2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2024ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01.01.2024 ರಿಂದ 31.12.2024ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000/- ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ಕ್ಷೇತ್ರದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ 2025ರ ಜುಲೈ 10ರ ಒಳಗಾಗಿ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ದೂರವಾಣಿ ಸಂಖ್ಯೆ-080-22113146 ಮೂಲಕ ಪಡೆಯಬಹುದು ಹಾಗೂ ಅರ್ಜಿಗಳನ್ನು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles