ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವಕ್ಕೆಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ

ರಾಯಚೂರು : ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿಯಾದ ಸುಬುದೇಂಧ್ರತೀರ್ಥ ಸ್ವಾಮೀಜಿ ಧ್ವಜಾರೋಹಣ ನೆರವೇರಿಸುವ ಮೂಲಕ ಶುಕ್ರವಾರ ಸಂಜೆ ಚಾಲನೆ ನೀಡಿದರು.

ಇದಕ್ಕೂ ಪೂರ್ವದಲ್ಲಿ ರಾಯರ ಮೂಲವೃಂದಾವನಕ್ಕೆ ಪೂಜೆ ಸಲ್ಲಿಸಿದರು. ನಂತರ ಗೋಪೂಜೆ, ಅಶ್ವಪೂಜೆ ನೆರವೇರಿಸಿ, ಯೋಗೇಂದ್ರ ಮಂಟಪದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಸಪ್ತರಾತ್ರೋತ್ಸವಕ್ಕೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ, ಇಂದಿನಿಂದ ಏಳು ದಿನಗಳ ಕಾಲ ಸಪ್ತರಾತ್ರೋತ್ಸವ ಅತ್ಯಂತ ವೈಭವದಿಂದ ಜರುಗಲಿದೆ ಎಂದರು.

ದೇಶವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದು ಅವರಿಗೆಲ್ಲ ವಸತಿ, ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದೆ. ಆಗಮಿಸುವ ಭಕ್ತರು ಗುರುರಾಘವೇಂದ್ರರ ಕೃಪೆಗೆ ಪಾತ್ರರಾಗಬೇಕೆಂದು ಹೇಳಿದರು.

ಪ್ರಥಮದಿನದ ಅಂಗವಾಗಿ ಮಾಲೂರಿನ ಪ್ರಸನ್ನ ಕೊರ್ತಿ ದಾಸವಾಣಿ ಪ್ರಸ್ತುತ ಪಡಿಸಿದರು. ಧರ್ಮಾವರಂನ ಲಲಿತಾ ಕಲಾನಿಕೇತನ ಇವರು ಕುಚಪುಡಿ ಸೇವೆ ಸಲ್ಲಿಸಿದರು.

ನಂತರ ರಜತ ರಥೋತ್ಸವ, ಸುವರ್ಣ ರಥೋತ್ಸವ, ಆನೆ ಅಂಬಾರಿ ಸೇವೆ ಜರುಗಿತು. ಮಠದ ಕಂಬಗಳಿಗೆ ಸುವರ್ಣ ಲೇಪಿತ ಕವಚಗಳನ್ನು ಅಳವಡಿಸಲಾಯಿತು.
೦-೦-೦-೦

 

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles