ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸೀಮೆನ್ಸ್ ಮತ್ತು ಇಟಾಲ್ಸರ್ಟಿಫರ್‌ನಿಂದ ISA ಸೆರ್ಟಿಫಿಕೇಟ್

ಬೆಂಗಳೂರು: ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ (Yellow Line) ಇದೀಗ ಸ್ವತಂತ್ರ ಸುರಕ್ಷತಾ ಮೌಲ್ಯಮಾಪನ (ISA) ಪ್ರಮಾಣೀಕರಣ ಪಡೆದಿದ್ದು, ಮಾರ್ಗವನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ತೆರೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಈ ISA ಪ್ರಮಾಣಪತ್ರವನ್ನು ಇಟಲಿಯ ಸರ್ಕಾರಿ ಸ್ವಾಮ್ಯದ ಇಟಾಲ್ಸರ್ಟಿಫರ್ ಕಂಪನಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಗೆ ಸಲ್ಲಿಸಿದೆ. ಹಳದಿ ಮಾರ್ಗದ ಸಿಗ್ನಲಿಂಗ್ ಗುತ್ತಿಗೆದಾರ ಸೀಮೆನ್ಸ್ ಇಂಡಿಯಾ ಲಿಮಿಟೆಡ್–ಸೀಮೆನ್ಸ್ ಎಜಿ ಸಹಯೋಗದೊಂದಿಗೆ ಈ ಪ್ರಮಾಣೀಕರಣ ಕಾರ್ಯ ಪೂರ್ಣಗೊಂಡಿದೆ.

ಹಳೆಯ ತಾಂತ್ರಿಕ ದೋಷಗಳಿಂದಾಗಿ ಈ ಪ್ರಮಾಣೀಕರಣ ವಿಳಂಬವಾಗಿದ್ದರೂ, ಇದೀಗ ತಂತ್ರಾಂಶ ನವೀಕರಣದೊಂದಿಗೆ ಎಲ್ಲಾ ತೊಂದರೆಗಳನ್ನು ಸರಿಪಡಿಸಲಾಗಿದೆ. ISA ಪ್ರಮಾಣಪತ್ರದ ನಂತರ, ವರದಿಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಗೆ (CMRS) ಸಲ್ಲಿಸಲಾಗುವುದು ಎಂದು BMRCL ಪಿಆರ್ ಅಧಿಕಾರಿ ಯಶವಂತ್ ಚವಾಣ್ ತಿಳಿಸಿದ್ದಾರೆ.

BMRCL ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರು ಈ ಮೊದಲು ಹೇಳಿದಂತೆ, ಆಗಸ್ಟ್ 15ರೊಳಗೆ ಹಳದಿ ಮಾರ್ಗ ಆರಂಭವಾಗುವ ನಿರೀಕ್ಷೆ ಇದೆ.

ಹಳದಿ ಮಾರ್ಗದ ವಿವರಗಳು:
RV ರಸ್ತೆ – ಬೊಮ್ಮಸಂದ್ರ ನಡುವಿನ ಈ 18.8 ಕಿ.ಮೀ ಉದ್ದದ ಹಳದಿ ಮಾರ್ಗದಲ್ಲಿ 16 ನಿಲ್ದಾಣಗಳು ಇರುವುದರ ಜೊತೆಗೆ, ಗ್ರೀನ್‌ಲೈನ್ ಜತೆ ಸಂಪರ್ಕ ಹೊಂದಿರುವುದರಿಂದ ದಕ್ಷಿಣ ಬೆಂಗಳೂರು ಪ್ರದೇಶದ ನಾಗರಿಕರಿಗೆ ನಗರದ ಕೇಂದ್ರ ಭಾಗಗಳಿಗೆ ಸುಲಭ ಪ್ರವೇಶ ಲಭ್ಯವಾಗಲಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles