ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್?

ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಹಿನ್ನೆಲೆಯಲ್ಲಿ ತೀವ್ರ ರಾಜಕೀಯ ಕಸರತ್ತುಗಳು ನಡೆಯುತ್ತಿವೆ. ಬಿಜೆಪಿ ಹೈಕಮಾಂಡ್ ಜುಲೈ ಎರಡನೇ ವಾರದೊಳಗೆ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸಲಿದೆ ಎಂದು ಖಚಿತವಾಗಿದೆ. ಈ ನಡುವೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರ ಬದಲಿಗೆ ಹೊಸ ಮುಖವನ್ನು ಆಯ್ಕೆ ಮಾಡುವ ಚಿಂತನೆಯ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ, ಕಳೆದ ಆರು ತಿಂಗಳಿಂದ ಬಿಜೆಪಿಯ ಒಳಗಿನ ಕೆಲವು ಬಣಗಳು ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲು ತೀವ್ರ ಒತ್ತಡ ಹೇರಿವೆ. ಸೋಮಣ್ಣ ಅವರು ಕೇಂದ್ರ ಸಚಿವ ಸ್ಥಾನದ ಜೊತೆಗೆ ರಾಜ್ಯಾಧ್ಯಕ್ಷರ ಜವಾಬ್ದಾರಿಯನ್ನೂ ಒಪ್ಪಿಕೊಳ್ಳಲು ಸಿದ್ಧರಿದ್ದರು. ಆದರೆ, ಹೈಕಮಾಂಡ್ ಅವರಿಗೆ ಕೇಂದ್ರ ಸಚಿವರಾಗಿ ಗಮನ ಕೊಡುವಂತೆ ಸೂಚಿಸಿದ್ದರಿಂದ ಈ ಚರ್ಚೆ ತಾತ್ಕಾಲಿಕವಾಗಿ ಕೊನೆಗೊಂಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿಯೊಬ್ಬರು, ವಿಜಯೇಂದ್ರ ಅವರ ಬದಲಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಹಿಂದುಳಿದ ವರ್ಗದ ವಿ. ಸುನೀಲ್ ಕುಮಾರ್, ಲಿಂಗಾಯತ-ಪಂಚಮಸಾಲಿ ಕೋಟಾದ ಅರವಿಂದ ಬೆಲ್ಲದ್, ಮತ್ತು ದಲಿತ ಕೋಟಾದ ಅರವಿಂದ ಲಿಂಬಾವಳಿ ಅವರ ಹೆಸರುಗಳನ್ನು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ. ಸುನೀಲ್ ಕುಮಾರ್ ಅವರೊಂದಿಗೆ ಹೈಕಮಾಂಡ್ ಈಗಾಗಲೇ ಚರ್ಚೆ ನಡೆಸಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಸುನೀಲ್ ಕುಮಾರ್ ಅವರು ಈ ಸ್ಥಾನಕ್ಕೆ ಸ್ಪಷ್ಟ ಒಪ್ಪಿಗೆಯನ್ನು ವ್ಯಕ್ತಪಡಿಸಿಲ್ಲ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ಕಳೆದ ಮಂಗಳವಾರದಿಂದ ದೆಹಲಿಯಲ್ಲಿದ್ದಾರೆ. ಈ ಭೇಟಿಯಿಂದ ವಿಪಕ್ಷ ನಾಯಕ ಸ್ಥಾನದ ಬದಲಾವಣೆಯ ಕುತೂಹಲವೂ ಶುರುವಾಗಿದೆ. ಒಂದು ವೇಳೆ ಬದಲಾವಣೆಯಾದರೆ, ಸುನೀಲ್ ಕುಮಾರ್ ಅವರಿಗೆ ಈ ಜವಾಬ್ದಾರಿ ದೊರೆಯಬಹುದು ಎಂಬ ಊಹಾಪೋಹಗಳಿವೆ. ಆದರೆ, ಈ ಭೇಟಿಯ ನಿಜವಾದ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.

ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಆರ್. ಅಶೋಕ್ ಅವರ ದೆಹಲಿ ಭೇಟಿಯ ಬಗ್ಗೆ ಸ್ಪಷ್ಟೀಕರಣ ನೀಡಿ, “ಅಶೋಕ್ ಉತ್ತಮವಾಗಿ ಕೆಲಸ ಮಾಡಿದ್ದಾರೆ. ದೆಹಲಿಗೆ ಬೇರೆ ಕಾರಣಕ್ಕೆ ಹೋಗಿರಬಹುದು,” ಎಂದು ಹೇಳಿದ್ದಾರೆ. ತಮ್ಮ ಸ್ಥಾನದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles