ಪರಮಾತ್ಮ ಶ್ರೀಕೃಷ್ಣನ ಸಂದೇಶದಂತೆ ಧರ್ಮದ ಮಾರ್ಗದಲ್ಲಿ ನಡೆದು, ಸಮಾಜದ ಒಳಿತಿಗೆ ಶ್ರಮಿಸೋಣ”: ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರ ಕರೆ

ಉಡುಪಿ 25.07.2025: ಪರಮಾತ್ಮ ಶ್ರೀಕೃಷ್ಣನ ಉಪದೇಶಗಳು ಜೀವನದಲ್ಲಿ ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಮಾರ್ಗದರ್ಶಕವಾಗಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಉಡುಪಿ ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠಗಳ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ““ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತಃ, ಅಭ್ಯುತ್ಥಾನಮಧರ್ಮಸ್ಯ ತದಾತ್ಮಾನಂ ಸೃಜಾಮ್ಯಹಮ್” ಈ ಶ್ಲೋಕವು ಶ್ರೀಕೃಷ್ಣನು ಅರ್ಜುನನಿಗೆ ನೀಡಿದ ಉಪದೇಶವಾಗಿದೆ. ಇದರಲ್ಲಿ ಧರ್ಮ ಸ್ಥಾಪನೆ ಮತ್ತು ದುಷ್ಟರ ನಾಶಕ್ಕಾಗಿ ದೇವರ ಅವತಾರವನ್ನು ವಿವರಿಸಲಾಗಿದೆ. ಈ ರೀತಿ ಶ್ರೀ ಕೃಷ್ಣನ ಉಪದೇಶಗಳನ್ನು ಆಳವಾಗಿ ಅರ್ಥಮಾಡಿಕೊಂಡರೆ, ಧರ್ಮ ಕಾಪಾಡುವುದುರ ಜೊತೆಗೆ ಜೀವನದಲ್ಲಿ ಯಶಸ್ಸುಗಳಿಸುವು ಮಾರ್ಗದತ್ತ ಸಾಗಬಹುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಉಡುಪಿಯ ಆಧ್ಯಾತ್ಮಿಕ ಪರಂಪರೆಯ ಸಮಾನಾರ್ಥಕ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಿಂದ ಆಯೋಜಿಸಲಾದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು ಅದೃಷ್ಟವಾಗಿದೆ. ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠವು ಅಷ್ಟಮಠಗಳಲ್ಲಿ ಒಂದು ವೈಭವಯುತ ಮಠವಾಗಿದೆ. ಈ ಮಠವು ದ್ವೈತ ವೇದಾಂತದ ಸಂಪ್ರದಾಯವನ್ನು ಉಳಿಸಿಕೊಂಡು ಬರುತ್ತಿದೆ ಮತ್ತು ಆಧುನಿಕ ಜಗತ್ತಿನಲ್ಲಿಯೂ ಅದನ್ನು ಸ್ಥಾಪಿಸುತ್ತಿದೆ. ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಒಟ್ಟಿಗೆ ಕಾಣುವ ಸ್ಥಳ ಇದು. ಈ ಮಠದ ಮುಖ್ಯಸ್ಥರು ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಅವರು ಜಾಗತಿಕ ವೇದಿಕೆಯಲ್ಲಿ ಮಠದ ಸಂಪ್ರದಾಯಕ್ಕೆ ಪ್ರತಿಷ್ಠೆಯನ್ನು ನೀಡಿದ್ದಾರೆ. ಅವರು ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ವೇದಾಂತ ಮತ್ತು ಸನಾತನ ಧರ್ಮವನ್ನು ಪ್ರಚಾರ ಮಾಡುವ ಮೂಲಕ ಜಗತ್ತನ್ನು ಭಾರತೀಯತೆಯೊಂದಿಗೆ ಸಂಪರ್ಕಿಸಿರುವುದು ಹೆಮ್ಮೆಯ ವಿಚಾರವಾಗಿದೆ” ಎಂದು ಶ್ಲಾಘಿಸಿದರು.

“ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಿಂದ ಆಚರಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಆರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ. ಈ ಸಮಾರಂಭವು ಧಾರ್ಮಿಕ ಆಚರಣೆಯ ಜೊತೆಗೆ ನಮ್ಮ ಸಾಂಸ್ಕೃತಿಕ ಪ್ರಜ್ಞೆ, ಆಧ್ಯಾತ್ಮಿಕ ಸ್ಫೂರ್ತಿ ಮತ್ತು ಸಾಮಾಜಿಕ ಏಕತೆಯ ಪವಿತ್ರ ಹಬ್ಬವಾಗಿದೆ. ಯೋಗೇಶ್ವರನಾಗಿರುವ  ಭಗವಾನ್ ಶ್ರೀ ಕೃಷ್ಣನ ಮಾತುಗಳು ಧರ್ಮವನ್ನು ರಕ್ಷಿಸುವ ಮತ್ತು ಅಧರ್ಮವನ್ನು ತೊಡೆದುಹಾಕುವ ಸಂದೇಶವನ್ನು ಒಳಗೊಂಡಿವೆ” ಎಂದು ಅವರು ಹೇಳಿದರು.

“ಶ್ರೀಕೃಷ್ಣನು ಜೀವನದ ಪ್ರತಿಯೊಂದು ಅಂಶವನ್ನು ಮುಟ್ಟುತ್ತಾನೆ – ಬಾಲ್ಯ, ಯೌವನ, ರಾಜಕೀಯ, ಭಕ್ತಿ, ಜ್ಞಾನ, ಕರ್ಮ ಮತ್ತು ನಿಸ್ವಾರ್ಥ ಸೇವೆ. ಶ್ರೀ ಕೃಷ್ಣನ ಬಾಲ್ಯದ ಲೀಲೆಗಳಿಂದ ಹಿಡಿದು ಮಹಾಭಾರತ ಯುದ್ಧದವರೆಗಿನ ಜೀವನವು ಒಂದು ಆಳವಾದ ಮತ್ತು ಸ್ಪೂರ್ತಿದಾಯಕ ಪ್ರಯಾಣವನ್ನು ಚಿತ್ರಿಸುತ್ತದೆ ಮತ್ತು ನಮ್ಮನ್ನು ಮತ್ತು ಯುವಕರನ್ನು ಭಕ್ತರು, ಕರ್ತವ್ಯನಿಷ್ಠರು, ನಿರ್ಭೀತರು ಮತ್ತು ವಿವೇಕಯುತ ಕರ್ಮಯೋಗಿಗಳಾಗಲು ಪ್ರೇರೇಪಿಸುತ್ತದೆ” ಎಂದು ತಿಳಿಸಿದರು.

“ಮಹಾಭಾರತ ಯುದ್ಧದ ಸಮಯದಲ್ಲಿ, ಅರ್ಜುನನು ಸಂದಿಗ್ಧ ಸ್ಥಿತಿಯಲ್ಲಿದ್ದಾಗ ಮತ್ತು ತನ್ನ ಸ್ವಂತ ಸಂಬಂಧಿಕರ ವಿರುದ್ಧ ಹೋರಾಡಲು ಹಿಂಜರಿದಾಗ, ಕೃಷ್ಣನು ಅವನಿಗೆ “ಭಗವದ್ಗೀತೆ”ಯ ಉಪದೇಶವನ್ನು ನೀಡಿದನು. ಪ್ರಸ್ತುತ ಸಮಾಜದಲ್ಲಿ ದಿಗ್ಭ್ರಮೆ, ಅಸಹಿಷ್ಣುತೆ ಮತ್ತು ಸ್ವಯಂ-ಮರೆವಿನ ಭಾವನೆ ಹೆಚ್ಚುತ್ತಿರುವಾಗ, ಗೀತೆಯ ಶ್ಲೋಕ “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ್” ನಮಗೆ ದಾರಿ ತೋರಿಸುತ್ತದೆ. ಮನುಷ್ಯನು ಫಲಿತಾಂಶಗಳ ಬಗ್ಗೆ ಚಿಂತಿಸದೆ ಕರ್ಮಯೋಗ, ಜ್ಞಾನಯೋಗ ಮತ್ತು ಭಕ್ತಿಯೋಗಗಳ ಮೂಲಕ ತನ್ನ ಕರ್ತವ್ಯಗಳನ್ನು ನಿಸ್ವಾರ್ಥವಾಗಿ ನಿರ್ವಹಿಸಬೇಕು ಎಂದು ಶ್ರೀ ಕೃಷ್ಣನು ಬೋಧಿಸಿದನು. ಗೀತೆಯಲ್ಲಿ, ಶ್ರೀ ಕೃಷ್ಣನು ಆತ್ಮದ ಅಮರತ್ವ, ಜೀವನದ ಉದ್ದೇಶ ಮತ್ತು ಧರ್ಮವನ್ನು ಅನುಸರಿಸುವ ಮಹತ್ವವನ್ನು ಒತ್ತಿಹೇಳಿದ್ದಾನೆ. ಧರ್ಮ, ಭಕ್ತಿ ಮತ್ತು ಸತ್ಕಾರ್ಯಗಳು ಮಾತ್ರ ಜೀವನವನ್ನು ಯಶಸ್ವಿಗೊಳಿಸುತ್ತವೆ. ಅವರ ಬೋಧನೆಗಳು ಇಂದಿನ ಯುಗದಲ್ಲೂ ಅಷ್ಟೇ ಪ್ರಸ್ತುತವಾಗಿವೆ” ಎಂದು ಅಭಿಪ್ರಾಯಪಟ್ಟರು.

“ಈ ಮಂಡಲೋತ್ಸವದ ಮೂಲಕ, ಎಲ್ಲರೂ ಶ್ರೀಕೃಷ್ಣ ಪರಮಾತ್ಮನು ತೋರಿಸಿದ ಮಾರ್ಗವನ್ನು ಅನುಸರಿಸುವ ಮೂಲಕ ಜೀವನವನ್ನು ಯಶಸ್ವಿಗೊಳಿಸಿಕೊಳ್ಳಬೇಕು ಮತ್ತು ನಡವಳಿಕೆ ಮತ್ತು ಆಲೋಚನೆಗಳಲ್ಲಿ ಸದಾಚಾರವನ್ನು ತಂದುಕೊಂಡು ಧರ್ಮ ಮಾರ್ಗದಲ್ಲಿ ನಡೆದು ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದು ರಾಜ್ಯಪಾಲರು ಕರೆ ನೀಡಿದರು.

ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪೂಜ್ಯ ವಿಶ್ವಪ್ರಿಯ ತೀರ್ಥ ಸ್ವಾಮಿಜಿ, ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು, ಶಾಸಕ ಯಶಪಾಲ್ ಸುವರ್ಣ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles