲ್‍ನ ದೀರ್ಘಕಾಲೀನ ಪಾಲುದಾರಿಕೆಯನ್ನು ಬಲಪಡಿಸುವುದು.

ತಂತ್ರಜ್ಞಾನ ಮತ್ತು ಹೂಡಿಕೆ ದೃಷ್ಟಿಕೋನ:
ಭಾರತದ ಒಟ್ಟು ಸಾಫ್ಟ್‍ವೇರ್ ರಫ್ತಿನಲ್ಲಿ ಕರ್ನಾಟಕವು ಸುಮಾರು ಶೇಕಡ 40 ರಷ್ಟು ಕೊಡುಗೆ ನೀಡುತ್ತಿದ್ದು, ಬೆಂಗಳೂರು 17,000 ಕ್ಕೂ ಹೆಚ್ಚು ಸ್ಟಾರ್ಟ್‍ಅಪ್‍ಗಳಿಗೆ ಹಾಗೂ ಸಾವಿರಾರು ಜಾಗತಿಕ ಸಾಮಥ್ರ್ಯ ಕೇಂದ್ರಗಳಿಗೆ (GCCs)  ನೆಲೆಯಾಗಿದೆ.
ಸುಧಾರಿತ ಕಂಪ್ಯೂಟಿಂಗ್, ಡೇಟಾ ಸೆಂಟರ್‍ಗಳು ಮತ್ತು ಸಂಶೋಧನೆಗೆ ಅಗತ್ಯವಿರುವ ಡಿಜಿಟಲ್ ಮೂಲಸೌಕರ್ಯಗಳನ್ನು ಸರ್ಕಾರ ಇನ್ನಷ್ಟು ಬಲಪಡಿಸಲಿದೆ.

ಡೆವಲಪರ್‍ಗಳು ಧೈರ್ಯವಾಗಿ ಹೊಸದನ್ನು ನಿರ್ಮಿಸಲಿ, ಉದ್ಯಮಿಗಳು ದೊಡ್ಡ ಕನಸು ಕಾಣಲಿ, ಸಂಶೋಧಕರು ಆವಿμÁ್ಕರವನ್ನು ಮುಂದುವರಿಸಲಿ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುತ್ತಿರಲಿ. ಕೃತಕ ಬುದ್ಧಿಮತ್ತೆಯು ನಾವೀನ್ಯತೆ, ಒಳಗೊಳ್ಳುವಿಕೆ ಮತ್ತು ವಿಶ್ವಾಸಾರ್ಹತೆಯಿಂದ ಕೂಡಿರುವುದನ್ನು ಕರ್ನಾಟಕ ಸರ್ಕಾರ ಖಚಿತಪಡಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Hot this week

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’...

ಗೋವಾದ ಸನಾತನ ಆಶ್ರಮಕ್ಕೆ ಜಗದ್ಗುರುಗಳ ಆಗಮನ; ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಭೇಟಿ !

ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಕೀಲಿಕೈ – ಜಗದ್ಗುರು ಶ್ರೀ...

ರಾಷ್ಟ್ರೀಯ ಲೋಕ್ ಅದಾಲತ್ ಒಂದೇ ದಿನದಲ್ಲಿ ಬರೋಬ್ಬರಿ 78.79 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ

ಬೆಂಗಳೂರು: "ಸರ್ವರಿಗೂ ನ್ಯಾಯ" ಎಂಬ ಧ್ಯೇಯೋದ್ದೇಶದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಜಲ ಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಜುಲೈ 16...

ಮಹಿಳೆಯರ ಸುರಕ್ಷತೆಗೆ ಆದ್ಯತೆ ರಾಜ್ಯಾದ್ಯಂತ ‘POSH’ ಕಾಯ್ದೆ ಕಟ್ಟುನಿಟ್ಟಿನ ಜಾರಿಗೆ ಮಹಿಳಾ ಆಯೋಗದ ಮಹತ್ವದ ಹೆಜ್ಜೆ

ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ...

Topics

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’...

ಗೋವಾದ ಸನಾತನ ಆಶ್ರಮಕ್ಕೆ ಜಗದ್ಗುರುಗಳ ಆಗಮನ; ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಭೇಟಿ !

ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಕೀಲಿಕೈ – ಜಗದ್ಗುರು ಶ್ರೀ...

ರಾಷ್ಟ್ರೀಯ ಲೋಕ್ ಅದಾಲತ್ ಒಂದೇ ದಿನದಲ್ಲಿ ಬರೋಬ್ಬರಿ 78.79 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ

ಬೆಂಗಳೂರು: "ಸರ್ವರಿಗೂ ನ್ಯಾಯ" ಎಂಬ ಧ್ಯೇಯೋದ್ದೇಶದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಜಲ ಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಜುಲೈ 16...

ಮಹಿಳೆಯರ ಸುರಕ್ಷತೆಗೆ ಆದ್ಯತೆ ರಾಜ್ಯಾದ್ಯಂತ ‘POSH’ ಕಾಯ್ದೆ ಕಟ್ಟುನಿಟ್ಟಿನ ಜಾರಿಗೆ ಮಹಿಳಾ ಆಯೋಗದ ಮಹತ್ವದ ಹೆಜ್ಜೆ

ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ...

ಯುವ ಸಬಲೀಕರಣಕ್ಕೆ ಹೊಸ ಕ್ರಾಂತಿ ರಾಜ್ಯದಲ್ಲಿ 10,000 “ಭಾರತ್ ಜೋಡೋ ಯುವ ಸಂಘ”ಗಳ ಸ್ಥಾಪನೆಗೆ ಸರ್ಕಾರದಿಂದ ಆದೇಶ

ಬೆಂಗಳೂರು : ಕರ್ನಾಟಕದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ...

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ: ಬಿ.ಎಡ್. ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ...

Related Articles