Narendra Modi 75: ಇವರು ಯಾರು ಬಲ್ಲಿರಾ? ಯಾಕೀ ಕಸರತ್ತು ಗೊತ್ತಾ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ (PM Narendra Modi birthday) ಇದೇ ತಿಂಗಳ 17 ರಂದು 75 ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಭಾರತ ಕಂಡ ಅಪರೂಪದ ಪ್ರಧಾನಿಯ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಗೌರವಾರ್ಥವಾಗಿ (PM Narendra Modi 75) ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ -BJYM) ಈ ವರ್ಷವೂ ಸಮಾಜಸೇವೆಯ ಅಂಗವಾಗಿ ಸೇವಾ ಪಖ್ವಾಡಾ (seva pakhwada 2025) ಹಮ್ಮಿಕೊಂಡಿದೆ. ಈ ಬಾರಿ ಸೇವಾ ಪಖ್ವಾಡಾದ ಭಾಗವಾಗಿ ನಡೆಯುವ ಬಿಜೆವೈಎಂ ನಮೋ ಯುವ ಓಟವು ನಶಾ ಮುಕ್ತ ಭಾರತಕ್ಕಾಗಿ ಎಂಬ ಘೋಷವಾಕ್ಯವನ್ನು ಹೊಂದಿದೆ. ಈ ಕುರಿತು ಬೆಂಗಳೂರು ದಕ್ಷಿಣ ಸಂಸದ ಹಾಗೂ ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ (MP Tejasvi Surya) ಅವರು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

Narendra Modi 75 BJYM NaMo Yuva national run ambassador Milind Soman and Tejasvi Surya participate in press conference 4

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಶ್ರೀ ಮನ್ಸುಖ್ ಮಾಂಡವೀಯ (Union Minister for Youth Affairs and Sports Mansukh Mandaviya) ಮತ್ತು ಶ್ರೀ ಮಿಲಿಂದ್ ಸೋಮನ್ (Milind Soman) ಅವರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿ ಸಂದರ್ಭದಲ್ಲಿ ವೇದಿಕೆ ಮೇಲಿಂದಲೇ ತೇಜಸ್ವಿ ಸೂರ್ಯ ಮತ್ತು ಮಿಲಿಂದ್ ಸೋಮನ್ ಅವರು ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರಚುರಪಡಿಸಿದರು.

ಈ ಓಟವು ಸೆಪ್ಟೆಂಬರ್ 21, 2025 ರಂದು ನಿಗದಿಯಾಗಿದ್ದು, ದೇಶಾದ್ಯಂತ ಏಕಕಾಲದಲ್ಲಿ 100 ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪ್ರತಿ ಕಾರ್ಯಕ್ರಮದಲ್ಲಿ ತಲಾ ಕನಿಷ್ಠ 10,000 ಮಂದಿ ಭಾಗವಹಿಸುವ ಗುರಿ ಹೊಂದಿದೆ. ದಶಕಗಳ ಕಾಲದ ಫಿಟ್‌ನೆಸ್ ಐಕಾನ್, ಬಾಲಿವುಡ್‌ ನಟ ಮಿಲಿಂದ್ ಸೋಮನ್ ಅವರು ದೇಶಾದ್ಯಂತ ಯುವಕರನ್ನು ತಮ್ಮ ಫಿಟ್‌ನೆಸ್ ಮತ್ತು ಅಥ್ಲೆಟಿಕ್ ಸಾಮರ್ಥ್ಯಗಳಿಂದ ಪ್ರೇರೇಪಿಸುವ ರಾಷ್ಟ್ರೀಯ ಓಟದ ರಾಯಭಾರಿಯಾಗಿದ್ದಾರೆ.

ಈ ಓಟವು 10 ಲಕ್ಷಕ್ಕೂ ಹೆಚ್ಚು ಯುವಕರನ್ನು ತೊಡಗಿಸಿಕೊಳ್ಳುತ್ತದೆ ಮತ್ತು ಭಾರತದ ಅತಿದೊಡ್ಡ ಯುವ ಫಿಟ್‌ನೆಸ್ ಮತ್ತು ಜಾಗೃತಿ ಅಭಿಯಾನದ ಹಿಂದಿನ ಪ್ರೇರಕ ಶಕ್ತಿಯಾಗಿ ಬಿಜೆವೈಎಂ ತನ್ನ ಪಾತ್ರವನ್ನು ಬಲಪಡಿಸುತ್ತದೆ ಎಂದು BJYM ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ನಮ್ಮ ರಾಷ್ಟ್ರದ ಭವಿಷ್ಯವು ಯುವಜನತೆಯನ್ನು ಅವಲಂಬಿಸಿದೆ. ಹಾಗಾಗಿ ಈ ಆಂದೋಲನವು ಬಿಜೆವೈಎಂ ಧ್ಯೇಯಕ್ಕೆ ಅನುಗುಣವಾಗಿ ಆರೋಗ್ಯಕರ ಮತ್ತು ಸದೃಢ ಭಾರತ ನಿರ್ಮಾಣಕ್ಕೆ ಅನುಗುಣವಾಗಿದೆ ಎಂದು ತೇಜಸ್ವಿ ತಿಳಿಸಿದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles