ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತುಮಕೂರು(ಕ.ವಾ.)ಜೂ.9: ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಸಹಾಯಧನ ಸೌಲಭ್ಯ ಕಲ್ಪಿಸಲು ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೈತರಿಗೆ ಅಡಿಕೆ ಸುಲಿಯುವ ಯಂತ್ರ, ದೋಟಿ, ಬ್ರಷ್ಕಟರ್, ಟಿಲ್ಲರ್, ಪವರ್ ವೀಡರ್, ಸ್ಪೆçöÊಯರ್, ರೋಟೋವೇಟರ್, ಡಿಗ್ಗರ್ ಹಾಗೂ ಇತರೆ ಯಂತ್ರಗಳನ್ನು ಖರೀದಿಸಲು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ/ಅತೀ ಸಣ್ಣ ಹಾಗೂ ಮಹಿಳಾ ರೈತರಿಗೆ ಶೇ.50ರಷ್ಟು ಹಾಗೂ ಸಾಮಾನ್ಯ, ಇತರೆ ವರ್ಗದ ರೈತರಿಗೆ ಶೇ. 40ರಷ್ಟು(ಗರಿಷ್ಠ 1.25 ಲಕ್ಷ ಅಥವಾ 5 ಯಂತ್ರೋಪಕರಣ ಮಾತ್ರ) ಸಹಾಯಧನ ನೀಡಲಾಗುವುದು.

ಆಸಕ್ತ ರೈತರು ಹಾಗೂ ಉದ್ದಿಮೆದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡ ರೈತರಿಗೆ) ಜಂಟಿ ಖಾತೆಯಿದ್ದರೆ ಒಪ್ಪಿಗೆ ಪತ್ರ, ಖಾತೆದಾರರ ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ, ಮತ್ತಿತರೆ ದಾಖಲೆಗಳನ್ನು ಲಗತ್ತಿಸಿ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ ಅಥವಾ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಸರ್ಕಾರದಿಂದ ನೀಡಲಾಗುವ ಗುರಿ ಮತ್ತು ಅನುದಾನದ ಆಧಾರದ ಮೇಲೆ ಪಾರದರ್ಶಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ತುಮಕೂರು-9686503500, ಗುಬ್ಬಿ-9535781963, ಸಿರಾ-9844042356, ಕುಣಿಗಲ್-9606570210, ತಿಪಟೂರು- 9845014293, ಚಿಕ್ಕನಾಯಕನಹಳ್ಳಿ-9686056705, ಮಧುಗಿರಿ-9916378199, ತುರುವೇಕೆರೆ-9448416334, ಕೊರಟಗೆರೆ-9448001644 ಹಾಗೂ ಪಾವಗಡ-9448448970ಯನ್ನು ಸಂಪರ್ಕಿಸಬಹುದೆAದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

Topics

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

Related Articles