ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯ ಕರ್ನಾಟಕ ರಾಜ್ಯೋತ್ಸವ

BENGALURU : ಡೆಲ್ಲಿ ಪಬ್ಲಿಕ್ ಶಾಲೆ, (Delhi Public School) ಬೆಂಗಳೂರು ಉತ್ತರ (Bengaluru North) ವಲಯದಲ್ಲಿ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯನ್ನು ಕೊಂಡಾಡುವ 70ನೇ ಕರ್ನಾಟಕ ರಾಜ್ಯೋತ್ಸವವನ್ನು (Kannada Rajyothsava) ವಿಶೇಷವಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಖ್ಯಾತ ಗಾಯಕರು ಹಾಗೂ ಕರ್ನಾಟಕ ಸರ್ವೋದಯ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಯ. ಚಿ. ದೊಡ್ಡಯ್ಯನವರು ಧ್ವಜಾರೋಹಣ ನೆರವೇರಿಸಿದರು.
 ವಿಶೇಷ ಆಹ್ವಾನಿತ ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿಯವರು “ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ” ಎಂಬ ಮನಮುಟ್ಟುವ ಗೀತೆಯ ಹಿನ್ನೆಲೆಯೊಂದಿಗೆ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಣವ ಮೀಡಿಯಾ ಹೌಸ್ ಪ್ರಕಾಶನ ಪ್ರಕಟಪಡಿಸಿರುವ ಹೊತ್ತಿಗೆಗಳನ್ನು ಶಾಲಾ ಗ್ರಂಥಾಲಯಕ್ಕೆ ನೀಡಿದರು.
“ಗಣನಾಯಕಾಯ ಗಣದೈವತಾಯ ಗಣಾಧ್ಯಕ್ಷಾಯ ಧೀಮಹಿ” ಎಂಬ ಹಾಡಿಗೆ ಸಂಯೋಜಿತ ನೃತ್ಯದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.
“ನಾ ಕಂಡ ಕರುನಾಡು” ಎಂಬ ಪರಿಕಲ್ಪನೆಯ ಅಡಿಯಲ್ಲಿ ಕನ್ನಡ ನಾಡಿನ ನೈಸರ್ಗಿಕ ಸೌಂದರ್ಯವನ್ನು ಚಿತ್ರಿಸುವ ನೃತ್ಯ, ಗುರು–ಶಿಷ್ಯರ ನಡುವಿನ ಬಾಂಧವ್ಯವನ್ನು ತೋರಿಸುವ ನಾಟಕ, “ವಿವಿಧತೆಯಲ್ಲಿ ಏಕತೆ” ಎಂಬ ಕಿರು ನೃತ್ಯ ನಾಟಕ ಹಾಗೂ “ರೆಟ್ರೋ ಟು ಮೆಟ್ರೋ” ಎಂಬ ಶೀರ್ಷಿಕೆಯಡಿಯಲ್ಲಿ ಸಿನಿ ಲೋಕದಲ್ಲಿ ನಡೆದ ಬದಲಾವಣೆಗಳನ್ನು ಚಿತ್ರಿಸುವ ವಿಶೇಷ ಪ್ರದರ್ಶನಗಳು ಪ್ರೇಕ್ಷಕರ ಮನ ಗೆದ್ದವು ಅದಲ್ಲದೆ ಪೋಷಕರಿಗಾಗಿ ಆಯೋಜಿಸಿದ್ದ ಆಟ, ಬೊಂಬಾಟ ಮತ್ತು ಫ್ಯಾಷನ್ ಶೋ ಕಾರ್ಯಕ್ರಮಗಳು ಸಂಭ್ರಮವನ್ನು ಹೆಚ್ಚಿಸಿದವು.
 ಪ್ರಸಿದ್ಧ ರಂಗಭೂಮಿ ಕಲಾವಿದರಾದ ಶ್ರೀ ಸೂರ್ಯನಾರಾಯಣ ರವರಿಗೆ ಈ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು.
 ಶಾಲೆಯ ಪ್ರಾಂಶುಪಾಲೆ ಮಂಜು ಬಾಲಸುಬ್ರಮಣ್ಯ ರಾಷ್ಟ್ರಮಟ್ಟದಲ್ಲಿ ಶಾಲೆ ತನ್ನದೇ ಆದ ವೈಶಿಷ್ಟಗಳಿಂದ ಪ್ರಥಮ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಅಧ್ಯಾಪಕರ ಕಾರ್ಯ ತತ್ಪರತೆಯಿಂದ ಮುನ್ನಡೆದಿದೆ ಎಂದು ತಿಳಿಸಿದರು.
 ಕನ್ನಡ ವಿಭಾಗದ ಮುಖ್ಯಸ್ಥೆ ಸುಮತಿ ಸಗರ್ ಮಾತನಾಡಿ ಕನ್ನಡದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಸುವ ಮೂಲಕ ಇಲ್ಲಿನ ಸಂಸ್ಕೃತಿ ಪರಿಚಯ ಮಾಡಿಸಿ ಭಾಷಾಭಿಮಾನ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದೇವೆ ಎಂದು ತಿಳಿಸಿದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles