ದೇಶದ ಪ್ರಮುಖ ಸ್ಟಾರ್ಟಪ್ ಕೇಂದ್ರವಾಗಿ ಹೊರಹೊಮ್ಮಿದ ಕರ್ನಾಟಕ – ಸಚಿವ  ಎನ್.ಚಲುವರಾಯಸ್ವಾಮಿ

BENGALURU : ಕರ್ನಾಟಕ (Karnataka) ರಾಜ್ಯವು ಇಂದು ದೇಶದ ಪ್ರಮುಖ ಸ್ಟಾರ್ಟಪ್ (Indias Main Startup Centre) ಕೇಂದ್ರವಾಗಿ ಹೊರಹೊಮ್ಮಿದ್ದು, ರಾಜ್ಯದಲ್ಲಿ ಈಗಾಗಲೇ 7ರಿಂದ 8 ಸಾವಿರಕ್ಕೂ ಅಧಿಕ ಸ್ಟಾರ್ಟಪ್‍ಗಳು ಸ್ಥಾಪನೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ (N.Cheluvarayaswamy) ಅವರು ತಿಳಿಸಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆಯಲ್ಲಿ ಆಯೋಜಿಸಿದ್ದ  “ಅಗ್ರಿ ಸ್ವಾರ್ಟ್‍ಅಪ್ ಕಾನ್ಕ್ಲೇವ್ 2.0 ನಾವೀನ್ಯತೆ, ಸುಸ್ಥಿರತೆ ಮತ್ತು ವಿಸ್ತರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Karnataka as a leading startup hub in the country
ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಸಂಶೋಧನೆ ಹಾಗೂ ನವೀನ ಆವಿμÁ್ಕರಗಳ ಸಂಯೋಜನೆಯಿಂದ ರೈತರ ಜೀವನಮಟ್ಟವನ್ನು ಸುಧಾರಿಸಲು ಅಪಾರ ಅವಕಾಶಗಳಿವೆ. ಕೃಷಿ ವಿಶ್ವವಿದ್ಯಾನಿಲಯಗಳ ಸಂಶೋಧನೆಗಳು ಕೇವಲ ಪ್ರಯೋಗಾಲಯಗಳಲ್ಲೇ ಸೀಮಿತವಾಗದೆ, ಅವು ಸ್ಟಾರ್ಟಪ್‍ಗಳ ಮೂಲಕ ರೈತರ ಹೊಲಗಳಿಗೆ ತಲುಪಬೇಕು ಎಂದರು.

ವಿಶ್ವವಿದ್ಯಾನಿಲಯಗಳ ಸಂಶೋಧನಾ ಫಲಿತಾಂಶಗಳನ್ನು ಆಧರಿಸಿ ಯುವಕರು ಅಗ್ರಿ ಸ್ಟಾರ್ಟಪ್‍ಗಳನ್ನು ಆರಂಭಿಸಿದರೆ, ಕೃಷಿಯಲ್ಲಿ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್ ಹಾಗೂ ಮಾರುಕಟ್ಟೆ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿ ಸಾಧ್ಯವಾಗುತ್ತದೆ. ಇದರ ಮೂಲಕ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮೌಲ್ಯ ದೊರೆಯುವುದರ ಜೊತೆಗೆ ರೈತರ ಆದಾಯವೂ ಹೆಚ್ಚಾಗಲಿದೆ ಎಂದು ತಿಳಿಸಿದರು.

ಇಂದಿನ ಯುವಕರು ಉದ್ಯೋಗ ಅರಸುವವರಾಗಿರದೆ, ಉದ್ಯೋಗ ನೀಡುವವರಾಗಬೇಕು. ಕೃಷಿ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಸ್ಟಾರ್ಟಪ್‍ಗಳನ್ನು ಸ್ಥಾಪಿಸುವ ಮೂಲಕ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳ ಯುವಕರು ತಂತ್ರಜ್ಞಾನ ಆಧಾರಿತ ಕೃಷಿ ಉದ್ಯಮಗಳಲ್ಲಿ ತೊಡಗಿಸಿಕೊಂಡರೆ ಗ್ರಾಮೀಣ ಆರ್ಥಿಕತೆ ಮತ್ತಷ್ಟು ಬಲವಾಗಲಿದೆ. ರಾಜ್ಯ ಸರ್ಕಾರವು ಕೃಷಿ ಕ್ಷೇತ್ರದಲ್ಲಿ ಉತ್ತೇಜನ ನೀಡಲು ವಿಶೇಷ ಯೋಜನೆಗಳು, ಇಂಕ್ಯೂಬೇಷನ್ ಕೇಂದ್ರಗಳು, ಆರ್ಥಿಕ ನೆರವು ಹಾಗೂ ತಾಂತ್ರಿಕ ಮಾರ್ಗದರ್ಶನವನ್ನು ಒದಗಿಸುತ್ತಿದೆ. ಕೃಷಿ ವಿಶ್ವವಿದ್ಯಾನಿಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಖಾಸಗಿ ವಲಯಗಳು ಒಟ್ಟಾಗಿ ಕಾರ್ಯನಿರ್ವಹಿಸಿದರೆ ಕರ್ನಾಟಕವನ್ನು ದೇಶದ ಅಗ್ರ ಅಗ್ರಿ-ಇನ್ನೋವೇಷನ್ ರಾಜ್ಯವನ್ನಾಗಿ ರೂಪಿಸಬಹುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ  ಡಿಬಿಟಿ, ಬೈರಾಕ್ ವ್ಯವಸ್ಥಾಪಕ ನಿರ್ದೇಶಕರಾದ ಡಾ: ಜಿತೇಂದ್ರಕುಮಾರ್ ಮಾತನಾಡಿ, ಆನ್‍ಲೈನ್ ಮೂಲಕ ಭಾಗವಹಿಸಿ ಕೃಷಿಕ್ಷೇತ್ರದಲ್ಲಿ ನವೀನ ತಂತ್ರಜ್ಞಾನಗಳ ಬಳಕೆ ಭವಿಷ್ಯದ ಕೃಷಿಯನ್ನು ರೂಪಿಸಲಿದೆ ಎಂದು ತಿಳಿಸಿದರು. ಹವಾಮಾನ ಬದಲಾವಣೆ, ನೀರಿನ ಕೊರತೆ ಹಾಗೂ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಗ್ರಿ ಸ್ಟಾರ್ಟಪ್‍ಗಳು ರೈತರಿಗೆ ಹೊಸ ಪರಿಹಾರಗಳನ್ನು ನೀಡುತ್ತಿವೆ ಎಂದು ಅಭಿಪ್ರಾಯಪಟ್ಟರು.

ಕೃಷಿ ಪದವೀಧರರು ಮತ್ತು ಯುವ ಸಂಶೋಧಕರು ಕೃಷಿಯನ್ನು ಕೈಗಾರಿಕಾ ದೃಷ್ಟಿಕೋನದಿಂದ ನೋಡಬೇಕು. ಕೃಷಿ ಉತ್ಪನ್ನಗಳ ನೇರ ಮಾರುಕಟ್ಟೆ, ಕೃಷಿ ಪ್ರವಾಸೋದ್ಯಮ, ಸಾವಯವ ಉತ್ಪನ್ನಗಳ ಬ್ರ್ಯಾಂಡಿಂಗ್ ಹಾಗೂ ರಫ್ತು ಅವಕಾಶಗಳನ್ನು ಬಳಸಿಕೊಂಡು ಗ್ರಾಮೀಣ ಭಾಗದಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಬಹುದುಎಂದರು ತಿಳಿಸಿದರು.

ಕೃಷಿ ಇಲಾಖೆಯ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಡಾ: ಕೆ.ರಾಜೇಂದ್ರ ಮಾತನಾಡಿ, ಅಗ್ರಿ ಸ್ಟಾರ್ಟಪ್‍ಗಳು ಕೇವಲ ಉದ್ಯಮವಲ್ಲ, ರೈತರ ಬದುಕಿನಲ್ಲಿ ಬದಲಾವಣೆ ತರಬಲ್ಲ ಶಕ್ತಿಯಾಗಿದೆ. ತಂತ್ರಜ್ಞಾನ ಮತ್ತು ಕೃಷಿಯ ಸಂಯೋಜನೆಯಿಂದ ರೈತರ ಆದಾಯ ಹೆಚ್ಚುವುದರ ಜೊತೆಗೆ ಗ್ರಾಮೀಣ ಯುವಕರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿಗಳಾದ ಡಾ.ಎಸ್.ವಿ. ಸುರೇಶ,  ಅಗ್ರಿ ಸ್ಟಾರ್ಟಪ್‍ಗಳು ರೈತರಿಗೆ ಹೊಸ ತಂತ್ರಜ್ಞಾನ, ಹವಾಮಾನ ಆಧಾರಿತ ಕೃಷಿ ಸಲಹೆ, ಡಿಜಿಟಲ್ ಮಾರುಕಟ್ಟೆ, ನಿಖರ ಕೃಷಿ, ಡ್ರೋನ್ ತಂತ್ರಜ್ಞಾನ, ಸಾವಯವ ಕೃಷಿ ಹಾಗೂ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಸುಲಭಗೊಳಿಸುತ್ತಿವೆ. ಇದರಿಂದ ಕೃಷಿ ವೆಚ್ಚ ಕಡಿಮೆಯಾಗುವುದರ ಜೊತೆಗೆ ಉತ್ಪಾದಕತೆ ಮತ್ತು ಲಾಭದಾಯಕತೆ ಹೆಚ್ಚಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

“ನವೀನತೆ, ಸುಸ್ಥಿರತೆ ಮತ್ತು ವಿಸ್ತರಣೆ” ಎಂಬ ಧ್ಯೇಯದೊಂದಿಗೆ ಆಯೋಜಿಸಲಾದ ಈ ಅಗ್ರಿ ಸ್ಟಾರ್ಟಪ್ ಕಾನ್‍ಕ್ಲೇವ್ 2.0 ಕಾರ್ಯಕ್ರಮವು ಯುವಕರು, ರೈತರು, ಸಂಶೋಧಕರು ಹಾಗೂ ಉದ್ಯಮಿಗಳ ನಡುವೆ ಹೊಸ ಚಿಂತನೆ ಮತ್ತು ಸಹಕಾರಕ್ಕೆ ವೇದಿಕೆಯಾಗಿದ್ದು, ಕೃಷಿ ಕ್ಷೇತ್ರದ ಭವಿಷ್ಯರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಹೆಚ್ಚು ಮಳಿಗೆಗಳನ್ನು ಪ್ರದರ್ಶಿಸಲಾಯಿತು. ಅಗ್ರಿ ಸ್ಟಾರ್ಟ್‍ಅಪ್‍ಗಳು, ಉದ್ಯಮಿಗಳು, ಸಂಶೋಧಕರು, ಹೂಡಿಕೆದಾರರು, ವಿದ್ಯಾರ್ಥಿಗಳು, ಕೈಗಾರಿಕೆಗಳು ಹಾಗೂ ರೈತ ಉತ್ಪಾದಕರ ಸಂಘಟನೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲಾಯಿತು.

ಭಾರತೀಯ ಕೃಷಿಯ ಭವಿಷ್ಯವನ್ನು ರೂಪಿಸುತ್ತಿರುವ ಹೊಸ ನವೋದ್ಯಮಗಳು, ವ್ಯವಹಾರ ಅವಕಾಶಗಳು ಹಾಗೂ ನವೀನ ತಂತ್ರಜ್ಞಾನಗಳನ್ನು ಈ ಕಾನ್‍ಕ್ಲೇವ್‍ನಲ್ಲಿ ಪ್ರದರ್ಶಿಸಲಾಯಿತು. ಜೊತೆಗೆ ಭವಿಷ್ಯದಲ್ಲಿ ವಿಸ್ತರಿಸಬಹುದಾದ ಸುಸ್ಥಿರ ಅಗ್ರಿ ಉದ್ಯಮ, ಕಾರ್ಬನ್ ಮಾರುಕಟ್ಟೆ ಅವಕಾಶಗಳು ಮತ್ತು ಜೈವಿಕ ಪರಿಕರಗಳು ನವೀನತೆಗಳ ಕುರಿತು ತಾಂತ್ರಿಕ ಅಧಿವೇಶನಗಳನ್ನು ಆಯೋಜಿಸಲಾಗಿತ್ತು. ನೆಟ್‍ವಕಿರ್ಂಗ್, ಸಹಭಾಗಿತ್ವ, ತಂತ್ರಜ್ಞಾನ ಪ್ರದರ್ಶನ ಹಾಗೂ ಪ್ರಮುಖ ಸ್ಟಾರ್ಟ್‍ಅಪ್‍ಗಳು, ಹೂಡಿಕೆದಾರರು, ಕೈಗಾರಿಕೆಗಳು ಮತ್ತು ಇಕೋಸಿಸ್ಟಮ್ ಭಾಗೀದಾರರೊಂದಿಗೆ ಸಂವಾದ ನಡೆಸಲು ಉತ್ತಮ ಅವಕಾಶವನ್ನು ಒದಗಿಸಲಾಯಿತು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles