ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ ಎಪಿಎಸ್ ಆಡಿಟೋರಿಯಂನಲ್ಲಿ(APS Auditorium) ಆಯೋಜಿಸಿದ್ದ “ನಾದ ನಮನ”(Naada Namana) ಸಂಗೀತ ಕಾರ್ಯಕ್ರಮ ಸಂಗೀತಾಸಕ್ತರಿಗೆ ಅಪೂರ್ವ ಸಂಗೀತ ರಸದೌತಣವನ್ನು ಉಣಬಡಿಸಿತು.
ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಹಾಗೂ ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್ಕುಮಾರ್ ಅವರ ಅಮರ ಗೀತೆಗಳಿಗಾಗಿ ಈ ಕಾರ್ಯಕ್ರಮವನ್ನು ಸಮರ್ಪಿಸಲಾಗಿತ್ತು.
ಗಾಯಕರಾದ ಕಿರಣ್, ರಮೇಶ್, ಸಿರಿ ಹಾಗೂ ಲಕ್ಷ್ಮಿ ಅವರು ಎಸ್. ಜಾನಕಿ ಮತ್ತು ಡಾ. ರಾಜ್ಕುಮಾರ್ ಅವರ ಜನಪ್ರಿಯ ಗೀತೆಗಳನ್ನು ಮನೋಜ್ಞವಾಗಿ ಹಾಡಿ ಪ್ರೇಕ್ಷಕರನ್ನು ಸಂಗೀತ ಲೋಕಕ್ಕೆ ಕರೆದೊಯ್ದರು. ಅವರ ಸುಮಧುರ ಗಾಯನಕ್ಕೆ ಸಭಾಂಗಣದಲ್ಲಿ ಸಂಗೀತಾಸಾಕ್ತರು ಹುಚ್ಚೆದ್ದು ಕುಣಿದರು.
ಕಾರ್ಯಕ್ರಮದ ನಿರೂಪಕರಾದ ಸಾವಿತಾ ಅವರು ಪ್ರತಿಯೊಂದು ಹಾಡಿನ ಹಿನ್ನೆಲೆ, ಗೀತರಚನೆಕಾರರಾದ ದಿವಂಗತ ಚಿ. ಉದಯಶಂಕರ್ ಹಾಗೂ ಕೆ. ಸೀತಾರಾಮ ಶಾಸ್ತ್ರಿ ಅವರ ಸಾಹಿತ್ಯ ವೈಶಿಷ್ಟ್ಯವನ್ನು ಮನಮುಟ್ಟುವ ರೀತಿಯಲ್ಲಿ ಪರಿಚಯಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.
ಕಾರ್ಯಕ್ರಮವನ್ನು ಎಪಿಎಸ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಸಿಎ ಡಾ. ವಿಷ್ಣು ಭರತ್ ಆಲಂಪಳ್ಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಗಾತಿ ವೆಂಕಟೇಶ್, ಎಚ್.ಸಿ. ಕೃಷ್ಣ, ಲಕ್ಷ್ಮೀಕಾಂತ್, ಕಿರಣ್ ಕುಮಾರ್, ರಮೇಶ್ ಚಂದ್ರ ಹಾಗೂ ಮೇದಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
600 ಆಸನಗಳ ಸಾಮರ್ಥ್ಯ ಹೊಂದಿರುವ ಎಪಿಎಸ್ ಆಡಿಟೋರಿಯಂ ಸಂಪೂರ್ಣ ಭರ್ತಿಯಾಗಿದ್ದು, ಕಾರ್ಯಕ್ರಮಕ್ಕೆ ಸಂಗೀತಾಭಿಮಾನಿಗಳಿಂದ ದೊರೆತ ಅಭೂತಪೂರ್ವ ಸ್ಪಂದನೆಗೆ ಸಾಕ್ಷಿಯಾಯಿತು. ನೆನಪುಗಳನ್ನು ಮರುಕಳಿಸಿದ ಸುಮಧುರ ಗೀತೆಗಳನ್ನು ಆಲಿಸಿದ ಪ್ರೇಕ್ಷಕರು ಪ್ರತಿಯೊಂದು ಗಾಯನಕ್ಕೂ ಹರ್ಷೋದ್ಗಾರ ಹಾಗೂ ಭರ್ಜರಿ ಕರತಾಡನದ ಮೂಲಕ ಕಲಾವಿದರನ್ನು ಅಭಿನಂದಿಸಿದರು.
ಕನ್ನಡ ಸಂಗೀತದ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಈ ವಿಶೇಷ ಸಂಗೀತ ಸಂಜೆ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದ ನೆನಪುಗಳನ್ನು ಮೂಡಿಸಿ ಯಶಸ್ವಿಯಾಗಿ ಸಂಪನ್ನಗೊಂಡಿತು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles