ಸಾಹಿತಿ, ಶ್ರೇಷ್ಠ ಕನ್ನಡತಿ ಡಾ. ಸುಧಾಮೂರ್ತಿ ಅಸಾಮಾನ್ಯ ಸಾಧಕರು:ಸುರೇಶ್ ಎನ್ ಋಗ್ವೇದಿ

ಚಾಮರಾಜನಗರ: ಕನ್ನಡದ ಹೆಮ್ಮೆಯ ಸಾಹಿತಿ ,ಶ್ರೇಷ್ಠ ಕನ್ನಡತಿ ಡಾ. ಸುಧಾಮೂರ್ತಿ ಕನ್ನಡದ ಅಸಾಮಾನ್ಯ ಸಾಧಕರು. ಕನ್ನಡ ಇಂಗ್ಲಿಷ್, ಮರಾಠಿ, ಭಾಷೆಯ ಲೇಖಕರಾಗಿ, ಸಮಾಜ ಸೇವಕರಾಗಿ ಸೇವೆ ಸಲ್ಲಿಸುತ್ತಿರುವ ಸುಧಾ ಮೂರ್ತಿ ಕನ್ನಡಿಗರ ಶ್ರೇಷ್ಠ ಚಿಂತಕರು, ಸರಳ ಸಜ್ಜನರಾಗಿದ್ದಾರೆ ಎಂದು ಸಂಸ್ಕೃತಿ ಚಿಂತಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಡಾ. ಸುಧಾ ಮೂರ್ತಿ ರವರ ಸಾಹಿತ್ಯ ಕೊಡುಗೆಗಳು ಹಾಗೂ ಸಮಾಜ ಸೇವೆಯ ಮಹತ್ವ ಕುರಿತು ಮಾತನಾಡುತ್ತ, ಸುಧಾ ಮೂರ್ತಿ ಅವರು ಸುಮಾರು 19ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ .ಅವರ ಕಥೆ ,ಕಾದಂಬರಿ, ಚಿಂತನೆ ಹಾಗೂ ಮಕ್ಕಳ ಸರಣಿಯ ಪುಸ್ತಕಗಳು ವಿಶ್ವ ಪ್ರಸಿದ್ಧಿ ಯಾಗಿದೆ. ನುಡಿದಂತೆ ನಡೆಯುವ ಆದರ್ಶ ಸರಳ ಬದುಕಿನ ಸುಧಾ ಮೂರ್ತಿಯವರು ಕನ್ನಡ ನಾಡಿನ ಹೆಮ್ಮೆಯ ತಾಯಿ. ನನ್ನ ಅಜ್ಜಿಗೆ ನಾನು ಹೇಗೆ ಓದಲು ಕಲಿಸಿದೆ ಮತ್ತು ಇತರ ಕಥೆಗಳು 15 ಭಾಷೆಗೆ ಭಾಷಾಂತರಗೊಂಡಿದೆ. ಅವಿಭಕ್ತ ಕುಟುಂಬದಲ್ಲಿ ಅಜ್ಜಿಯ ಪಾತ್ರ, ಕುಟುಂಬ ನಿರ್ವಹಣೆ, ಅಜ್ಜಿಯ ಪ್ರೀತಿ, ಕರುಣೆ, ವಿಶ್ವಾಸ ನಂಬಿಕೆ ,ಧೈರ್ಯ ಎಲ್ಲವನ್ನು ಅರ್ಥಗರ್ಭಿತವಾಗಿ ತಿಳಿಸಿ ಸಮಾಜಕ್ಕೆ ಕುಟುಂಬ ಪ್ರಜ್ಞೆಯನ್ನು ಹೆಚ್ಚಿಸಿರುವ ಸುಧಾ ಮೂರ್ತಿಯವರು ಹಕ್ಕಿಯ ತೆರದಲ್ಲಿ, ಶಾಲಾ ಮಕ್ಕಳಿಗಾಗಿ ಕಂಪ್ಯೂಟರ್ ,ಕಾವೇರಿಯಿಂದ ಮೇ ಕಾಂಗಿಗೆ, ಡಾಲರ್ ಸೊಸೆ, ಋಣ, ಮಹಾಶ್ವೇತೆ ,ಮನದ ಮಾತು ಗುಟ್ಟೊಂದು ಹೇಳುವೆ ಮುಂತಾದ ಪುಸ್ತಕಗಳು ಜನಪ್ರಿಯವಾಗಿವೆ. ಅಸಾಮಾನ್ಯ ಸಾಧಕರಾಗಿ ಲೇಖಕರಾಗಿ, ಸಮಾಜ ಸೇವಕರಾಗಿ ದಾನಿಗಳಾಗಿ ,ಗ್ರಾಮೀಣ ಅಭಿವೃದ್ಧಿ, ಗ್ರಂಥಾಲಯ ,ಶಾಲಾ ಶಿಕ್ಷಣ, ಹಾಗೂ ದಾನಕ್ಕೆ ಹೆಸರಾಗಿ ನಾಡಿನ ಕಷ್ಟಗಳಿಗೆ ಸದಾ ಕಾಲ ಸ್ಪಂದಿಸುವ ಸುಧಾ ಮೂರ್ತಿಯವರು ಅಮೂಲ್ಯವಾದ ನೀತಿಗಳನ್ನು ತಿಳಿಸಿದ್ದಾರೆ. ಸುಧಾ ಮೂರ್ತಿ ಅವರ ಪಂಚ ಸೂತ್ರಗಳು ಜಗತ್ಪ್ರಸಿದ್ಧವಾಗಿದೆ. ಬೇರೆಯವರಿಗೆ ನೆರವಾಗಿ, ದಯೆ ತೋರಿ, ಪರಸ್ಪರ ಶಕ್ತಿ ಮತ್ತು ದೌರ್ಬಲ್ಯವನ್ನು ಸ್ವೀಕರಿಸಿ .ಧನಾತ್ಮಕ ಚಿಂತನೆ ಮಾಡಿ. ನಿಮ್ಮದೇ ರೀತಿಯಲ್ಲಿ ಜೀವನ ಸಾಗಿಸಿ ,ಮುಂತಾದ ಅವರ ಚಿಂತನೆಗಳು ಸಮಾಜಕ್ಕೆ ಉನ್ನತವಾದ ಮಾರ್ಗದರ್ಶನ ನೀಡಿದೆ .ಇವರ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು, ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು, ವಿವಿಧ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಪಾರ ಜ್ಞಾನಿಗಳಾಗಿ, ಸರಳ ಸಜ್ಜನ ಬದುಕನ್ನು ನಡೆಸುತ್ತಿರುವ ಸುಧಾ ಮೂರ್ತಿ ನಮ್ಮೆಲ್ಲರ ಹೆಮ್ಮೆ ಎಂದು ಋಗ್ವೇದಿ ತಿಳಿಸಿದರು.

ಅಖಿಲ ಕರ್ನಾಟಕ ಕನ್ನಡ ಮಹಾಸಭೆಯ ರಾಜ್ಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡರವರು ಸುಧಾ ಮೂರ್ತಿ ಅವರ ಪುಸ್ತಕದ ಸಾಲುಗಳನ್ನು ಓದುವ ಮೂಲಕ ಉದ್ಘಾಟಿಸಿ, ಆಧುನಿಕ ಪ್ರಪಂಚದಲ್ಲಿ ಅತ್ಯಂತ ಶ್ರೀಮಂತಿಕೆಯನ್ನು ಹೊಂದಿ ಸರಳವಾದ ಬದುಕನ್ನು ನಡೆಸುತ್ತಿರುವ ಸುಧಾ ಮೂರ್ತಿಯವರು ಒಂದು ರೀತಿಯಲ್ಲಿ ಮಹಾತ್ಮ ಗಾಂಧಿಯವರಂತೆ ಬದುಕಿ, ಸಮಾಜಕ್ಕೆ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಸರಳತೆಗೆ ಸಾಕ್ಷಿಯಾಗಿರುವ ಸುಧಾ ಮೂರ್ತಿ ಆಡಂಬರದ ಜೀವನದಿಂದ ದೂರವಿರುವಂತೆ ಯುವಕರಿಗೆ ಸದಾ ಕಾಲ ದಾರಿದೀಪವಾಗಿದ್ದಾರೆ. ಅಹಂಕಾರವನ್ನು ಬಿಟ್ಟು, ಸರಳತೆಯ ಮೂಲಕ ಶ್ರೇಷ್ಠ ಬದುಕನ್ನು ನಡೆಸಬಹುದು ಎಂಬುದು ಸುಧಾ ಮೂರ್ತಿ ಅವರ ಜೀವನ ಮತ್ತು ಬದುಕಿನಿಂದ ಅರ್ಥವಾಗುತ್ತದೆ ಎಂದು ತಿಳಿಸಿದರು. ಭಾರತ ದೇಶದ ಪ್ರಮುಖ ಸಮಾಜಸೇವಕರಾಗಿ ಕಲೆ ಸಾಹಿತ್ಯ, ಸಂಗೀತ, ಶಿಕ್ಷಣ, ಕಂಪ್ಯೂಟರ್ ಎಲ್ಲ ಕ್ಷೇತ್ರಗಳಲ್ಲಿ ಅವರ ಸೇವೆ ಮರೆಯಲಾಗದು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಋಗ್ವೇದಿಯವರು ಸುಧಾ ಮೂರ್ತಿ ಅವರ ಸಾಹಿತ್ಯ ಕೊಡುಗೆ ಮತ್ತು ಸಮಾಜ ಸೇವೆ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ರೂಪಿಸಿ ಸಮಾಜಕ್ಕೆ ಅರ್ಥಗರ್ಭಿತವಾದ ಕಾರ್ಯಕ್ರಮವನ್ನು ನೀಡಿದ್ದಾರೆ ಎಂದು ತಿಳಿಸಿದರು.

ಹಿರಿಯ ಕನ್ನಡ ಚಳುವಳಿಗಾರ ರಾಜಗೋಪಾಲ್ ರವರು ಸುಧಾ ಮೂರ್ತಿ ಅವರ ಜನ್ಮದಿನದ ಅಂಗವಾಗಿ ಸಿಹಿ ಹಂಚಿ ಪುಸ್ತಕಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರಪ್ರಸಾದ್, ಬಿಕೆ ಆರಾಧ್ಯ ,ಸರಸ್ವತಿ ,ಶಿವಲಿಂಗ ಮೂರ್ತಿ , ಪಣ್ಯದ ಹುಂಡಿ ರಾಜು, ಮಹೇಶ್ ಗೌಡ ,ಸುರೇಶ್ ಗೌಡ, ಮನೋಜ್ ,ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles