ಕಿರು ಹೊತ್ತಿಗೆಗಳ ಬರವಣಿಗೆಗೆ ಆಹ್ವಾನ – ಲೇಖಕರಿಗೆ ವಿಶಿಷ್ಟ ಅವಕಾಶ

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ತನ್ನ ಪ್ರಸ್ತುತ ಸಾಲಿನ ಯೋಜನೆಯಲ್ಲಿ ಬಂಜಾರ ಸಮುದಾಯದ ಕಲೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯ ವಿವಿಧ ಆಯಾಮಗಳನ್ನು ದಾಖಲಿಸಲು ಉದ್ದೇಶಿಸಿರುವ ಮಹತ್ವದ ಯೋಜನೆಯ ಭಾಗವಾಗಿ, ಕನಿಷ್ಠ 25 ಪುಟಗಳ 100 ವಿಭಿನ್ನ ವಿಷಯಗಳಿಗೆ ಸಂಬಂಧಿಸಿದಂತೆ ಕೃತಿಗಳನ್ನು ಪ್ರಕಟಣೆ ಮಾಡಲು ಬಂಜಾರ ಅಕಾಡೆಮಿ ನಿರ್ಧರಿಸಿದೆ.

ಆರಂಭಿಕ ಹಂತದಲ್ಲಿ,  ಆಯ್ಕೆ ಸಮಿತಿಯ ಶಿಫಾರಸ್ಸು ಮೇರೆಗೆ 50 ಕಿರು ಹೊತ್ತಿಗೆಗಳ ರಚನೆಗಾಗಿ ಲೇಖಕರನ್ನು ಆಯ್ಕೆ ಮಾಡಲಾಗುವುದು.

ಈ ಯೋಜನೆಯ ಅಡಿಯಲ್ಲಿ ಲೇಖಕರು ತಮ್ಮ ಕೃತಿಗಳನ್ನು ಈ ಕೆಳಗಿನ ಪ್ರಮುಖ ವಿಷಯಗಳಲ್ಲಿ ರಚಿಸಬಹುದು:

  • ಬಂಜಾರ ಕಲಾ ಪರಂಪರೆ.
  • ಬಂಜಾರ ಭಾಷೆ ಮತ್ತು ಸಾಹಿತ್ಯ ಮೌಖಿಕ ಸಾಹಿತ್ಯ.
  • ಬಂಜಾರ ಜನಜೀವನ ಮತ್ತು ಸಂಪ್ರದಾಯಗಳು, ಆಚರಣೆಗಳು, ಹಬ್ಬಗಳು ಇತರೆ.
  • ಬಂಜಾರ ಸಮುದಾಯದ ಹಿರಿಯ ಸಾಧಕರು, ಸಾಹಿತಿಗಳು, ಕಲಾವಿದರು ಹಾಗೂ ತಜ್ಞರು, ರಾಷ್ಟ್ರ-ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತರು.
  • ಬಂಜಾರ ಹೋರಾಟಗಾರರು ಮತ್ತು ಪ್ರಮುಖ ಸಾಮಾಜಿಕ, ಸಾಂಸ್ಕೃತಿಕ ಪ್ರಮುಖ ಮುಖಂಡರು.
  • ಬಂಜಾರ ಪ್ರಮುಖ ಶ್ರದ್ಧಾ ಕೇಂದ್ರಗಳು.
  • ಬಂಜಾರ ಐತಿಹಾಸಿಕ ತಾಣಗಳು.
  • ಬಂಜಾರ ಸಮಾಜಶಾಸ್ತ್ರ,
  • ಬಂಜಾರ ಶಿಕ್ಷಣ.
  • ಬಂಜಾರ ನೃತ್ಯ,
  • ಬಂಜಾರ ಸಂಗೀತ,
  • ಬಂಜಾರ ನಾಟಕಗಳು ಹಾಗೂ ಪ್ರಯೋಗಗಳು ಮೊದಲಾದ ಕ್ಷೇತ್ರಗಳು.

ಈ ಅಕಾಡೆಮಿಯ ಮಹತ್ವದ ಕೆಲಸದಲ್ಲಿ ಲೇಖಕರು ಕೈಜೋಡಿಸಿ ಭಾಗವಹಿಸಲು ಕೋರುತ್ತೇನೆ. ಆಸಕ್ತ ಬಂಜಾರ ಹಾಗೂ ಇತರೆ ಲೇಖಕರು ತಮ್ಮ ಕೃತಿಗಳ ಶೀರ್ಷಿಕೆಗಳ, ಸಾರಾಲೇಖ ಹಾಗೂ ಸ್ವವಿವರಗಳನ್ನು ದಿನಾಂಕ:19.07.2025 ರ ಒಳಗಾಗಿ ಬಂಜಾರ  ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕಚೇರಿಗೆ ನೊಂದಾಯಿಸಿಕೊಳ್ಳಲು ಅಥವಾ ಕಚೇರಿಗೆ ಖುದ್ದಾಗಿ ಅರ್ಚಿ ಸಲ್ಲಿಸಲು ಅಥವಾ ಅಂಚೆ, ಕೋರಿಯರ್‌ ಮೂಲಕ ಸ್ವವಿವರದೊಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಕೋರಿದೆ. ಯುವ ಬಂಜಾರ ಸಂಶೋಧಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಲೇಖಕರಿಗೆ ನಿಯಮಾನುಸಾರ ಗೌರವ ಸಂಭಾವನೆ ಪಾವತಿಸಲಾಗುವುದು.

ವಿಳಾಸ: ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ , 1 ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002

ಹೆಚ್ಚಿನ ಮಾಹಿತಿಗಾಗಿ   :  080-29917745

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles