ಕೆಪಿಎಸ್‍ಸಿ(KPSC) ವಿವಿಧ ಗ್ರೂಪ್ ‘ಸಿ'(Group -c) ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು, ಜುಲೈ 04 :ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿನ ಪದವಿ ಪೂರ್ವ ಮಟ್ಟದ ಹೈದ್ರಾಬಾದ್ ಕರ್ನಾಟಕ(Hyderbad-Karnataka) ವೃಂದದ ಗ್ರೂಪ್ ‘ಸಿ'(Group-c) ಹುದ್ದೆಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಕಟ್-ಆಫ್(Cut off) ಅಂಕಗಳನ್ನು ಪ್ರಕಟಿಸಿದೆ.

ದಿನಾಂಕ 15-03-2024 ರ ಅಧಿಸೂಚನೆ ಸಂಖ್ಯೆ: ಇ(2)/2023-24/3495 ರ ಅನ್ವಯ, ವಿವಿಧ ಇಲಾಖೆಯ ಹುದ್ದೆಗಳಿಗೆ 02.07.2026 ರಂದು ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸಿ ಆಯೋಗದ ಅಧಿಕೃತ ವೆಬ್‍ಸೈಟ್(Website) http://kpsc.kar.nic.in/Listsನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಅಂತರ್ಜಲ(Internet) ನಿರ್ದೇಶನಾಲಯದಲ್ಲಿ ಕಿರಿಯ ಇಂಜಿನಿಯರ್ 05 ಹುದ್ದೆಗಳು, ಪೌರಾಡಳಿತ(Municipal Administration) ನಿರ್ದೇಶನಾಲಯ – ಮಹಾನಗರ ಪಾಲಿಕೆಯಲ್ಲಿನ (ನಗರ/ಸ್ಥಳೀಯ ಸಂಸ್ಥೆ ಮತ್ತು BBMP ಹೊರತುಪಡಿಸಿ) ಕಿರಿಯ ಇಂಜಿನಿಯರ್ – CIVIL 07 ಹುದ್ದೆಗಳು, ಕಿರಿಯ ಇಂಜಿನಿಯರ್ (Electrical) 01 ಹುದ್ದೆ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು 11 ಹುದ್ದೆಗಳು, ಪೌರಾಡಳಿತ ನಿರ್ದೇಶನಾಲಯದಲ್ಲಿನ (ನಗರ ಸಭೆ/ಪುರ ಸಭೆ/ಪಟ್ಟಣ ಪಂಚಾಯಿತಿ) ಕಿರಿಯ ಇಂಜಿನಿಯರ್ – ಸಿವಿಲ್ 08 ಹುದ್ದೆಗಳು, ಸಹಾಯಕ ನೀರು ಸರಬರಾಜು ಆಪರೇಟರ್ 05 ಹುದ್ದೆಗಳು, ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು 28 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ 20 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಆಯ್ಕೆಪಟ್ಟಿಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಆಯ್ಕೆಪಟ್ಟಿ ಪ್ರಕಟಗೊಂಡ ದಿನಾಂಕದಿಂದ 07 ದಿನಗಳೊಳಗಾಗಿ ಸಂಬಂಧಿತ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ, ಲಿಖಿತ ರೂಪದಲ್ಲಿ ಆಧಾರ ಸಹಿತವಾಗಿ “ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001” ಇವರಿಗೆ ಸಲ್ಲಿಸಬೇಕು.

ಈ ಹುದ್ದೆಗಳಿಗೆ ಆಯ್ಕೆಯಾಗಲು ಇಚ್ಛಿಸದ ಅಭ್ಯರ್ಥಿಗಳು ತಮ್ಮ ಸ್ವ-ಇಚ್ಛಾ ಹೇಳಿಕೆಯನ್ನು(Voluntary Statement) ಸಹ ಇದೇ 07 ದಿನಗಳ ಅವಧಿಯೊಳಗೆ ಆಯೋಗದ ಕಾರ್ಯದರ್ಶಿಯವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ.

ನಿಗದಿತ ಕಾಲಾವಧಿಯ ನಂತರ ಬರುವ ಯಾವುದೇ ಆಕ್ಷೇಪಣೆಗಳು ಅಥವಾ ಸ್ವ-ಇಚ್ಛಾ ಹೇಳಿಕೆಗಳನ್ನು ಆಯೋಗವು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಜ್ಯೋತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಸರ್ಕಾರಿ ಎಸ್‍ಕೆಎಸ್‍ಜೆಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜುಲೈ 22 ರಂದು ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

ಬೆಂಗಳೂರು, ಜುಲೈ 04 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಸರ್ಕಾರಿ ಶ್ರೀ ಕೃಷ್ಣರಾಜೇಂದ್ರ...

ಟಾಟಾ ಪವರ್ ಅರ್ಜಿ ವಾಪಸು-ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟಕ್ಕೆ ಬಲ

ಕರ್ನಾಟಕದ 19 ಕಂದಾಯ ಜಿಲ್ಲೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣೆಯ ಪರವಾನಗಿ ಕೋರಿ...

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ(Central Election) ಆಯೋಗಕ್ಕೆ ಮನವಿ ಎಸ್‍ಐಆರ್(SIR) ದುರ್ಬಳಕೆಗೆ...

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ ಮಕ್ಕಳ ಮೇಲಿನ ದೈಹಿಕ ಹಿಂಸೆ ಪ್ರಕರಣ – ಆರೋಪಿಗಳ ಬಂಧನ

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ(Day care Centre) ಮಕ್ಕಳ ಮೇಲಿನ ದೈಹಿಕ ಹಿಂಸೆ...

ಅಕ್ರಮ ಗಣಿಗಾರಿಕೆಗೆ ಕಡಿವಾಣ- ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಫ್ರೀಡಂ ಪಾರ್ಕ್‌ನಲ್ಲಿ...

Topics

ಸರ್ಕಾರಿ ಎಸ್‍ಕೆಎಸ್‍ಜೆಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜುಲೈ 22 ರಂದು ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

ಬೆಂಗಳೂರು, ಜುಲೈ 04 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಸರ್ಕಾರಿ ಶ್ರೀ ಕೃಷ್ಣರಾಜೇಂದ್ರ...

ಟಾಟಾ ಪವರ್ ಅರ್ಜಿ ವಾಪಸು-ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟಕ್ಕೆ ಬಲ

ಕರ್ನಾಟಕದ 19 ಕಂದಾಯ ಜಿಲ್ಲೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣೆಯ ಪರವಾನಗಿ ಕೋರಿ...

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ(Central Election) ಆಯೋಗಕ್ಕೆ ಮನವಿ ಎಸ್‍ಐಆರ್(SIR) ದುರ್ಬಳಕೆಗೆ...

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ ಮಕ್ಕಳ ಮೇಲಿನ ದೈಹಿಕ ಹಿಂಸೆ ಪ್ರಕರಣ – ಆರೋಪಿಗಳ ಬಂಧನ

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ(Day care Centre) ಮಕ್ಕಳ ಮೇಲಿನ ದೈಹಿಕ ಹಿಂಸೆ...

ಅಕ್ರಮ ಗಣಿಗಾರಿಕೆಗೆ ಕಡಿವಾಣ- ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಫ್ರೀಡಂ ಪಾರ್ಕ್‌ನಲ್ಲಿ...

ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ...

Related Articles