ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗೆ ಅವಕಾಶ

ಬೆಂಗಳೂರು: ನಮ್ಮ ಹೆಮ್ಮೆಯ ರಾಜ್ಯದ ನಂದಿನಿ ಉತ್ಪನ್ನಗಳನ್ನು ಕಡೆಗಣಿಸಿ, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆಗಳನ್ನು ತೆರೆಯಲು ನಮ್ಮ ಮೆಟ್ರೋ ಮುಂದಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣದಲ್ಲಿ 20 ನಂದಿನಿ ಮಳಿಗೆಗಳನ್ನು ರಿಯಾಯಿತಿ ದರದಲ್ಲಿ ತೆರೆಯಲು ಬಿ.ಎಂ.ಆರ್.ಸಿ.ಎಲ್. ಒಪ್ಪಿದೆ.
ಃಒಖಅಐ ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಅಮೂಲ್ ಸಂಸ್ಥೆಯ ಕಿಯೋಸ್ಕ÷್ಗಳನ್ನು ತೆರೆಯಲು ಅವಕಾಶ ಕೊಟ್ಟಿತ್ತು. ಈ ಬಗ್ಗೆ ಗುಜರಾತ್ ಮಿಲ್ಕ್ ಫೆಡರೇಶನ್ ಜೊತೆ ಒಪ್ಪಂದಕ್ಕೆ ಸಹಿ ಕೂಡ ಹಾಕಿತ್ತು. ರಾಜ್ಯದ ರೈತರ ಹೆಮ್ಮೆಯ ಕೆಎಂಎಫ್ ನಂದಿನಿಗೆ ಮಣೆ ಹಾಕಿರಲಿಲ್ಲ.
ಬಿ.ಎಂ.ಆರ್.ಸಿ.ಎಲ್. ನಿರ್ಧಾರದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಪ್ರವೇಶಿಸಿ, ಬಿ.ಎಂ.ಆರ್.ಸಿ.ಎಲ್.ಗ್ಲೋಬಲ್ ಟೆಂಡರ್ ಕರೆದಿದ್ದÄಂಟು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿ.ಎಂ.ಆರ್.ಸಿ.ಎಲ್. ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಹಾಗೂ ಕೆಎಂಎಫ್ ಎಂಡಿ ಶಿವಸ್ವಾಮಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಡಿ.ಕೆ. ಶಿವಕುಮಾರ್ ಅವರು ಹೇಳಿದಂತೆ 8 ಕಡೆ ನಂದಿನಿ ಮಳಿಗೆಗಳು ಓಪನ್ ಮಾಡಲು ಹಾಗೂ ಸರ್ಕಾರದ ನಿರ್ದೇಶನದಂತೆ 2 ಕಡೆಗಳಲ್ಲಿ ಮಾತ್ರ ಅಮೂಲ್‌ಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
ಕೆಎAಎಫ್‌ನ ಶಿವಸ್ವಾಮಿ ಅವರು ಮಾತನಾಡಿ, ನಗರದ 20 ಮೆಟ್ರೋ ನಿಲ್ದಾಣದಲ್ಲಿ ರಿಯಾಯಿತಿ ದರದಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ಕೊಡ್ತೇವೆ. ಈ ಹಿಂದೆ 2020-22ರ ಅವಧಿಯಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮಳಿಗೆ ತೆರೆಯಲು ಬಿ.ಎಂ.ಆರ್.ಸಿ.ಎಲ್. ಟೆಂಡರ್ ಕರೆದಿತ್ತು. ಆಗ ಕೆಎಂಎಫ್ ಈ ಟೆಂಡರ್‌ನಲ್ಲಿ ಭಾಗಿ ಆಗಿರಲಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಕೂಡಾ ಇರಲಿವೆ ಎಂದು ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles