ಸಿದ್ದರಾಮಯ್ಯ ರಾಜೀನಾಮೆ ಪತ್ರ ಹಸ್ತಾಂತರ
ಲೋಕಭವನ ಕಾರ್ಯದರ್ಶಿ ಪ್ರಭು ಶಂಕರ್ಗೆ ರಾಜೀನಾಮೆ ಸಲ್ಲಿಕೆ
Bengaluru : ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಕೊಡ್ತೀನಿ ಅಂತ ಸ್ವತಃ ಹೇಳಿದ್ದ0ಟು. ಅದರಂತೆ ಮಧ್ಯಾಹ್ನ 3-00 ಗಂಟೆಗೆ ಆಗಮಿಸಿ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು (Governor) ಇಲ್ಲದ ಕಾರಣ ಲೋಕಭವನಕ್ಕೆ ತೆರಳಿ ಕಾರ್ಯದರ್ಶಿ ಪ್ರಭು ಶಂಕರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ್ರು. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರ ಭವನದಲ್ಲಿ (Lokabhavan) ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ.
ಆದ್ದರಿಂದ ರಾಜೀನಾಮೆ ಪತ್ರವನ್ನ ಅವರ ಕಚೇರಿ, ಅವರ ಕಾರ್ಯದರ್ಶಿಗೆ ಕೊಟ್ಟು ಬಂದಿದ್ದೇನೆ. ಹೈಕಮಾಂಡ್ ಯಾವಾಗ ಹೇಳುತ್ತೆ ಅವಾಗ ರಾಜೀನಾಮೆಯನ್ನು ಕೊಡ್ತೇನೆ ಅಂತ ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ಸೂಚನೆ ನೀಡಿತು ಎಂದಿದ್ದಾರೆ.
ಇದಕ್ಕೂ ಮುನ್ನ ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ರಾಜೀನಾಮೆ ಪತ್ರ ಹಿಡಿದು ಕಾರಿನಲ್ಲಿ ಲೋಕಭವನದತ್ತ(ರಾಜಭವನ) ತೆರಳಿ, ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದಾರೆ.
ಸದ್ಯಕ್ಕೆ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಸಂವಿಧಾನದ ನಿಯಮಾವಳಿಗಳ ಪ್ರಕಾರ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ಇಂದು ರಾತ್ರಿ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ ಎನ್ನಲಾಗಿದ್ದು. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.
ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ತೆರೆ ಎಳೆದಿದ್ದಾರೆ.

