ಕೆಂಪೇಗೌಡರ ತತ್ವ ಆದರ್ಶ ಪ್ರತಿಯೊಬ್ಬ ರಾಜಕಾರಣಿ ಹಾಗೂ ಸರ್ಕಾರಿ ಅಧಿಕಾರಿ ಪಾಲಿಸಬೇಕು: ಶಾಸಕ ಬಿ ಎನ್ ರವಿಕುಮಾರ್

ಶಿಡ್ಲಘಟ್ಟ : ಇಡೀ ಜಗತ್ತಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ನಮ್ಮ ಬೆಂಗಳೂರು. ಅಂತಹ ನಗರವನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರ ಅವರ ತತ್ವ ಆದರ್ಶಗಳು ಹಲವು ಮಹನೀಯರ ಆದರ್ಶಗಳನ್ನು ಇಂದಿನ ಪ್ರತಿಯೊಬ್ಬ ರಾಜಕಾರಣಿಯು ಹಾಗೂ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಗಳು ಪಾಲಿಸಬೇಕು ಎಂದು ಶಾಸಕ ಬಿ ಎನ್ ರವಿಕುಮಾರ್ ತಿಳಿಸಿದರು.


ತಾಲೂಕಿನ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ಆಡಳಿತ ಕೌಶಲ್ಯ, ಸಾಮಾಜಿಕ ಸಮರಸತೆ ಮತ್ತು ಭವಿಷ್ಯದ ದೃಷ್ಟಿಕೋನದಲ್ಲಿ ಇಡೀ ಜಗತ್ತಿಗೆ ಮಾದರಿಯಾದ ಮಹಾಪುರುಷರು. ಸುಮಾರು 1450 ಕೆರೆಗಳು, 13 ಪೇಟೆಗಳ ವಿನ್ಯಾಸ ರೂಪಿಸಿದ ಅವರು ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡಿದ ಶ್ರೇಷ್ಠ ನಾಯಕ, ಎಂದು ಹೇಳಿದರು.

ತಹಶೀಲ್ದಾರ್ ಗಗನ ಸಿಂಧು ಎನ್ ಮಾತನಾಡಿ, ಬೆಂಗಳೂರಿನ ಆಧುನಿಕ ಅಭಿವೃದ್ಧಿಗೆ ನಾಡಪ್ರಭು ಕೆಂಪೇಗೌಡರ ದೃಷ್ಟಿಕೋನವೇ ಮೂಲಶಕ್ತಿಯಾಗಿತ್ತು. ಇಂದಿನ ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಅನುಸರಿಸುವ ಮೂಲಕ ತಮ್ಮ ಜೀವನವನ್ನು ರೂಪಿಸಬೇಕು ಎಂದು ವಿದ್ಯಾರ್ಥಿಗಳಿಗೆ ಉತ್ಸಾಹಭರಿತ ಸಂದೇಶ ನೀಡಿದರು.

ಕಾರ್ಯಕ್ರಮದ ಭಾಗವಾಗಿ ತಾಲ್ಲೂಕು ಮಟ್ಟದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು, ನಾಡಪ್ರಭು ಕೆಂಪೇಗೌಡರ ಜೀವನ ಮತ್ತು ಸಾಧನೆಯ ಕುರಿತು ಅರಿವು ಮೂಡಿಸುವ ಪುಸ್ತಕಗಳನ್ನು ನೆನಪಿನ ಕಾಣಿಕೆಯ ಮೂಲಕ ವಿತರಿಸಲಾಯಿತು.

ಚಿಂತಾಮಣಿ ರಸ್ತೆಯಲ್ಲಿರುವ ಕೆಂಪೇಗೌಡ ಸಭಾಂಗಣದ ಬಳಿ ಇರುವ ಕೆಂಪೇಗೌಡ ಅವರ ಪುತ್ಥಳಿಗೆ ಪ್ರಮುಖ ರಾಜಕೀಯ ನಾಯಕರು ಮತ್ತು ಮುಖಂಡರು ಮಾಲಾರ್ಪಣೆ ಮಾಡಲಾಯಿತು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಂಪೇಗೌಡರ ರಥೋತ್ಸವಗಳಿಗೆ ಶಾಸಕ ಬಿಎನ್ ರವಿಕುಮಾರ್ ಹಾಗೂ ಕುಲಬಾಂಧವರು ಚಾಲನೆ ನೀಡಿದರು. ತಾಲೂಕಿನ ಹಳ್ಳಿಗಳಿಂದ ಕೆಂಪೇಗೌಡ ಮೆರವಣಿಗೆಯು ಅಲ್ಲಿಂದ ಪ್ರಾರಂಭವಾಗಿ ಕೋಟೆ ವೃತ್ತದ ಮೂಲಕ ರೈಲ್ವೆ ನಿಲ್ದಾಣದ ರಸ್ತೆಯಿಂದ ಉಲ್ಲೂರು ಪೇಟೆಯ ಮೂಲಕ ಚಿಂತಾಮಣಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದವರೆಗೂ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸಿ ಕೆಂಪೇಗೌಡರ ಜಯಂತೋತ್ಸವಕ್ಕೆ ಮತ್ತಷ್ಟು ಮೆರಗು ನೀಡಿದವು.
ಕಾರ್ಯಕ್ರಮದ ಉದ್ದಕ್ಕೂ ಸೂಕ್ತ ಪೊಲೀಸ್ ಬಂದೋಬಸ್ತ್ ನ್ನು ಆರಕ್ಷಕ ವೃತ್ತ ನಿರೀಕ್ಷಕ ಎಂ ಶ್ರೀನಿವಾಸ್ ಒದಗಿಸಿದರು.

ಈ ಸಮಾರಂಭದಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ,
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೇಮಾವತಿ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ ಎನ್ ಸುಬ್ಬಾರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ಎಂ ವಿ ವೆಂಕಟಸ್ವಾಮಿ, ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚರಾಮಚಂದ್ರ ,ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಒಕ್ಕಲಿಗರ ಯುವ ಸೇನೆ ಅಧ್ಯಕ್ಷ ಜೆಎಸ್ ವೆಂಕಟಸ್ವಾಮಿ, ಮುಖಂಡರಾದ ಹುಜುಗೂರು ರಾಮಣ್ಣ, ತಾದೂರು ರಘು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ರೆಡ್ಡಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

ವರದಿ ಚಿಕ್ಕತೇಕಹಳ್ಳಿ ಡಿ ಶಿವಕುಮಾರ್

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles